ಹೊಟ್ಟೆಯ ಹಸಿವನ್ನು ಆಹಾರ ನೀಗಿಸಿದರೆ – ಜ್ಞಾನದ ಹಸಿವನ್ನು ಭಜನೆ ನೀಗಿಸುವುದು – ಕಲ್ಕೂರ

Sunday, November 28th, 2021
Kalkura

ಮಂಗಳೂರು  : ನಾವು ತಿನ್ನುವ ಆಹಾರ ನಮ್ಮ ಹಸಿವನ್ನು ನೀಗಿಸಿದರೆ, ಭಜನಾ ಸಂಕೀರ್ತನೆಯು ಜ್ಞಾನದ ಹಸಿವನ್ನು ನೀಗಿಸುವುದು. ಕೊರೋನಾ ತಡೆಗಟ್ಟುವಲ್ಲಿ ಮುಖಗವಸು ರಕ್ಷಣೆ ನೀಡಿದಂತೆ ವಿಕೃತ ಮನಸ್ಸಿನಿಂದ ರಕ್ಷಿಸಿಕೊಳ್ಳಲು ‘ಭಜನಾ ಸಂಕೀರ್ತನೆ’ಯೂ ಒಂದು ಸಾತ್ವಿಕವಾದ ರಕ್ಷಾ ಕವಚವಿದ್ದಂತೆ ಎಂದು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಹಾಗೂ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ನುಡಿದರು. ಕದ್ರಿ ಕಂಬಳ, ಮಲ್ಲಿಕಾ ಬಡಾವಣೆಯ, ಮಂಜುಪ್ರಾಸಾದ, ವಾದಿರಾಜ ಮಂಟಪದ ಪೇಜಾವರ ವಿಶ್ವೇಶತೀರ್ಥ ವೇದಿಕೆಯಲ್ಲಿ ನಗರದ […]

ಪದ್ಮವಿಭೂಷಣ ಪ್ರಶಸ್ತಿ ಸ್ವೀಕರಿಸಿ ಮಂಗಳೂರಿಗೆ ಬಂದ ಪೇಜಾವರ ಮಠಾಧೀಶರಿಗೆ ಭವ್ಯ ಸ್ವಾಗತ

Thursday, November 11th, 2021
pejavara seer

ಮಂಗಳೂರು : ಹರಿಪಾದಗೈದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರಿಗೆ ನಿರ್ಯಾಣೋತ್ತರದಲ್ಲಿ ಭಾರತ ಘನ ಸರಕಾರವು ಘೋಷಿಸಿದ ‘ಪದ್ಮವಿಭೂಷಣ’ ಪ್ರಶಸ್ತಿಯನ್ನು ತನ್ನ ಗುರುಗಳ ಪರವಾಗಿ ಸನ್ಮಾನ್ಯ ರಾಷ್ಟ್ರಪತಿಗಳಿಂದ ಸ್ವೀಕರಿಸಿ ಮಂಗಳೂರಿಗೆ ಆಗಮಿಸಿದ ಪರಮ ಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರನ್ನು ಕಲ್ಕೂರ ಪ್ರತಿಷ್ಠಾನದ ಆಯೋಜಕತ್ವದಲ್ಲಿ ಮಂಗಳೂರಿನ ನಾಗರೀಕರಿಂದ ಸ್ವಾಗತಿಸಲಾಯಿತು. ಬೆಂಗಳೂರಿನಿಂದ ವಿಮಾನದ ಮೂಲಕ ಬಜ್ಪೆಗೆ ಆಗಮಿಸಿದ ಪೂಜ್ಯಶ್ರೀಗಳನ್ನು ಶಿವಳ್ಳಿ ಸ್ಪಂದನಾ ಹಾಗೂ ಕಾಸರಗೋಡು ಗಡಿನಾಡ ಸಾಂಸ್ಕೃತಿಕ ವೇದಿಕೆ ಬಂಧುಗಳು ಮೆರವಣಿಗೆಯೊಂದಿಗೆ ಮಂಗಳೂರಿಗೆ ಕರೆತಂದರು. ಕದ್ರಿ ಕಂಬ್ಳದಿಂದ ನವನೀತ ಶೆಟ್ಟಿ ಕದ್ರಿ […]

ಕನ್ನಡಾಭಿಮಾನವನ್ನು ಬೆಳೆಸಿಕೊಳ್ಳೋಣ – ಡಾ. ಸಿ. ಸೋಮಶೇಖರ್

Wednesday, November 10th, 2021
Kannada Rajyotsava Kalkura

ಮಂಗಳೂರು : ಕನ್ನಡಿಗರಾದ ನಾವೆಲ್ಲರೂ ಮಾತೃಭಾಷೆ ಕನ್ನಡವನ್ನು ಬೆಳೆಸುವಲ್ಲಿ ಪ್ರಾಮಾಣಿಕ ಪ್ರಯತ್ನವನ್ನು ನಡೆಸುವ ಅನಿವಾರ್ಯತೆ ಬಂದೊದಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಕನ್ನಡಿಗನು ಕನ್ನಡ ಭಾಷೆಯನ್ನು ಪ್ರೀತಿಸಿ ಭಾಷಾ ಬೆಳವಣಿಗೆಯಲ್ಲಿ ಸಹಕರಿಸಬೇಕೆಂದು  ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಿವೃತ್ತ ಐ.ಎ.ಎಸ್. ಅಧಿಕಾರಿ ಡಾ. ಸಿ ಸೋಮಶೇಖರ್ ನುಡಿದರು. ಕಲ್ಕೂರ ಪ್ರತಿಷ್ಠಾನದಿಂದ ಏರ್ಪಡಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಉದ್ಘಾಟಿಸಿ ರಾಜ್ಯೋತ್ಸವ ಸಂದೇಶ ನೀಡಿದರು. ಗಡಿನಾಡಿನ ಕಾಸರಗೋಡಿನಲ್ಲಿರುವ ಕನ್ನಡಿಗರು ಕೂಡ ಈ ನೆಲೆಯಲ್ಲಿ ತಮ್ಮ ಕೊಡುಗೆಯನ್ನು ನೀಡಬೇಕಾಗಿದೆ ಎಂದರು. ಮಂಗಳೂರು […]

ಸಂಗೀತ ಕ್ಷೇತ್ರದ ದಿಗ್ಗಜ ಕಲಾವಿದರಿಗೆ ಶ್ರದ್ಧಾಂಜಲಿ

Friday, September 24th, 2021
Kalkura

ಮಂಗಳೂರು  : ಕರ್ನಾಟಕ ಶಾಸ್ತ್ರೀಯ ಸಂಗೀತ ಕ್ಷೇತ್ರದಲ್ಲಿ ಸಾಧನೆಗೈದ ಇತ್ತೀಚೆಗೆ ನಮ್ಮನ್ನಗಲಿದ ಹಿರಿಯ ಚೇತನಗಳಾದ ಸರೋಜಾ ರಾವ್ ಮತ್ತು ಎಂ.ಆರ್. ಸಾಯಿನಾಥ್ ಅವರಿಗೆ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಲ್ಕೂರ ಪ್ರತಿಷ್ಠಾನದ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಂಗೀತ ಗುರುಪರಂಪರೆಯ ಶಿಕ್ಷಣ ಪದ್ಧತಿಯಲ್ಲಿ ಯಾವುದೇ ರಾಜಿಯನ್ನು ಮಾಡಿಕೊಳ್ಳದೆ ಕರ್ನಾಟಕ ಶಾಸ್ತ್ರೀಯ ಸಂಗೀತಕ್ಕೆ ಶಕ್ತಿ ನೀಡಿದ ಕೆಲವೇ ಕೆಲವರಲ್ಲಿ ಸರೋಜಮ್ಮ ಒಬ್ಬರಾಗಿದ್ದಾರೆ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರರಾದ ಸರೋಜಮ್ಮ ಅವರದು ನಿಷ್ಕಲ್ಮಶ ವ್ಯಕ್ತಿತ್ವವಾಗಿತ್ತು. ಇವರ ಅಗಲಿಕೆಯಿಂದ ಸಂಗೀತ […]

ಸಾರ್ವಜನಿಕ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ  ಅವಕಾಶ ಕಲ್ಪಿಸಲಿ – ಕಲ್ಕೂರ

Monday, September 6th, 2021
Pradeep Kumar Kalkura

ಮಂಗಳೂರು  : ಕೊರೋನಾ ಸೋಂಕಿನ ಹಿನ್ನಲೆಯಲ್ಲಿ 5 ದಿನಗಳ ಕಾಲ ಸಾರ್ವಜನಿಕ ಗಣೇಶೋತ್ಸವ ಆಚರಿಸುವುದಕ್ಕೆ ಸರಕಾರ ಅನುಮತಿಯನ್ನು ಕಲ್ಪಿಸಿರುವುದು ಸ್ವಾಗತಾರ್ಹವಾಗಿದೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ತಿಳಿಸಿದ್ದಾರೆ. ಉತ್ಸವಾದಿ ಪೂಜಾ ಪ್ರಕ್ರಿಯೆಗಳ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳೂ ಅಷ್ಟೇ ಪ್ರಮುಖ ಪಾತ್ರವನ್ನು ವಹಿಸುತ್ತದೆ. ವೇದದ ಜತೆಗೆ ನಾದವಿದ್ದರಷ್ಟೇ ಪರಿಪೂರ್ಣತೆ. ಹಬ್ಬಗಳ ಆಚರಣೆಯ ಔಚಿತ್ಯ, ಯಕ್ಷಗಾನ, ನಾಟಕ, ಶಾಸ್ತಿçÃಯ ಸಂಗೀತ, ವಾದ್ಯ ಸಂಗೀತ ಉಪನ್ಯಾಸ, ಸಭಾಕಾರ್ಯಕ್ರಮ ಹೀಗೆ ಭಕ್ತಿಯ ತೃಷೆ ನೀಗಿಸುವುದರೊಂದಿಗೆ ಭಾವನಾತ್ಮಕ ಹಾಗೂ ಆಧ್ಯಾತ್ಮಿಕ […]

ಅಂತಾರಾಷ್ಟ್ರೀಯ ಮಟ್ಟದಿಂದಲೂ ಸ್ಪಂದನೆ ಪಡೆದ ಕಲ್ಕೂರ ಪ್ರತಿಷ್ಠಾನದ ಕೃಷ್ಣ ವೇಷ ಸ್ಪರ್ಧೆ

Tuesday, August 31st, 2021
Kalkura-Krishna

ಮಂಗಳೂರು :  ಅಸ್ಸಾಂ, ರಾಜಸ್ಥಾನ, ದೆಹಲಿ, ಚೆನ್ನೈ, ಆಂದ್ರ ಪ್ರದೇಶ, ತೆಲಂಗಾಣ, ಕೇರಳ, ಮುಂಬಯಿ ಹೀಗೆ ವಿವಿಧ ರಾಜ್ಯಗಳಿಂದಲೂ ಕರ್ನಾಟಕದಾದ್ಯಂತದಿಂದಲೂ ಮಾತ್ರವಲ್ಲ ಅಮೆರಿಕಾ, ಕೆನಡಾ, ಆಸ್ಟ್ರೇಲಿಯಾ, ಬೆಹರಿನ್ ದುಬೈ, ಸಿಂಗಾಪುರ ಹೀಗೆ ಅನೇಕ ದೇಶಗಳಿಂದಲೂ ಸುಮಾರು 7 ರಿಂದ 8 ಸಾವಿರ ಸ್ಪರ್ಧಿಗಳು ಈ ಬಾರಿ ಅತ್ಯುತ್ಸಾಹದಿಂದ ಕಲ್ಕೂರ ಪ್ರತಿಷ್ಠಾನ ಏರ್ಪಡಿಸಿದ್ದ ರಾಷ್ಟ್ರೀಯ ಮಕ್ಕಳ ಉತ್ಸವ ‘ಶ್ರೀಕೃಷ್ಣ ವೇಷ ಸ್ಪರ್ಧೆಯಲ್ಲಿ’ ಪಾಲ್ಗೊಳ್ಳುವ ಮೂಲಕ ಅಂತರಾಷ್ಟ್ರೀಯ ಉತ್ಸವವಾಗಿ ಮಾರ್ಪಾಡುಗೊಂಡಿತು. ಸ್ಪರ್ಧೆ ಮುಗಿದ ಬಳಿಕವೂ ಇನ್ನೂ ಕೂಡ online ನಲ್ಲಿ ಸ್ಪರ್ಧಿಗಳ ವಿಡಿಯೋ […]

ಸೆ.10ರಂದು ಆನ್‌ಲೈನ್ ಮೂಲಕ 36ನೇ ವರ್ಷದ ಕಲ್ಕೂರ ಪ್ರತಿಷ್ಠಾನದ ‘ಶ್ರೀಕೃಷ್ಣ ವೇಷ ಸ್ಪರ್ಧೆ’

Wednesday, September 2nd, 2020
Kalkura

ಮಂಗಳೂರು : ಕಲ್ಕೂರ ಪ್ರತಿಷ್ಠಾನದ ವತಿಯಿಂದ 36ನೇ ವರ್ಷದ  ರಾಷ್ಟೀಯ ಮಕ್ಕಳ ಉತ್ಸವ ‘ಶ್ರೀಕೃಷ್ಣ ವೇಷ ಸ್ಪರ್ಧೆ’ಯನ್ನು ಈ ಬಾರಿ ಕೊರೋನ ಹಿನ್ನೆಲೆಯಲ್ಲಿ ಆನ್‌ಲೈನ್ ಮೂಲಕ ನಡೆಸಲಾಗುವುದು ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ತಿಳಿಸಿದ್ದಾರೆ. ಈ ಬಾರಿ ಶ್ರೀಕೃಷ್ಣ ವೇಷ ಸ್ಪರ್ಧೆಯ  ವಿಶೇಷತೆ ಅಂದರೆ ಸ್ಪರ್ಧಿಗಳು ವಿಶ್ವದ ಯಾವ ಮೂಲೆಯಿಂದ ಬೇಕಾದರೂ ಭಾಗವಹಿಸಬಹುದು. ಮೂರು ನಿಮಿಷದ ವಿಡಿಯೋ ಮೂಲಕ  ಶ್ರೀಕೃಷ್ಣ ವೇಷ ಧರಿಸಿ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ‘ಶ್ರೀಕೃಷ್ಣ ವೇಷ ಸ್ಪರ್ಧೆ’ ಸೆ.10ರಂದು ನಡೆಯಲಿದ್ದು, ಮನೆಯಿಂದಲೇ […]

ನಾಡೋಜ ಚಿದಾನಂದ ಮೂರ್ತಿಯವರಿಗೆ ಕಲ್ಕೂರ ಪ್ರತಿಷ್ಠಾನದಿಂದ ಗೌರವಾರ್ಪಣೆ

Friday, December 6th, 2019
Nadoja

ಮಂಗಳೂರು : ಇತ್ತೀಚೆಗೆ ಮಂಗಳೂರಿಗೆ ಭೇಟಿ ನೀಡಿದ ನಾಡೋಜ ಚಿದಾನಂದ ಮೂರ್ತಿಯವರನ್ನು ಕಲ್ಕೂರ ಪ್ರತಿಷ್ಠಾನದ ವತಿಯಿಂದ ಪ್ರತಿಷ್ಠಾನದ ಅಧ್ಯಕ್ಷರಾದ ಎಸ್. ಪ್ರದೀಪ ಕುಮಾರ ಕಲ್ಕೂರರವರು ಕದ್ರಿ ಕಂಬಳದ ಮಂಜು ಪ್ರಾಸಾದದ ವಾದಿರಾಜ ಮಂಟಪದಲ್ಲಿ ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭ, ಪೊಳಲಿ ನಿತ್ಯಾನಂದ ಕಾರಂತ, ಕದ್ರಿ ನವನೀತ ಶೆಟ್ಟಿ, ರಾಘವೇಂದ್ರ ಹೊಳ್ಳ ಬೆಂಗಳೂರು ಹಾಗೂ ಶ್ರೀಮತಿ ವಿನೋದ ಪಿ. ಕಲ್ಕೂರ ಉಪಸ್ಥಿತರಿದ್ದರು.

ಕದ್ರಿಯಲ್ಲಿ ರಾಷ್ಟ್ರೀಯ ಮಟ್ಟದ ಮಕ್ಕಳ ಉತ್ಸವ ಶ್ರಿಕೃಷ್ಣ ವೇಷ ಸ್ಪರ್ಧೆ

Saturday, August 24th, 2019
Krishna vesha

ಮಂಗಳೂರು : ಕಲ್ಕೂರ ಪ್ರತಿಷ್ಠಾನದ ವತಿಯಿಂದ ಶ್ರೀಕ್ಷೇತ್ರ ಕದ್ರಿಯಲ್ಲಿ 9 ವೇದಿಕೆಗಳಲ್ಲಿ ಸುಮಾರು 30 ವಿಭಾಗಗಳಲ್ಲಿ ರಾಷ್ಟ್ರೀಯ ಮಟ್ಟದ ಮಕ್ಕಳ ಉತ್ಸವ ಶ್ರಿಕೃಷ್ಣ ವೇಷ ಸ್ಪರ್ಧೆ ಗೆ ಎ.ಜೆ.ಸಮೂಹ ಸಂಸ್ಥೆಗಳ ಅಧ್ಯಕ್ಷ, ಕದ್ರಿ ದೇವಸ್ಥಾನದ ಆಡಳಿತ ಟ್ರಸ್ಟಿಎ.ಜೆ . ಶೆಟ್ಟಿ ಚಾಲನೆ ನೀಡಿದರು. ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್.ಪ್ರದೀಪ್ ಕುಮಾರ್ ಕಲ್ಕೂರ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದ ಆನುವಂಶಿಕ ಆಡಳಿತ ಮೊಕ್ತೇಸರ ಲಕ್ಷ್ಮೀ ನಾರಾಯಣ ಅಸ್ರಣ್ಣ,ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ರಾಜ್ಯಾಧ್ಯಕ್ಷ ಮತ್ತು ಧರ್ಮ ದರ್ಶಿ ಹರಿಕೃಷ್ಣ […]

ಶ್ರೀ ಕ್ಷೇತ್ರ ಕದ್ರಿಯಲ್ಲಿ ಮಳೆ, ಬೆಳೆಗಾಗಿ ಸೀಯಳಾಭಿಷೇಕ

Tuesday, May 14th, 2019
Shiyalabhisheka

ಮಂಗಳೂರು  : ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಕಲ್ಕೂರ ಪ್ರತಿಷ್ಠಾನ, ಹತ್ತು ಸಮಸ್ತರು, ಸಾರ್ವಜನಿಕ ಸಂಘಸಂಸ್ಥೆಗಳ ಸಹಯೋಗದಲ್ಲಿ ಮೇ 14, ಮಂಗಳವಾರದಂದು ಬೆಳಿಗ್ಗೆ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಎ.ಜೆ. ಶೆಟ್ಟಿಯವರ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥ, ಸುಭಿಕ್ಷೆ ಮಳೆ, ಬೆಳೆ, ಫಲಪ್ರಾಪ್ತಿಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಸೀಯಾಳಾಭಿಷೇಕ ನಡೆಸಲಾಯಿತು. ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷಎಸ್. ಪ್ರದೀಪ ಕುಮಾರ ಕಲ್ಕೂರ ಉಪಸ್ಥಿತರಿದ್ದರು. ಊರಹತ್ತು ಸಮಸ್ತರು, ಜನ ಪ್ರತಿನಿಧಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿಕಲ್ಕೂರ ಪ್ರತಿಷ್ಠಾನವು ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ಸಂದರ್ಭ […]