ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮುಸ್ಲಿಂ ಮಹಿಳೆಯರಿಂದ ಪೊಲೀಸರಿಗೆ ದೂರು

Tuesday, December 26th, 2023
Kalladaka-Prabhakar-bhat

ಮಂಗಳೂರು: ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ಉತ್ತರ ಕ್ಷೇತ್ರ ಸಮಿತಿಯ ವತಿಯಿಂದ ಸುರತ್ಕಲ್ ಪೊಲೀಸ್ ಠಾಣೆಗೆ ಆರ್‌ಎಸ್‌ ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದೂರು ನೀಡಿದೆ. ಮಹಿಳೆಯರನ್ನು ಅವಮಾನಿಸಿ, ಮುಸಲ್ಮಾನರ ಧಾರ್ಮಿಕ ಭಾವನೆಗಳಿಗೆ ಕುಂದುಂಟು ಮಾಡುವ ಜೊತೆಗೆ ಅಸಭ್ಯ ಭಾಷೆಯಲ್ಲಿ ಮಾತನಾಡಿದ್ದಾರೆ ಎಂದು ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕೆಂದು ದೂರಿನಲ್ಲಿ ಮಹಿಳೆಯರು ಹೇಳಿದ್ದಾರೆ. ಕೋಮುಗಲಭೆಗೆ ಪ್ರಭಾಕರ ಭಟ್‌ ಪ್ರಚೋದನೆ ನೀಡಿದ್ದಾರೆ ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ನೀಡಿರುವ ದೂರಿನಲ್ಲಿ […]

ನಮ್ಮ ಧರ್ಮ ಸಂಸ್ಕೃತಿ ರಕ್ಷಣೆ ನಮ್ಮ ಕರ್ತವ್ಯ, ಇವೆರಡೂ ಉಳಿದರೆ ಮಾತ್ರ ದೇಶ ಉಳಿಯಬಲ್ಲುದು- ಕಲ್ಲಡ್ಕ ಪ್ರಭಾಕರ ಭಟ್

Saturday, January 22nd, 2022
Kalikamba

ಮಂಗಳೂರು : ರಾಷ್ಟ್ರ ಮತ್ತು ಧರ್ಮ ವೈಶಿಷ್ಟ್ಯ ತೆಯೇ ಕಳೆದುಹೋಗಿದೆ. ನಾವು ಸೃಷ್ಟಿಯನ್ನು ಪೂಜಿಸುವವರು, ನಮಗೆ ಸಂಸ್ಕಾರ ನೀಡುವವಳೇ ತಾಯಿ, ಮಕ್ಕಳಲ್ಲೂ ತಾಯಿಯನ್ನು ಕಾಣುವ ಸಮಾಜ ನಮ್ಮದು, ಹಿಂದು ಸಮಾಜದ ಮೇಲೆ ಸಾಕಷ್ಟು ಆಕ್ರಮಣ ನಡೆದಿದೆ. ನಮ್ಮಮಕ್ಕಳಿಗೆ ನಮ್ಮತನವನ್ನು ತಿಳಿಸುವ ಕೆಲಸ ಆಗಬೇಕು, ನಮ್ಮ ಧರ್ಮ ಸಂಸ್ಕೃತಿ ರಕ್ಷಣೆ ನಮ್ಮ ಕರ್ತವ್ಯ, ಇವೆರಡೂ ಉಳಿದರೆ ಮಾತ್ರ ದೇಶ ಉಳಿಯಬಲ್ಲುದು, ಹಣದ ಹಿಂದೆ ಗುಣ ಬರುವುದಿಲ್ಲ, ಗುಣದ ಹಿಂದೆ ಹಣ ತನ್ನಷ್ಟಕ್ಕೆ ಬರುತ್ತದೆ. ಧರ್ಮಪ್ರಧಾನ ರಾಷ್ಟ್ರ ನಮ್ಮದಾಗಬೇಕು, ಹಿಂದು […]

ಕಲ್ಲಡ್ಕ ಡಾ| ಪ್ರಭಾಕರ ಭಟ್‌ರವರ ವಿಡಿಯೋ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿ ಕಿಡಿಗೇಡಿಗಳು, ದೂರು

Wednesday, April 28th, 2021
Prabhakara Bhat

ಬಂಟ್ವಾಳ:  ಆರೆಸ್ಸೆಸ್ ಮುಖಂಡ ಕಲ್ಲಡ್ಕ ಡಾ| ಪ್ರಭಾಕರ ಭಟ್‌ರವರ ಕುರಿತು ಅವಹೇಳಕಾರಿ ವೀಡಿಯೋವೊಂದನ್ನು ಸೃಷ್ಟಿಸಿ ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ ಎಂದು ಆರೋಪಿಸಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಕುರಿತು ಭಜರಂಗದಳದ ಜಿಲ್ಲಾ ಸಹ ಸಂಚಾಲಕ ಗುರುರಾಜ್ ಬಂಟ್ವಾಳ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳ ಪತ್ತೆಗೆ ಆಗ್ರಹಿಸಿದ್ದಾರೆ. ಯಾವುದೋ ಆ್ಯಪ್‌ನ ಸಹಾಯದಿಂದ ಹಿಂದಿ ಹಾಡಿಗೆ ಅವರ ಮುಖದ ಮೂಲಕ ಅಭಿನಯ ಮಾಡುವ ರೀತಿಯಲ್ಲಿ ವಿಡಿಯೋದಲ್ಲಿ ಚಿತ್ರಿಸಲಾಗಿದೆ ಎಂದು ದೂರು ನೀಡಲಾಗಿದೆ.

ವಾಟ್ಸಪ್ ಗ್ರೂಪ್ ನಲ್ಲಿ ಹರಿದಾಡುತ್ತಿದೆ ಕಲ್ಲಡ್ಕ ಪ್ರಭಾಕರ ಭಟ್ ಕೊರೋನಾದಿಂದ ಸಾವಿನ ಸುದ್ದಿ

Friday, August 28th, 2020
Kalladka Prabhakara Bhat

ಮಂಗಳೂರು :  ಆರ್.ಎಸ್.ಎಸ್. ಮಧ್ಯ ಕ್ಷೇತ್ರೀಯ ಕಾರ್ಯಕಾರಿಣಿ ಸದಸ್ಯ ಕಲ್ಲಡ್ಕ ಪ್ರಭಾಕರ ಭಟ್ ಕೊರೋನಾದಿಂದ ಸಾವನ್ನಪ್ಪಿದ್ದಾರೆ ಎಂದು ಆರ್ ಎಸ್ ಎಸ್ ಟೆರರಿಸ್ಟ್ ಗ್ರೂಪ್ ಎಂಬ ಹೆಸರಿನ ವಾಟ್ಸಪ್ ಗ್ರೂಪ್ ನಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗಿದೆ. ವಿದೇಶಿ ಮೂಲದ ಸಂಖ್ಯೆಯಲ್ಲಿ ಪ್ರಭಾಕರ ಭಟ್ ಸಾವು ಎಂಬ ಬಗ್ಗೆ ಸುಳ್ಳು ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ  ಪ್ರತಿಕ್ರಿಯಿಸಿದ ಕಲ್ಲಡ್ಕ ಪ್ರಭಾಕರ ಭಟ್, ನಾನು ಆರೋಗ್ಯವಾಗಿದ್ದೇನೆ, ಯಾವುದೇ ತೊಂದರೆಯಿಲ್ಲ. ಪುತ್ತೂರಿನಲ್ಲಿ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ, ಸುಳ್ಳು ಸುದ್ದಿ ಹಬ್ಬಿರುವ ಬಗ್ಗೆ ಮಿತ್ರರೊಬ್ಬರಿಂದ ಮಾಹಿತಿ ಸಿಕ್ಕಿತು. ಕೆಲವೊಂದು ಜನರಿಗೆ  ಇಂಥ ಕೆಲಸ […]

ಕಲ್ಲಡ್ಕ ಪ್ರಭಾಕರ ಭಟ್ರಿಗೆ ತಕ್ಕ ಪಾಠ ಕಲಿಸುತ್ತೇವೆ : ಧನಂಜಯ

Wednesday, January 15th, 2020
dhananjay

ಮಂಗಳೂರು:  ಡಿಕೆಶಿಯವರ ಯಾವುದೇ ರಾಜಕೀಯ ವಿಚಾರಗಳನ್ನು ಧರ್ಮಕ್ಕೆ ಎಳೆದರೆ, ನಾವು ಬಿಜೆಪಿಗರಿಗೆ ತಕ್ಕ ಪ್ರತ್ಯುತ್ತರ ನೀಡುತ್ತೇವೆ ಎಂದು ಕಾಂಗ್ರೆಸ್ ದ.ಕ ಜಿಲ್ಲಾ ಸಮಿತಿಯ ಪ್ರಚಾರ ಅಧ್ಯಕ್ಷ ಧನಂಜಯ ಅಡ್ಪಂಗಾಯ ಹೇಳಿದ್ದಾರೆ. ಕನಕಪುರದ ಕಪಾಲಿ ಬೆಟ್ಟದ ಮೇಲೆ ಏಸುಕ್ರಿಸ್ತನ ಪ್ರತಿಮೆ ಸ್ಥಾಪನೆಗೆ ನಮ್ಮ ಜಿಲ್ಲೆಯ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರು ಕೋಮು ಭಾವನೆ ಕೆರಳಿಸುವ ಹೇಳಿಕೆ ನೀಡಿದ್ದಾರೆ. ಏಸು ಪ್ರತಿಮೆಯನ್ನು ವಿರೋಧಿಸಿ ಪ್ರಭಾಕರ ಭಟ್ ಅವರು ದ.ಕ.ಜಿಲ್ಲೆಯಿಂದ ಎಷ್ಟು ಜನರನ್ನು ಅಲ್ಲಿಗೆ ಕರೆದೊಯ್ದು, ಪ್ರತಿಭಟನೆ ನಡೆಸಿದ್ದಾರೋ […]

ಕಲ್ಲಡ್ಕ ಪ್ರಭಾಕರ ಭಟ್‌ ಹತ್ಯೆಗೆ ದುಷ್ಕರ್ಮಿಗಳ ಸಂಚು

Friday, January 11th, 2019
Kalladka Prabhakar bhat

ಮಂಗಳೂರು: ಆರ್‌ಎಸ್‌ಎಸ್‌ನ ಹಿರಿಯ ಮುಖಂಡ ಡಾ| ಕಲ್ಲಡ್ಕ ಪ್ರಭಾಕರ ಭಟ್‌ ಸಹಿತ ಮೂವರು ಹಿಂದೂ ಮುಖಂಡರ ಹತ್ಯೆಗೆ ದುಷ್ಕರ್ಮಿಗಳು ಸಂಚು ರೂಪಿಸಿದ್ದಾರೆ ಎಂಬ ಮಾಹಿತಿ ಹಬ್ಬಿದ್ದು, ಮೂವರೂ ನಾಯಕರು ತಮ್ಮ ಸುರಕ್ಷೆ ಬಗ್ಗೆ ಎಚ್ಚರಿಕೆ ವಹಿಸಿದ್ದಾರೆೆ. ಕೇಂದ್ರ ಗುಪ್ತಚರ ಇಲಾಖೆಯ ಮಾಹಿತಿಯನುಸಾರ ಈ ಮೂವರ ಸುರಕ್ಷೆಗೆ ಪೊಲೀಸ್‌ ಇಲಾಖೆ ಎಚ್ಚರ ವಹಿಸಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಮಂಗಳೂರಿನ ಪೊಲೀಸ್‌ ಅಧಿಕಾರಿಗಳು ಇದನ್ನು ದೃಢಪಡಿಸಲು ನಿರಾಕರಿಸಿದ್ದಾರೆ. ವಿಹಿಂಪ ಮುಖಂಡ ಶರಣ್‌ ಪಂಪ್‌ವೆಲ್‌ ಅವರಿಗೆ ಗುರುವಾರ ಬೆಳಗ್ಗೆ ಪೊಲೀಸ್‌ […]

ಫೇಸ್ಬುಕ್ ನಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಅವಹೇಳನಕಾರಿ ಪೋಸ್ಟ್

Tuesday, January 30th, 2018
prabhakar-bhat

ಮಂಗಳೂರು: ಹಿರಿಯ ಆರ್.ಎಸ್.ಎಸ್ ನಾಯಕ ಕಲ್ಲಡ್ಕ ಪ್ರಭಾಕರ ಭಟ್ ರಿಗೆ ಅವಮಾನ ಮಾಡಿ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಲಾಗಿದ್ದು ವೈರಲ್ ಆಗಿದೆ. ಈ ಪೋಸ್ಟ್ ನಲ್ಲಿ ಬಳಸಿರುವ ಭಾಷೆ ವಿರುದ್ಧ ತೀವ್ರ ಟೀಕೆ ವ್ಯಕ್ತವಾಗಿದೆ. ಜನವರಿ 28ರಂದು ‘ಟ್ರೂ ಮೀಡಿಯಾ ನೆಟವರ್ಕ್’ ಎನ್ನುವ ಫೇಸ್ಬುಕ್ ಪೇಜ್ ನಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಆರ್.ಎಸ್.ಎಸ್ ಯೂನಿಫಾರ್ಮ್ ನಲ್ಲಿರುವ ಚಿತ್ರವನ್ನು ಪೋಸ್ಟ್ ಮಾಡಲಾಗಿದೆ. ‘ನಾನು ಹಿಂದು’ವೆಂದರೆ ಕೋಮುವಾದವೇ? ಕಲ್ಲಡ್ಕ ಪ್ರಭಾಕರ್ ಭಟ್ ಸಂದರ್ಶನ ಇದರಲ್ಲಿ ಪ್ರಭಾಕರ್ ಭಟ್ ಸೂರ್ಯ ನಮಸ್ಕಾರ […]

ಕಲ್ಲಡ್ಕ: ಧನ ಸಹಾಯವನ್ನು ನಿಲ್ಲಿಸಿದ ಸರ್ಕಾರಕ್ಕೆ ಅನ್ನ ಸೃಷ್ಟಿಸುವ ಪಾಠ

Tuesday, October 24th, 2017
kalladka

ಮಂಗಳೂರು: ಅನ್ನ ಕಿತ್ತುಕೊಂಡ ಸರ್ಕಾರಕ್ಕೆ ಅನ್ನ ಸೃಷ್ಟಿಸುವ ಪಾಠ ಹೇಳಿಕೊಟ್ಟಿದ್ದಾರೆ. ಕಲ್ಲಡ್ಕ ಶಾಲೆಗೆ ಮಧ್ಯಾಹ್ನ ಊಟಕ್ಕಾಗಿ ಬರುತ್ತಿದ್ದ ಧನ ಸಹಾಯವನ್ನು ನಿಲ್ಲಿಸಿದ ರಾಜ್ಯ ಸರ್ಕಾರಕ್ಕೆ ಕಲ್ಲಡ್ಕ ಶಾಲೆಯ ಮಕ್ಕಳು ಸೆಡ್ಡು ಹೊಡೆದಿದ್ದಾರೆ. ಸುದೇಕಾರು ಎಂಬಲ್ಲಿನ ಶಾಲೆಯ ಗದ್ದೆಯಲ್ಲಿ ಶಾಲಾ ಮಕ್ಕಳು ಶುದ್ಧ ಸಾವಯವ ಬಂಗಾರದ ಬೆಳೆ ಬೆಳೆದಿದ್ದಾರೆ. ಕಲ್ಲಡ್ಕ ಶಾಲೆಯ ಮಕ್ಕಳೇ ನಾಟಿ ಮಾಡಿ ಗೊಬ್ಬರ ಹಾಕಿ ಪೋಷಿಸಿದ್ದಾರೆ. ಮಕ್ಕಳ ಬೆವರು ಈಗ ಭತ್ತವಾಗಿ ಪರಿವರ್ತನೆಗೊಂಡಿದೆ. ಸುಮಾರು ಎರಡು ಎಕರೆ ಗದ್ದೆಯಲ್ಲಿ ಶಾಲಾ ಮಕ್ಕಳು ಸೇರಿ ಭತ್ತ […]

ಕಲ್ಲಡ್ಕ ಪ್ರಭಾಕರ ಭಟ್ ಅವರ ಮೇಲೆ ದ್ವೇಷ ಸಾಧಿಸಲು ಶಾಲೆಗಳಿಗೆ ಅನುದಾನ ರದ್ದುಗೊಳಿಸಿದೆ : ಶೋಭಾ ಕರಂದ್ಲಾಜೆ

Thursday, August 17th, 2017
Shobha Karandlaje

ಮಂಗಳೂರು : ರಾಜ್ಯ ಸರ್ಕಾರದ ದ್ವೇಷ ರಾಜಕಾರಣದ ಫಲವಾಗಿ ಕಲ್ಲಡ್ಕದ ಶಾಲೆಗಳಿಗೆ ಅನುದಾನ ರದ್ದುಗೊಳಿಸಲಾಗಿದೆ. ಡಾ .ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಗುರಿಯಾಗಿಸಿ ರಾಜ್ಯ ಸರ್ಕಾರ ಶಾಲಾ ಮಕ್ಕಳ ಹೊಟ್ಟೆಯ ಮೇಲೆ ರಾಜಕೀಯ ದ್ವೇಷ ಸಾಧಿಸಿದೆ ಎಂದು ಶೋಭಾ ಕರಂದ್ಲಾಜೆ ಆರೋಪಿಸಿದರು . ಶಾಲೆಗಳಿಗೆ ಅನುದಾನ ಕಾಂಗ್ರೆಸ್ ಸರಕಾರದ ತೀರ್ಮಾನ 2004ರಲ್ಲಿ ಕಾಂಗ್ರೆಸ್ ಸರ್ಕಾರ ಇರುವಾಗಲೇ ದೇವಾಲಯಗಳಿಂದ ಶಾಲೆಗಳಿಗೆ ಅನುದಾನ ನೀಡುವ ನಿರ್ಧಾರ ಕೈಗೊಂಡು ಆದೇಶ ಹೊರಡಿಸಲಾಗಿತ್ತು. ಆ ಸಂದರ್ಭದಲ್ಲಿ ಜೇವರ್ಗಿ, ಹೂವಿನಹಡಗಲಿ , ಹೊಳೆನರಸೀಪುರ ಸೇರಿದಂತೆ […]