ಕಲ್ಲಡ್ಕ ಪ್ರಭಾಕರ ಭಟ್ರಿಗೆ ತಕ್ಕ ಪಾಠ ಕಲಿಸುತ್ತೇವೆ : ಧನಂಜಯ

Wednesday, January 15th, 2020
dhananjay

ಮಂಗಳೂರು:  ಡಿಕೆಶಿಯವರ ಯಾವುದೇ ರಾಜಕೀಯ ವಿಚಾರಗಳನ್ನು ಧರ್ಮಕ್ಕೆ ಎಳೆದರೆ, ನಾವು ಬಿಜೆಪಿಗರಿಗೆ ತಕ್ಕ ಪ್ರತ್ಯುತ್ತರ ನೀಡುತ್ತೇವೆ ಎಂದು ಕಾಂಗ್ರೆಸ್ ದ.ಕ ಜಿಲ್ಲಾ ಸಮಿತಿಯ ಪ್ರಚಾರ ಅಧ್ಯಕ್ಷ ಧನಂಜಯ ಅಡ್ಪಂಗಾಯ ಹೇಳಿದ್ದಾರೆ. ಕನಕಪುರದ ಕಪಾಲಿ ಬೆಟ್ಟದ ಮೇಲೆ ಏಸುಕ್ರಿಸ್ತನ ಪ್ರತಿಮೆ ಸ್ಥಾಪನೆಗೆ ನಮ್ಮ ಜಿಲ್ಲೆಯ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರು ಕೋಮು ಭಾವನೆ ಕೆರಳಿಸುವ ಹೇಳಿಕೆ ನೀಡಿದ್ದಾರೆ. ಏಸು ಪ್ರತಿಮೆಯನ್ನು ವಿರೋಧಿಸಿ ಪ್ರಭಾಕರ ಭಟ್ ಅವರು ದ.ಕ.ಜಿಲ್ಲೆಯಿಂದ ಎಷ್ಟು ಜನರನ್ನು ಅಲ್ಲಿಗೆ ಕರೆದೊಯ್ದು, ಪ್ರತಿಭಟನೆ ನಡೆಸಿದ್ದಾರೋ […]

ಕಪಾಲಿ ಬೆಟ್ಟದಲ್ಲಿ ಯೇಸು ಪ್ರತಿಮೆ : ಕನಕಪುರ ತಹಶೀಲ್ದಾರ್ ದಿಢೀರ್ ವರ್ಗಾವಣೆ

Tuesday, December 31st, 2019
yesu-pratime

ರಾಮನಗರ : ಕನಕಪುರ ತಹಶೀಲ್ದಾರ್ ಆನಂದಯ್ಯ ಅವರನ್ನು ದಿಢೀರ್ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಕನಕಪುರದ ಕಪಾಲಿ ಬೆಟ್ಟದಲ್ಲಿ ಯೇಸು ಪ್ರತಿಮೆ ನಿರ್ಮಿಸಲು ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಅವರು ಶಂಕು ಸ್ಥಾಪನೆ ಮಾಡಿದ ನಂತರದ ಬೆಳವಣಿಗೆ ಕುತೂಹಲಕ್ಕೆ ಎಡೆಮಾಡಿದೆ. ಆನಂದಯ್ಯ ಅವರ ಬದಲಿಗೆ ಕನಕಪುರ ತಹಶೀಲ್ದಾರ್ ಆಗಿ ವರ್ಷಾ ಅವರನ್ನು ಆಯ್ಕೆ ಮಾಡಲಾಗಿದೆ. ವರ್ಷಾ ಅವರು ಈ ಮೊದಲು ಯಳಂದೂರು ತಹಶೀಲ್ದಾರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ಆರ್. […]