ಬಹುಗ್ರಾಮ ಕುಡಿಯುವ ನೀರು ಒದಗಿಸಬೇಕೆನ್ನುವುದು ನನ್ನ ಕನಸಾಗಿತ್ತು : ಮಾಜಿ ಸಚಿವ ಬಿ.ರಮಾನಾಥ ರೈ

Wednesday, November 6th, 2019
Ramanath-Rai

ಬಂಟ್ವಾಳ : ತಾಲೂಕಿನ ಜನತೆಗೆ ಶುದ್ಧಕುಡಿಯುವ ನೀರನ್ನು ಒದಗಿಸುವ 5 ಯೋಜನೆಗಳನ್ನು ತಾಲೂಕಿಗೆ ಮಂಜೂರು ಮಾಡಿ ಮೂರು ಯೋಜನೆಗಳನ್ನು ಅನುಷ್ಠಾನಗೊಳಿಸಿದ ತೃಪ್ತಿ ನನ್ನಲ್ಲಿದೆ, ಇಡೀ ತಾಲೂಕಿಗೆ ಬಹುಗ್ರಾಮ ಕುಡಿಯುವ ನೀರು ಒದಗಿಸಬೇಕೆನ್ನುವುದು ನನ್ನ ಕನಸಾಗಿತ್ತು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಅವರು ಹೇಳಿದರು. ಅವರು ಪೆರಾಜೆ ಬಹುಗ್ರಾಮ ಕುಡಿಯುವ ನೀರಿನ ಘಟಕ ಕ್ಕೆ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ರೈ ಅವರ ಜೊತೆ ಭೇಟಿ ನೀಡಿದ ಬಳಿಕ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದರು. ತಾಲೂಕಿನ ಕುಡಿಯುವ ನೀರಿನ […]

ಮಗುವಿನೊಂದಿಗೆ ತೆರಳಿದ ಮಹಿಳೆ ನಾಪತ್ತೆ, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು

Thursday, April 4th, 2013
Women daughter missing

ಬಂಟ್ವಾಳ : ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಸಾಣೂರು ಪದವಿನಲ್ಲಿ ಮಗಳೊಂದಿಗೆ ತೆರಳಿದ ಮಹಿಳೆಯೊಬ್ಬಳು ಕಾಣೆಯಾದ ಘಟನೆ ನಡೆದಿದೆ. ಕಾಣೆಯಾದ ಮಹಿಳೆ ಸಾಣುರು ಪದವಿನಲ್ಲಿನ ಬಾಬು ಪೂಜಾರಿಯವರ ಪತ್ನಿ ಮೋಹಿನಿ(೩೫) ಮತ್ತು ಮಗಳು ಮನೀಷಾ(೯) ಕೈಕಂಬದ ಬೀಡಿ ಕಾರ್ಮಿಕರ ಕಚೇರಿಗೆ ಹೋಗಿ ಬರುತ್ತೇನೆ ಎಂದು ಮಗಳು ಮನೀಷಾಳೊಂದಿಗೆ ತೆರಳಿದವರು ವಾಪಸ್ ಮನೆಗೂ ಬಾರದೆ ಕಾಣೆಯಾಗಿದ್ದಾರೆ. ಈಕೆಗೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ನರೇಂದ್ರ ಎಂಬವನ ಪರಿಚಯವಿದ್ದು ಆತನೊಂದಿಗೆ ತೆರಳಿರಬೇಕೆಂದು ಶಂಕಿಸಲಾಗಿದ್ದು, ಆಕೆಯ ಪತಿ ಬಂಟ್ವಾಳ ಗ್ರಾಮಾಂತರ ಠಾಣೆಗೆ ಈ ಬಗ್ಗೆ ದೂರು ನೀಡಿದ್ದಾರೆ