ಗೋಶಾಲೆಯಲ್ಲಿರೋ ಕರುಗಳನ್ನು ನೋಡಿದಾಗ ಕರುಳು ಕಿತ್ತು ಬರುತ್ತದೆ : ಮೊಯ್ದೀನ್ ಬಾವಾ

Saturday, March 20th, 2021
Kapila Goshala

ಮಂಗಳೂರು   :  ಕಪಿಲಾ ಗೋಶಾಲೆಯನ್ನು ಹಾಡಹಗಲೇ ಧ್ವಂಸ ಮಾಡಿದ್ದು ಖಂಡನೀಯ. ಗೋಶಾಲೆಯಲ್ಲಿರೋ ಕರುಗಳನ್ನು ನೋಡಿದಾಗ ಕರುಳು ಕಿತ್ತು ಬರುತ್ತದೆ. ನೆಲಸಮಗೊಂಡ ಗೋಶಾಲೆಯ ಮಾಲೀಕನಿಗೆ ನಾನು ವೈಯಕ್ತಿಕ ನೆಲೆಯಲ್ಲಿ ಒಂದು ಲಕ್ಷ ರೂಪಾಯಿ ಹಣವನ್ನು ಸಹಾಯಧನವಾಗಿ ನೀಡುತ್ತೇನೆ ಎಂದು  ಮಾಜಿ ಶಾಸಕ ಮೋಯ್ದಿನ್‌ ಬಾವಾ ಅವರು ಚೆಕ್ಕನ್ನು ಮಾಲೀಕ‌ ಪ್ರಕಾಶ್ ಶೆಟ್ಟಿಯವರಿಗೆ ಹಸ್ತಾಂತರಿಸಿದರು. ಇವತ್ತು ಬೀಫ್ ರಫ್ತು ಮಾಡುವುದರಲ್ಲಿ ದೇಶ ನಂಬರ್ ವನ್ ಆಗಿರೋದಕ್ಕೆ ಬಿಜೆಪಿ ಕಾರಣ.  ಗೋವಿನ ಹೆಸರಿನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಆದರೆ ಈ ಆಡಳಿತವೇ ಕಪಿಲ […]

ಅಕ್ರಮವಾಗಿ ಕರುಗಳನ್ನು ಸಾಗಾಟ : ಆರೋಪಿಗಳಿಬ್ಬರು ಪರಾರಿ

Thursday, September 24th, 2020
calf

ಮಂಗಳೂರು  : ಅಕ್ರಮವಾಗಿ  ಕರುಗಳನ್ನು ಸಾಗಾಟ ನಡೆಸುತ್ತಿದ್ದ ಕಾರನ್ನು ಉಳ್ಳಾಲ ಪೊಲೀಸರು ಕಲ್ಲಾಪು ಸಮೀಪ ಅಡ್ಡ ಗಟ್ಟಿ ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ವೇಳೆ ಆರೋಪಿಗಳಿಬ್ಬರು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರಿನಲ್ಲಿ ಜಾನುವಾರು ಸಾಗಾಟ ನಡೆಸುತ್ತಿದ್ದ ಖಚಿತ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಕಲ್ಲಾಪು ಸಮೀಪ ಅಡ್ಡಗಟ್ಟಿದ್ದರು. ಈ ಸಂದರ್ಭ ಕಾರಿನಲ್ಲಿದ್ದ ಆರೋಪಿಗಳು ಪರಾರಿಯಾಗಿದ್ದಾರೆ‌. ಕಾರನ್ನು ಉಳ್ಳಾಲ ಪೊಲೀಸರು ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.

ಕಾರ್ಮಿಕರು ತೋಡಿದ ಗುಂಡಿಗೆ ಬಿದ್ದ ಕರುವನ್ನು ರಕ್ಷಿಸಿದ ಸ್ಥಳೀಯ ಯುವಕರು

Thursday, July 16th, 2020
nikhil-poojary

ಮಂಗಳೂರು : ತಣ್ಣೀರುಬಾವಿ ಬೀಚ್ ಗೆ ಹೋಗುವ ರಸ್ತೆ ಬದಿಯಲ್ಲಿ ಗುತ್ತಿಗೆ ಕಾರ್ಮಿಕರು ತೋಡಿದ ಗುಂಡಿಗೆ ಕರುವೊಂದು ಬಿದ್ದ ಕರು ವೊಂದನ್ನು ಸ್ಥಳೀಯ ಯುವಕರ  ಗುಂಪೊಂದು ರಕ್ಷಿಸಿದೆ. ಅದೇ ರಸ್ತೆಯಲ್ಲಿ ಪ್ರಯಾಣಿಸುತಿದ್ದ ನಿಖಿಲ್ ಪೂಜಾರಿ ನೀರು ತುಂಬಿದ ಹೊಂಡಕ್ಕೆ ಇಳಿದು ಒದ್ದಾಡುತ್ತಿದ್ದ ಕರುವನ್ನು ಮೇಲೆಕೆತ್ತಿ ರಕ್ಷಣೆ ಮಾಡಿದ್ದಾರೆ. ಪ್ರಾಣಪಾಯದಲ್ಲಿದ್ದ ಕರುವನ್ನು ರಕ್ಷಿಸಿ, ಜೀವ ಉಳಿಸಿದ್ದಾರೆ. ನಿಖಿಲ್ ಪೂಜಾರಿಗೆ ಸ್ಥಳೀಯ ಯುವಕರು, ಅಗ್ನಿಶಾಮಕ ದಳದವರು ಸಹಕರಿಸಿದ್ದಾರೆ. ನೀರು ತುಂಬಿದ ಗುಂಡಿಯಲ್ಲಿ ಮುಳುಗಿದ್ದ ಕರುವಿಗೆ ಮರು ಜೀವಕೊಟ್ಟ ನಿಖಿಲ್ ಪೂಜಾರಿ ಹಾಗು ಸಹಕರಿಸಿದ ಸ್ಥಳೀಯ […]

ಬಾವಿಗೆ ಬಿದ್ದ ಕರು ಸುರಕ್ಷಿತ, ರಕ್ಷಿಸಲೆತ್ನಿಸಿದ ಸಹೋದರರಿಬ್ಬರು ಮೃತ

Wednesday, May 27th, 2020
paiwalike death

ಕಾಸರಗೋಡು : ಇದೊಂದು ದುರಂತ ಘಟನೆ, ತನ್ನ ಮನೆಯ ಬಾವಿಗೆ ಬಿದ್ದ ದನದ ಕರುವನ್ನು ರಕ್ಷಿಸಲೆತ್ನಿಸಿದಾಗ ಸಹೋದರರಿಬ್ಬರು ಮೃತಪಟ್ಟ ದಾರುಣ ಘಟನೆ ಇಂದು ಬೆಳಿಗ್ಗೆ ಪೈವಳಿಕೆ ಸಮೀಪದ ಸುಬ್ಬಯ್ಯಕಟ್ಟೆಯಲ್ಲಿ ನಡೆದಿದೆ. ಅವರಿಬ್ಬರೂ ಅಣ್ಣ ತಮ್ಮಂದಿರು  ಸುಬ್ಬಯ್ಯ ಕಟ್ಟೆಯ ನಾರಾಯಣ (50) ಮತ್ತು ಸಹೋದರ ಶಂಕರ (40) . ಕರುವನ್ನು ಮೇಲೆಕ್ಕೆತ್ತಲು ಮೊದಲಿಗೆ ಶಂಕರ  ಹಗ್ಗದ ಸಹಾಯದಿಂದ ಬಾವಿಗೆ ಇಳಿದಿದ್ದು, ಬಾವಿಯಲ್ಲಿ ಉಸಿರಾಟ ತೊಂದರೆ ಉಂಟಾಗಿ ಬಾವಿಯೊಳಗೆ ಕುಸಿದು ಬಿದ್ದಿದ್ದಾರೆ , ಇದ್ದನ್ನು ಕಂಡು ಸಹೋದರ ನಾರಾಯಣ ಎಂಬವರು ಕೂಡ ಬಾವಿಗೆ […]

ಮಂಗಳೂರು : ಕರುವಿನೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ಕೂಲಿ ಕಾರ್ಮಿಕ

Wednesday, July 17th, 2019
Ansari

ಮಂಗಳೂರು :  ಬಿಹಾರ ಮೂಲದ ಕೂಲಿ ಕಾರ್ಮಿಕ ನೊಬ್ಬ ಕಟ್ಟಿ  ಹಾಕಿದ ಕರುವೊಂದರ ಮೇಲೆ ಬಲವಂತದಿಂದ ಲೈಂಗಿಕ ಕ್ರಿಯೆ ನಡೆಸುತ್ತಿದ್ದಾಗ ಸಾರ್ವಜನಿಕರ ಕೈಗೆ ಸಿಕ್ಕಬಿದ್ದ ಘಟನೆ ನಡೆದಿದೆ. ಮಂಗಳೂರು ಹೊರವಲಯದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜತ್ತಬೈಲ್ ಎಂಬಲ್ಲಿ ಈ ಘಟನೆ ನಡೆದಿದೆ. ವಿಕೃತ ಕಾಮಿಯನ್ನು ಮೊಹಮ್ಮದ್ ಅಜರ್ ಅನ್ಸಾರಿ ಎಂದು ಗುರುತಿಸಲಾಗಿದ್ದು ಈತ ಬಿಹಾರ ಮೂಲದ ಕೂಲಿ ಕಾರ್ಮಿಕನಾಗಿದ್ದಾನೆ. ಮೇಯಲು ಕಟ್ಟಿ ಹಾಕಿದ ಕರುವಿನ ಮೇಲೆ ಅನ್ಸಾರಿ ಲೈಂಗಿಕ ದೌರ್ಜನ್ಯ ನಡೆಸಿದ್ದು, ಇದನ್ನು ಗಮನಿಸಿದ ಸ್ಥಳೀಯ ಯುವಕರು ಕರುವನ್ನು […]

ಕಾಡಿನಿಂದ ನಾಡಿಗೆ ಬಂದು ದನ, ಕರುಗಳನ್ನು ತಿನ್ನುತ್ತಿದ್ದ ಚಿರತೆ ಅರಣ್ಯ ಇಲಾಖೆಯ ಬೋನಿಗೆ

Thursday, July 11th, 2013
leopard

ಬಂಟ್ವಾಳ: ಚೆನ್ನೈತ್ತೋಡಿ ಗ್ರಾಮದ ಅಂಗಡಿ ಪಲ್ಕೆ ಕುಲಾಲು ಎಂಬಲ್ಲಿ ಕಾಡಿನಿಂದ ನಾಡಿಗೆ ಬಂದು ದನ, ಕರುಗಳನ್ನು ತಿನ್ನುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆಯ ಬೋನಿನಲ್ಲಿ ಸಿಕ್ಕಿ ಬಿದ್ದ ಘಟನೆ ಗುರುವಾರ ಮುಂಜಾನೆ ನಡೆದಿದೆ. ಮಾಧವ ಎಂಬವರ ಜಮೀನಿಗೆ ದಾಳಿ ಮಾಡುತ್ತಿದ್ದ ಈ ಚಿರತೆ ದನ, ಕರುಗಳನ್ನು ತಿಂದಿತ್ತು. ಇದರಿಂದ ಬೇಸತ್ತ ಮಾಧವ ಅವರು  ಅರಣ್ಯ ಇಲಾಖೆಯ ನೆರವಿನಲ್ಲಿ ಚಿರತೆಗೆ ಬೋನು ಇರಿಸಿದ್ದು, ನಿರೀಕ್ಷೆಯಂತೆ ನಾಯಿಯನ್ನು ತಿನ್ನಲು ಬಂದ ಚಿರತೆ ಬೋನಿನಲ್ಲಿ ಸಿಕ್ಕಿ ಬಿದ್ದಿದೆ. ಚಿರತೆ ಬೋನಿಗೆ ಸಿಕ್ಕಿಬಿದ್ದ ಸುದ್ದಿ ತಿಳಿದು […]