ಮಂಗಳೂರು ನಿವೃತ್ತ ಪ್ರೊಫೆಸರ್ ಖ್ಯಾತ ಸಾಹಿತಿ ಪ್ರೊ.ಅಮೃತ ಸೋಮೇಶ್ವರ ನಿಧನ

Saturday, January 6th, 2024
ಮಂಗಳೂರು ನಿವೃತ್ತ ಪ್ರೊಫೆಸರ್ ಖ್ಯಾತ ಸಾಹಿತಿ ಪ್ರೊ.ಅಮೃತ ಸೋಮೇಶ್ವರ ನಿಧನ

ಉಳ್ಳಾಲ: ಖ್ಯಾತ ಸಾಹಿತಿ ಪ್ರೊ.ಅಮೃತ ಸೋಮೇಶ್ವರ (88) ಅವರು ಶನಿವಾರ ಬೆಳಿಗ್ಗೆ ತಮ್ಮ ಸ್ವಗೃಹ ಸೋಮೇಶ್ವರದ “ಒಲುಮೆ”ಯಲ್ಲಿ ನಿಧನರಾದರು. ನಿಧನರಾದರು. ಕನ್ನಡ, ತುಳು ಸಾಹಿತಿ, ಯಕ್ಷಗಾನ ಪ್ರಸಂಗ ಮೊದಲಾದ ಸಾಹಿತ್ಯ ಲೋಕಕ್ಕೆ ಅಪಾರ ಸೇವೆಯನ್ನು ನೀಡಿದ್ದರು. ಮಂಗಳೂರು ತಾಲೂಕಿನ ಸೋಮೇಶ್ವರ ಗ್ರಾಮದ ಅಡ್ಕ ನಿವಾಸಿಯಾಗಿರುವ ಅಮೃತ ಸೋಮೇಶ್ವರ ಅವರು 1935 ಸೆಪ್ಟೆಂಬರ್ 27‌ ರಂದು ಜನಿಸಿದರು. ತಮ್ಮ ಬಾಲ್ಯವನ್ನು ಮುಂಬೈಯಲ್ಲಿ ಕಳೆದ ಅಮೃತರು, ಐದು ವರ್ಷವಾಗುವಾಗ ಊರಿಗೆ ಮರಳಿ, ಕೋಟೆಕಾರಿನಲ್ಲಿರುವ ಸ್ಟೆಲ್ಲಾ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ […]

ಕಾಸರಗೋಡಿನ ಕನ್ನಡ ಹೋರಾಟಗಾರ ಎಸ್. ವಿ ಭಟ್ ನಿಧನ

Sunday, September 10th, 2023
SV-Bhat

ಕಾಸರಗೋಡು : ಕಾಸರಗೋಡಿನಲ್ಲಿ ಕನ್ನಡಕ್ಕೆ ಶಕ್ತಿ ಮೀರಿ ದುಡಿಯುತ್ತಿದ್ದವರು. ಕನ್ನಡ ಶಾಲೆಗಳ ಉಳಿವಿಗೆ ಬಹಳ ಹೋರಾಟ ಮಾಡಿ ಕನ್ನಡದ ಅಸ್ಮಿತೆಗೆ ಶಕ್ತಿ ತುಂಬಿದ ವ್ಯಕ್ತಿ . ಎಸ್. ವಿ ಭಟ್ (72) ಅವರು ಹೃದಯಾಘಾತದಿಂದ ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಬೀರಂತಬೈಲ್ ನಿವಾಸಿಯಾಗಿದ್ದ ಭಟ್ ರವರು ಕುಂಬಳೆ, ಅಡೂರು, ಕಾಸರಗೋಡು ಸೇರಿದಂತೆ ಜಿಲ್ಲೆಯ ಹಲವೆಡೆ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕ ಅಧ್ಯಕ್ಷ ರಾಗಿ ಕನ್ನಡ ಹೋರಾಟಗಾರಾಗಿ, ಜಿಲ್ಲಾ […]

ಕನ್ನಡ, ತುಳು ಸಿನೆಮಾ ನಟ, ನಿರ್ದೇಶಕ ಶರತ್ ಚಂದ್ರ ಕದ್ರಿ ಇನ್ನಿಲ್ಲ

Monday, January 10th, 2022
sharathchandra Kadri

ಮಂಗಳೂರು : ಕನ್ನಡ, ತುಳು ಹಾಗೂ ತಮಿಳು ಚಿತ್ರಗಳಲ್ಲಿ ನಟಿಸಿದ ಹಾಗೂ ನೂರಕ್ಕೂ ಹೆಚ್ಚು ನಾಟಕ ಗಳನ್ನು ರಚಿಸಿ ಅಭಿನಯಿಸಿದ ಹಿರಿಯ ನಟ ಹಾಗೂ ನಿರ್ದೇಶಕ ಶರತ್ ಚಂದ್ರ ಕದ್ರಿ ಅವರು ಭಾನುವಾರ ಬೆಳಿಗ್ಗೆ 4.30  ಕ್ಕೆ ತಮ್ಮ ಸ್ವ ಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ಕೆ.ಏನ್ ಟೈಲರ್ ನಾಟಕಗಳ ಮೂಲಕ ನಾಯಕ ನಟನಾಗಿ ರಂಗಭೂಮಿ ಪ್ರವೇಶಿಸಿದ ಶರತ್ ಚಂದ್ರ ಕದ್ರಿ ಕನ್ನಡದ ಕತ್ತೆಗಳು ಸಾರ್ ಕತ್ತೆಗಳು ಸಿನೆಮಾದ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದರು. ತುಳುವಿನ ಕಟಪಾಡಿ ಕಟ್ಟಪ್ಪಾ, ದೊಂಬರಾಟ ಮೊದಲಾದ ಚಿತ್ರಗಳಲ್ಲಿ […]

ನಟಿ ವಿನ್ನಿ ಫರ್ನಾಂಡಿಸ್‌ ಗೆ ಹೃದಯಾಘಾತ

Thursday, July 29th, 2021
Vinni - Fernandes

ಮಂಗಳೂರು : ಕನ್ನಡ, ತುಳು, ಕೊಂಕಣಿ ಭಾಷೆಯ ಸಿನಿಮಾ, ನಾಟಕ, ಧಾರಾವಾಹಿಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದ ನಟಿ ವಿನ್ನಿ ಫರ್ನಾಂಡಿಸ್‌ (63) ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿನ್ನಿ ಕೊಂಕಣಿ ನಾಟಕಗಳಲ್ಲಿನ ಪಾತ್ರಗಳೊಂದಿಗೆ ನಟನಾ ವೃತ್ತಿಜೀವನವನ್ನು ಪ್ರಾರಂಭಿಸಿದ ಅವರು ನಂತರ ತುಳು ಮತ್ತು ಕನ್ನಡ ನಾಟಕಗಳಲ್ಲೂ ಅಭಿನಯಿಸಿದ್ದರು. ಹಾಸ್ಯ, ಸಾಮಾಜಿಕ ಪಾತ್ರಗಳಲ್ಲಿ ಹೆಚ್ಚು ಪ್ರಸಿದ್ಧಿಯಾಗಿದ್ದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನೂ ಪಡೆದಿದ್ದರು. ಪತಿ ವಿನ್ಸೆಂಟ್‌, ಮಕ್ಕಳಾದ ಪ್ರತಾಪ್‌, ಬಬಿತಾ ಅವರನ್ನು ಅಗಲಿದ್ದಾರೆ.    

ಕೇರಳದಲ್ಲಿ ಕನ್ನಡ ಸಂಪೂರ್ಣ ನಿರ್ನಾಮ, ಮಂಜೇಶ್ವರದ ಗ್ರಾಮಗಳ ಕನ್ನಡದ ಹೆಸರುಗಳ ಮಲಯಾಳೀಕರಣ

Saturday, June 26th, 2021
Kerala-Kannada

ಮಂಜೇಶ್ವರ : ಕೇರಳದಲ್ಲಿ ಕನ್ನಡವನ್ನು ಸಂಪೂರ್ಣ ನಿರ್ನಾಮ ಮಾಡ ಹೊರಟಿರುವ ಪಿಣರಾಯಿ ಸರಕಾರ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಹಾಗೂ ಅಲ್ಲಿನ ಕೆಲವು ಗ್ರಾಮಗಳ ಕನ್ನಡದ ಹೆಸರುಗಳನ್ನು ಮಲಯಾಳಂ ಭಾಷೆಗೆ ಬದಲಾಯಿಸಿ ನಾಮಫಲಕಗಳನ್ನು ಅಳವಡಿಸುತ್ತಿದೆ. ಕೇರಳ ಸರ್ಕಾರದ ಈ ನಡೆಯನ್ನು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಖಂಡಿಸಿದೆ. `ಮಧೂರು-ಮಧುರಮ್, ಮಲ್ಲ-ಮಲ್ಲಮ್, ಕಾರಡ್ಕ-ಕಡಗಮ್, ಬೇದಡ್ಕ-ಬೆಡಗಮ್, ಪಿಲಿಕುಂಜೆ-ಪಿಲಿಕುನ್ನು, ಆನೆಬಾಗಿಲು-ಆನೆವಾಗಿಲ್, ಮಂಜೇಶ್ವರ-ಮಂಜೇಶ್ವರಮ್, ಹೊಸದುರ್ಗ-ಪುದಿಯಕೋಟ, ಕುಂಬಳೆ-ಕುಂಬ್ಳಾ, ಸಸಿಹಿತ್ಲು-ಶೈವಲಪ್, ನೆಲ್ಲಿಕುಂಜ-ನೆಲ್ಲಿಕುನ್ನಿ’ ಇವುಗಳ ಮೂಲ ಹೆಸರನ್ನೆ  ಬದಲಾಯಿಸಿ ಕನ್ನಡದ ಕುರುಹು ಕೂಡ ಇರಬಾರದು ಎನ್ನುವುದು ಪಿಣರಾಯಿ ಸರಕಾರದ ನಡೆಯಾಗಿದೆ ಎಂದು […]

“ಕಾನದ ಬೊಲ್ಪು ಶ್ರೀ ಮಹಾಲಿಂಗೇಶ್ವರ” ತುಳು, ಕನ್ನಡ ಭಕ್ತಿಗೀತೆ ಬಿಡುಗಡೆ

Monday, January 18th, 2021
kanadabolpu

ಮಂಜೇಶ್ವರ : ಇತಿಹಾಸ ಪ್ರಸಿದ್ಧವಾದ ದೇಲಂಪಾಡಿ ಶ್ರೀಮಹಾಲಿಂಗೇಶ್ವರ ಕ್ಷೇತ್ರದ ಧನು ಪೂಜಾ ಸಮಾರೋಪದ ಮಕರ ಸಂಕ್ರಮಣದಂದು “ಕಾನದ ಬೊಲ್ಪು ಶ್ರೀ ಮಹಾಲಿಂಗೇಶ್ವರ” ಎಂಬ ತುಳು, ಕನ್ನಡ ಭಕ್ತಿಗೀತೆ  ಬಿಡುಗಡೆಗೊಂಡಿತು. ತುಳುನಾಡ ತುಡರ್ ಕ್ರಿಯೇಷನ್ ಅರ್ಪಿಸಿದ ಎ.ಡಿ.ಕೊರಗಪ್ಪ ಹಾಗೂ ಕಾರ್ತಿಕ್ ಲಾಲ್ ಭಾಗ್ ಸಾಹಿತ್ಯ ರಚಿಸಿ  ಡಿ.ಪ್ರವೀಣ್ ಕುಮಾರ್  ನಿರ್ದೇಶಿಸಿದ ಈ ಗೀತೆಯನ್ನ  ಯೂಟ್ಯೂಬ್ ನ ಕೀಲಿಮಣೆಯನ್ನ ಅದುಮುವ ಮೂಲಕ ಕ್ಷೇತ್ರದ ತಂತ್ರಿವರೇಣ್ಯರಾದ ಬ್ರಹ್ಮ ಶ್ರೀ ಗಣೇಶ ತಂತ್ರಿ ಬಿಡುಗಡೆಗೊಳಿಸಿದರು. ಈ ವೇಳೆ ಕ್ಷೇತ್ರದ ಆಡಳಿತ ಸಮಿತಿಯ ಪಧಾಧಿಕಾರಿಗಳು, […]

ಕಾಸರಗೋಡಿನಲ್ಲಿ ತುಳುವರು ಕನ್ನಡವನ್ನು ಕಟ್ಟಿ ಬೆಳೆಸಿದ್ದಾರೆ : ಕೋಟ ಶ್ರೀನಿವಾಸ ಪೂಜಾರಿ

Saturday, January 4th, 2020
kasaragodu

ಕಾಸರಗೋಡು : ಕಾಸರಗೋಡಿನ ತುಳು-ಕನ್ನಡಿಗರ ಸ್ನೇಹ ಅನನ್ಯ. ತುಳುವ ನೆಲದವರೇ ಇಲ್ಲಿ ಕನ್ನಡ ಭಾಷೆಯನ್ನು ಕಟ್ಟಿ ಬೆಳೆಸಿದ್ದಾರೆ. ಆದುದರಿಂದಲೇ ಭಾಷೆ ಮತ್ತು ಸಂಸ್ಕೃತಿಗೆ ಪೆಟ್ಟು ಬಿದ್ದಾಗ ನಿರಂತರವಾಗಿ ದಿಟ್ಟತನದಿಂದ ಹೋರಾಟ ಮಾಡುತ್ತಾರೆ. ತುಳು ಕಾವ್ಯಗಳನ್ನು ವಾಚನ ಮತ್ತು ಪ್ರವಚನದ ಮೂಲಕ ಪ್ರಚಾರ ಪಡಿಸುತ್ತಿರುವುದು ತುಳು ಭಾಷೆಯ ಬೆಳವಣಿಗೆಗೆ ಒಂದು ಉತ್ತಮ ವೇದಿಕೆ. ತುಳು ಅಕಾಡೆಮಿಗಳು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ದಕ್ಷಿಣಕನ್ನಡ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಹೇಳಿದರು. ಅವರು ತುಳುವರ್ಲ್ಡ್ ಮತ್ತು ಜಾನಪದ […]

ಕನ್ನಡದಲ್ಲಿ ನಾಮಫಲಕ ಪ್ರದರ್ಶನ ಕಡ್ಡಾಯ: ಪ್ರದೀಪಕಲ್ಕೂರ ಆಗ್ರಹ

Wednesday, October 23rd, 2019
Kannada

ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಗೊಳಪಟ್ಟ ಎಲ್ಲಾ ವಾಣಿಜ್ಯ ಮಳಿಗೆ, ವಸತಿ ಸಂಕೀರ್ಣ ವಾಣಿಜ್ಯ ಸಂಕೀರ್ಣ, ಸಂಘ, ಸಂಸ್ಥೆ ಹೀಗೆ ಎಲ್ಲಾ ಸಂಸ್ಥೆಗಳಲ್ಲೂ ನಾಮ ಫಲಕಗಳನ್ನು ಕಡ್ಡಾಯವಾಗಿಕನ್ನಡ ಭಾಷೆಯಲ್ಲೇ ಪ್ರದರ್ಶಿಸುವಂತೆ ಆದೇಶ ಹೊರಡಿದುವಂತೆ ದ.ಕ. ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ತು ಒತ್ತಾಯಿಸಿದೆ. ಈ ಕುರಿತು ಪರಿಷತ್ತಿನಜಿಲ್ಲಾಧ್ಯಕ್ಷಎಸ್. ಪ್ರದೀಪಕುಮಾರಕಲ್ಕೂರ ಮಂಗಳೂರು ಮಹಾನಗರ ಪಾಲಿಕೆಯಆಯುಕ್ತರಾಗಿರುವ ಶಾನಾಡಿಅಜಿತ್‌ಕುಮಾರ್ ಹೆಗ್ಡೆಯವರಿಗೆ ಮನವಿಯೊಂದನ್ನು ಸಲ್ಲಿಸಿದ್ದಾರೆ. ಈಗಾಗಲೇ ಬೆಂಗಳೂರು ಮಹಾನಗರ ಪಾಲಿಕೆಯು ನವೆಂಬರ್ 1 ರೊಳಗೆ ಕನ್ನಡದಲ್ಲೇ ನಾಮಫಲಕಗಳನ್ನು ಪ್ರದರ್ಶಿಸುವ ಕುರಿತುಆದೇಶ ನೀಡಿದ್ದುಇದು ರಾಜ್ಯದಾದ್ಯಂತಜಾರಿಗೆ ಬರುವಂತಾಗಲಿ, ರಾಜ್ಯದ ಪ್ರಮುಖ ನಗರಗಳಲ್ಲೊಂದಾದ […]

ಕನ್ನಡದಲ್ಲೇ ಬ್ಯಾಂಕ್ ಪರೀಕ್ಷೆ-ಕಲ್ಕೂರ ಸಂತಸ

Saturday, July 6th, 2019
Kalkura

ಮಂಗಳೂರು  : ಕನ್ನಡಿಗರ ಬಹುವರ್ಷಗಳ ಬೇಡಿಕೆಯಾದಕನ್ನಡದಲ್ಲೇ ಬ್ಯಾಂಕಿಂಗ್ ಪರೀಕ್ಷೆಯನ್ನು ಬರೆಯಲು ಅವಕಾಶ ನೀಡಬೇಕುಎನ್ನುವ ಬಗ್ಗೆಕೇಂದ್ರ ಸರಕಾರವು ಮನ್ನಣೆ ನೀಡಿರುವುದನ್ನುದ.ಕ. ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಅಭಿನಂದಿಸುವ ಮೂಲಕ ತನ್ನ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ದೇಶದ ಪ್ರಾದೇಶಿಕ ಭಾಷೆಗಳಲ್ಲಿ ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆ ನಡೆಸಬೇಕೆಂಬ ಬೇಡಿಕೆಯನ್ನುಈಡೇರಿಸುವ ಕೇಂದ್ರ ಸರಕಾರ ಹಾಗೂ ಪ್ರಸ್ತುತಕಾರ್ಯನಿರ್ವಹಿಸುತ್ತಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರನ್ನುಕಲ್ಕೂರರವರು. ಶ್ಲಾಘಿಸಿದ್ದಾರೆ. 6 ರಾಷ್ಟ್ರಿಕೃತ ಬ್ಯಾಂಕ್ ಸಹಿತ ಅನೇಕ ವಿತ್ತ ಸಂಸ್ಥೆಗಳನ್ನು ದೇಶಕ್ಕೆ ನೀಡಿರುವ ಹಿರಿಮೆ […]

ಕನ್ನಡದ ಖ್ಯಾತ ನಿರ್ದೇಶಕ ಎಂ.ಎಸ್​ ರಾಜಶೇಖರ್​ ಆಸ್ಪತ್ರೆಗೆ ದಾಖಲು

Monday, October 29th, 2018
hospitalized

ಬೆಂಗಳೂರು: ಉಸಿರಾಟದ ತೊಂದರೆಯಿಂದಾಗಿ ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎಂ.ಎಸ್.ರಾಜಶೇಖರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರು ನಗರದ ವಿಕ್ರಂ ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ರಾಜಶೇಖರ್ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ ಎಂದು ಅವರ ಪತ್ನಿ ರಾಣಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇನ್ನು ರಾಜಶೇಖರ್, ಮೇರು ನಟ ಡಾ. ರಾಜ್ಕುಮಾರ್ ಅವರ ಧ್ರುವತಾರೆ ಸೇರಿದಂತೆ ರಥಸಪ್ತಮಿ, ನಂಜುಂಡಿ ಕಲ್ಯಾಣಿ, ಮನ ಮೆಚ್ಚಿದ ಹುಡುಗಿಯಂತಹ ಸಾಕಷ್ಟು ಹಿಟ್ ಚಿತ್ರಗಳಿಗೆ ನಿರ್ದೇಶನ ಮಾಡಿದ್ದಾರೆ.