ವಿದ್ಯುತ್ ಪ್ರವಹಿಸಿ ಎಸೆಸೆಲ್ಸಿ ವಿದ್ಯಾರ್ಥಿ ಮೃತ್ಯು

Saturday, July 18th, 2020
Goutham

ಉಡುಪಿ : ಎಸೆಸೆಲ್ಸಿ ವಿದ್ಯಾರ್ಥಿಯೊಬ್ಬ ವಿದ್ಯುತ್ ಪ್ರವಹಿಸಿ ಮೃತಪಟ್ಟ ಘಟನೆ ಜು.17ರಂದು ರಾತ್ರಿ ವೇಳೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಷ್ಮೀನಗರ ಆರನೆ ಕ್ರಾಸ್‌ ನಲ್ಲಿ ನಡೆದಿದೆ. ಮೃತರನ್ನು ಲಕ್ಷ್ಮೀನಗರದ ಮಂಜುನಾಥ್ ನಾಯಕ್ ಎಂಬವರ ಮಗ ಗೌತಮ್(15) ಎಂದು ಗುರುತಿಸಲಾಗಿದೆ. ನೆರೆಮನೆಯವರು ತಮ್ಮ ಬಾವಿಯಿಂದ ಪಂಪ್‌ಸೆಟ್ ಮೇಲಕ್ಕೆತ್ತುವಾಗ ಅಲ್ಲೇ ಸಮೀಪದಲ್ಲಿ ಇದ್ದ ಗೌತಮ್ ವಿದ್ಯುತ್ ಆಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕಲ್ಯಾಣಪುರ ಮಿಲಾಗ್ರಿಸ್ ಪ್ರೌಢಶಾಲೆಯ ಪ್ರತಿಭಾವಂತ ಎಸೆಸೆಲ್ಸಿ ವಿದ್ಯಾರ್ಥಿಯಾಗಿರುವ ಗೌತಮ್, ಇತ್ತೀಚೆಗೆ ನಡೆದ ಎಸೆಸೆಲ್ಸಿ […]

ಉಡುಪಿ : ಡಿವೈಡರ್‌ಗೆ ನುಗ್ಗಿದ ಕಾರು : ಚಾಲಕ ಪ್ರಾಣಾಪಾಯದಿಂದ ಪಾರು

Friday, September 6th, 2019
Udupi

ಉಡುಪಿ : ಕುಂದಾಪರ- ಉಡುಪಿ ರಾಷ್ಟ್ರೀಯ ಹೆದ್ದಾರಿಯ ಶಾರದಾ ಇಂಟರ್‌ ನ್ಯಾಷನಲ್‌ ಹೋಟೇಲ್‌ ಬಳಿ ಕಾರೊಂದು ರಸ್ತೆ ಡಿವೈಡರ್‌ ಗೆ ನುಗ್ಗಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಕಾರು ಚಾಲಕನನ್ನು ಕಲ್ಯಾಣಪುರದ ಆನಂದ್ ಪದ್ಮನಾಭನ್ ಎಂದು ಗುರುತಿಸಲಾಗಿದೆ. ಸಂತೇಕಟ್ಟೆಯಿಂದ ಉಡುಪಿಯ ಕಡೆಗೆ ಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತಗೆ ಕಾರು ಸಂಪೂರ್ಣ ಹಾನಿಯಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಚಾಲಕನನ್ನು ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಡುಪಿ ಸಂಚಾರಿ ಠಾಣೆಯ ವ್ಯಾಪ್ತಿಯಲ್ಲಿ […]