ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನದಲ್ಲಿ ಹರಕೆ ಕೋಲ ನೆರವೇರಿಸಿದ ಯು.ಟಿ ಖಾದರ್

Monday, February 5th, 2024
UT-Khader-Panolibailu

ಮಂಗಳೂರು: ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ ಖಾದರ್ ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನದಲ್ಲಿ ಹರಕೆ ಕೋಲ ನೆರವೇರಿಸಿದ್ದಾರೆ. ಸ್ಥಳೀಯ ಮುಖಂಡರೊಂದಿಗೆ ಪೂಜಾ ಕೈಂಕರ್ಯಗಳಲ್ಲಿ ಭಾಗಿಯಾಗಿದ್ದ ಖಾದರ್, ಸಂಪ್ರದಾಯ ಬದ್ಧವಾಗಿ ಕೋಲ ನೆರವೇರಿಸಿ ಕಲ್ಲುರ್ಟಿ-ಕಲ್ಕುಡ ದೈವಗಳ ಆಶೀರ್ವಾದ ಪಡೆದಿದ್ದಾರೆ. ಯು.ಟಿ ಖಾದರ್ ಅವರೊಂದಿಗೆ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜಾವ ಮತ್ತಿತ್ತರು ಭಾಗಿಯಾಗಿದ್ದರು.

ಚಲನಚಿತ್ರ ನಟಿ ತಾರಾ ಕುಟುಂಬ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನಕ್ಕೆ ಭೇಟಿ

Tuesday, January 5th, 2021
Tara

ಬಂಟ್ವಾಳ  : ಚಲನಚಿತ್ರ ನಟಿ ಹಾಗೂ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಕುಟುಂಬ ಸೋಮವಾರ  ಪ್ರಸಿದ್ಧ ಕಾರಣಿಕದ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನಕ್ಕೆ ಭೇಟಿ ನೀಡಿದರು. ಕ್ಷೇತ್ರದ ಕಾರಣಿಕ ಶಕ್ತಿಯನ್ನು ನಂಬಿ ಪಣೋಲಿಬೈಲಿನ ಶ್ರೀ ಕಲ್ಲುರ್ಟಿ ತಾಯಿ ದರ್ಶನ ಪಡೆಯುವುದಕ್ಕೆ ಇದೇ ಮೊದಲ ಬಾರಿಗೆ ಕ್ಷೇತ್ರಕ್ಕೆ ಭೇಟಿ ನೀಡಿದ್ದೇನೆ ಎಂದು ಹೇಳಿದ್ದಾರೆ. ತಾರ ಅವರ ತಾಯಿ ಪುಷ್ಪಮ್ಮ, ಉದ್ಯಮಿ ವೆಂಕಟೇಶ್, ಶ್ರೀ ಆದಿಮಾಯೆ ಮಹಾಲಕ್ಮೀ ಮಂದಿರದ ಪಾತ್ರಿ ರಾಜೇಶ್, ಬೆಂಗಳೂರು ಉದ್ಯಮಿ ಗಣೇಶ್, […]

ಪನೋಲಿಬೈಲು ಕಲ್ಲುರ್ಟಿ ದೈವಸ್ಥಾನದಲ್ಲಿ ಗುತ್ತಿಗೆಯನ್ನು ಹಿಂದೂಗಳ ಹೊರತು ಅನ್ಯ ಮತೀಯರಿಗೆ ನೀಡಬಾರದು: ಆಡಳಿತಾಧಿಕಾರಿಯವರಿಗೆ ಮನವಿ

Friday, October 21st, 2016
Panolibailu

ಬಂಟ್ವಾಳ: ಇತಿಹಾಸ ಪ್ರಸಿದ್ದ ಬಂಟ್ವಾಳ ತಾಲೂಕಿನ ಕಲ್ಲುರ್ಟಿ ದೈವಸ್ಥಾನದಲ್ಲಿ ವಾರ್ಷಿಕ ಉತ್ಸವಾದಿಗಳು ನಡೆಯುವ ಸಂದರ್ಭ ದೈವಸ್ಥಾನದ ವಿದ್ಯುತ್ ಅಲಂಕಾರ, ದೈವಸ್ಥಾನಕ್ಕೆ ಬಣ್ಣ ಬಳಿಯುವುದು, ಪುಪ್ಪಾಲಂಕಾರ ಮಾಡುವ ಗುತ್ತಿಗೆಯನ್ನು ಹಿಂದೂಗಳ ಹೊರತು ಅನ್ಯ ಮತೀಯರಿಗೆ ನೀಡಬಾರದು ಎಂದು ಆಗ್ರಹಿಸಿ ಬಂಟ್ವಾಳ ತಾ. ಹಿಂದೂ ಪರಿಷತ್ ಹಾಗೂ ಭಜರಂಗದಳ ಸಜೀಪ ವಲಯದ ವತಿಯಿಂದ ಆಡಳಿತಾಧಿಕಾರಿಯವರಿಗೆ ಮನವಿ ನೀಡಲಾಯಿತು. ಕಳೆದ ವಾರ್ಷಿಕ ಉತ್ಸವ ಸಂದರ್ಭ ಅನ್ಯಮತೀಯರಿಗೆ ಗುತ್ತಿಗೆಯನ್ನು ನೀಡಿದ ಕಾರಣ ಪುಷ್ಪಾಲಂಕಾರ ಮಾಡುವಾಗ ನಾಗನ ಕಟ್ಟೆಗೆ ತುಳಿಯುವುದು, ಹಿಂದೂ ಹುಡುಗಿಯರನ್ನು ಚುಡಾಯಿಸುವುದು, […]