ಕೊರೋನಾ ಸೋಂಕಿತ ಯುವಕನಿಗೆ ಕಲ್ಲಿನಿಂದ ಹೊಡೆದು ಗ್ರಾಮಬಿಟ್ಟು ಹೋಗುವಂತೆ ಬೆದರಿಕೆ

Saturday, May 15th, 2021
Stone

ಮೈಸೂರು: ಇತರರಿಗೂ ಸೋಂಕು ತಗಲುವ ಹಿನ್ನೆಲೆಯಲ್ಲಿ ಗ್ರಾಮಬಿಟ್ಟು ಹೋಗುವಂತೆ ಕೊರೋನಾ ಸೋಂಕಿತ ಯುವಕನ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಮೈಸೂರಿನ ಕರಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪಂಚಾಯತ್ ಸದಸ್ಯರು ಯುವಕನಿಗೆ ಕೊರೋನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮನೆಯಲ್ಲಿಯೇ ಇರುವಂತೆ ಸೂಚಿಸಿದ್ದು, ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವ ಭರವಸೆ ನೀಡಿದ್ದರು. ಆದರೆ, ಮನೆ ಬಳಿ ಕುಳಿತಿದ್ದ ಮುತ್ತೇ ಗೌಡ ಹಾಗೂ ಬಲರಾಮ್ ಎಂಬ ಕಿಡಿಕೇಡಿಗಳು ಗುಂಪು ಸೇರಿಸಿ ಸೋಂಕಿತನ ಮೇಲೆ ಏಕಾಏಕಿ ಕಲ್ಲಿನಿಂದ ದಾಳಿ ನಡೆಸಿದ್ದಾರೆ. ಅಲ್ಲದೆ, ಇತರೆ […]

ಉಪ್ಪಿನಂಗಡಿ : ಕೆಎಸ್​ಆರ್​ಟಿಸಿ ಬಸ್ಸಿಗೆ ಕಲ್ಲು ತೂರಾಟ ನಡೆಸಿದ ಆರೋಪಿ ಬಂಧನ

Friday, January 31st, 2020
shabeer

ಮಂಗಳೂರು : ಕೆಎಸ್ಆರ್ಟಿಸಿ ಬಸ್ಸಿಗೆ ಕಲ್ಲು ತೂರಾಟ ನಡೆಸಿದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ತಣ್ಣೀರುಪಂಥ ಗ್ರಾಮದ ಬಾಯತ್ತಾರುವಿನ ಮಹಮ್ಮದ್ ಶಬೀರ್ (19) ಬಂಧಿತ ಆರೋಪಿ. ಮಂಗಳೂರು ಗೋಲಿಬಾರ್ ನಡೆದ ಮರುದಿನ ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಪ್ಪೆಟ್ಟು ಎಂಬಲ್ಲಿ ಕೆಎಸ್ಆರ್ಟಿಸಿ ಬಸ್ಸಿಗೆ ಕಲ್ಲು ತೂರಲಾಗಿತ್ತು. ಇದರಿಂದ ಬಸ್ಸಿನ ಗಾಜಿಗೆ ಹಾನಿಯಾಗಿತ್ತು. ಪ್ರಕರಣ ಸಂಬಂಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.  

ಮಂಗಳೂರಿನಲ್ಲಿ ಬಸ್ಸುಗಳಿಗೆ ಕಲ್ಲು ತೂರಾಟ : ಇಬ್ಬರು ಆರೋಪಿಗಳ ಬಂಧನ

Friday, September 6th, 2019
kallu-torata

ಮಂಗಳೂರು : ನಗರದಲ್ಲಿ ಬಸ್ ಗಳಿಗೆ ಕಲ್ಲುತೂರಾಟ ನಡೆಸಿದ ಇಬ್ಬರು ಆರೋಪಿಗಳನ್ನು ಸೆ.06 ಶುಕ್ರವಾರ ನಗರದ ಪೊಲೀಸರು ಬಂಧಿಸಿದ್ದಾರೆ. ಕುದ್ರೋಳಿಯ ಅಬ್ದುಲ್ ಮುನ್ನಾನ್ (21) ಮತ್ತು ಜೆಪ್ಪು ನಿವಾಸಿ ಮಾಹಿನ್ ಅಬ್ದುಲ್ ರಹಮಾನ್ (18) ಬಂಧಿತ ಆರೋಪಿಗಳು. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ನ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಅವರ ಬಂಧನವನ್ನು ವಿರೋಧಿಸಿ ರಾಜ್ಯದ ಹಲವೆಡೆ ಪ್ರತಿಭಟನೆ ನಡೆಯುತ್ತಿದ್ದು, ಈ ವೇಳೆ ನಗರದ ವಿವಿಧೆಡೆ ಬೈಕ್ ನಲ್ಲಿ ಬಂದ ಕಿಡಿಗೇಡಿಗಳು ಫಳ್ನೀರ್ ಮತ್ತು ನಂದಿಗುಡ್ಡೆಯಲ್ಲಿ […]

ಡಿಕೆಶಿ ಬಂಧನ : ಮಂಗಳೂರಿನಲ್ಲಿ ಬಸ್‌ಗಳ ಮೇಲೆ ಕಲ್ಲು ತೂರಾಟ

Wednesday, September 4th, 2019
kallu-torata

ಮಂಗಳೂರು: ಮಾಜಿ ಸಚಿವ, ಕಾಂಗ್ರೆಸ್‌ ನ ಹಿರಿಯ ನಾಯಕ ಡಿ ಕೆ ಶಿವಕುಮಾರ್‌ ಅವರ ಬಂಧನವನ್ನು ವಿರೋಧಿಸಿ ರಾಜ್ಯದ ಹಲವೆಡೆ ಪ್ರತಿಭಟನೆ ನಡೆಯುತ್ತಿದ್ದು, ಮಂಗಳೂರಿನಲ್ಲೂ ಬಸ್‌ ಗೆ ಕಲ್ಲು ತೂರಿದ ಘಟನೆ ನಡೆದಿದೆ. ಬೈಕ್‌ ನಲ್ಲಿ ಬಂದ ಕಿಡಿಗೇಡಿಗಳು ನಗರದ ನಂದಿಗುಡ್ಡೆ ಮತ್ತು ಫಳ್ನೀರ್‌ ನಲ್ಲಿ ಖಾಸಗಿ ಬಸ್‌ ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆಂದು ವರದಿಯಾಗಿದೆ. ಡಿಕೆಶಿ ಬಂಧನ ವಿರೋಧಿಸಿ ಮಂಗಳವಾರ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿಯಲ್ಲಿ ಐದು ಬಸ್‌ ಗಳಿಗೆ ಕಲ್ಲು ತೂರಾಟ […]

ಡಿಕೆಶಿ ಬಂಧನ : ಕೆಲವೆಡೆ ಪ್ರತಿಭಟನೆ, ಬಸ್‌ಗೆ ಬೆಂಕಿ

Wednesday, September 4th, 2019
bus

ರಾಮನಗರ : ಮಾಜಿ ಸಚಿವ, ಹಿರಿಯ ಕಾಂಗ್ರೆಸ್‌ ನಾಯಕ ಡಿ ಕೆ ಶಿವಕುಮಾರ್‌ ಅವರನ್ನು ಅಕ್ರಮ ಹಣ ಸಾಗಾಟ ಆರೋಪದ ಹಿನ್ನಲೆಯಲ್ಲಿ ಇಡಿ ಅಧಿಕಾರಿಗಳು ದೆಹಲಿಯಲ್ಲಿ ಬಂಧಿಸಿದ ಪ್ರಕರಣವನ್ನು ಖಂಡಿಸಿ ರಾಮನಗರ, ಕನಕಪುರ ಸೇರಿದಂತೆ ರಾಜ್ಯದ ಹಲವೆಡೆ ಪ್ರತಿಭಟನೆ ನಡೆಯುತ್ತಿದೆ. ಡಿ ಕೆ ಶಿವಕುಮಾರ್‌ ಅವರ ಅಭಿಮಾನಿಗಳು ಬುಧವಾರ ಬೆಳಿಗ್ಗೆ ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರಕಾರ ಮತ್ತು ಬಿಜೆಪಿ ವಿರುದ್ದ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಯುತ್ತಿದೆ. ಮಾಜಿ ಸಚಿವ ಡಿ ಕೆ ಶಿವಕುಮಾರ್‌ ಅವರ ಬಂಧನವನ್ನು […]

ಬಂಟ್ವಾಳ : ಬಸ್ ಗಳ ಮೇಲೆ ಕಲ್ಲು ತೂರಾಟ ಹಲವರಿಗೆ ಗಾಯ

Tuesday, June 25th, 2019
bus stoned

ಬಂಟ್ವಾಳ : ಪೆರ್ಲ ಸಮೀಪ ಅಕ್ರಮ ಗೋ ಸಾಗಾಟಗಾರರ ಮೇಲೆ ಹಲ್ಲೆ ನಡೆಸಿ ಹಣ ಹಾಗೂ ಪಿಕಪ್ ವಾಹನ ದರೋಡೆ ಮಾಡಿದ್ದಾರೆ ಎಂದು  ಕೇಸು ದಾಖಲಾದ ಬೆನ್ನಲ್ಲೇ  ಬಂಟ್ವಾಳ  ತಾಲೂಕಿನ ಹಲವೆಡೆ ಖಾಸಗಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಎಂಬಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಇದರಿಂದ ಸುಮಾರು ಮೂರು ಬಸ್ ಗಳಿಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ. ಕಿಡಿಗೇಡಿಗಳು ಸೂರಿಕುಮೇರು, ಕುದ್ರೆಬೆಟ್ಟು, ಪಾಣೆಮಂಗಳೂರಿನಲ್ಲಿ ಖಾಸಗಿ ಬಸ್ ಗಳಿಗೆ ಕಲ್ಲೆಸೆದು ಹಾನಿ ಮಾಡಿದ ಪ್ರತ್ಯೇಕ ಘಟನೆಗಳು ವರದಿಯಾಗಿವೆ. ಬೈಕ್ ನಲ್ಲಿ ಬಂದ ಕಿಡಿಗೇಡಿಗಳು ವಿಟ್ಲ […]

ಫರಂಗಿಪೇಟೆಯಲ್ಲಿ ಬಸ್‌ಗಳ ಮೇಲೆ ಕಲ್ಲು ತೂರಾಟ…ರೈ ಸಾಮರಸ್ಯ ನಡಿಗೆಗೆ ಆರಂಭದಲ್ಲೇ ವಿಘ್ನ

Tuesday, December 12th, 2017
firangipete

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಫರಂಗಿಪೇಟೆಯಲ್ಲಿ ಇಂದು ಸಚಿವ ಬಿ‌.ರಮಾನಾಥ್ ರೈ ನೇತೃತ್ವದಲ್ಲಿ ಸಾಮರಸ್ಯ ನಡಿಗೆಗೆ ಚಾಲನೆ ಸಿಗುವ ಮುನ್ನವೇ ವಿಘ್ನ ಎದುರಾಗಿದೆ. ಫರಂಗಿಪೇಟೆಯಲ್ಲಿ ಕೆಎಸ್‌ಆರ್‌ಟಿಸಿಯ ಬಸ್‌ಗಳ ಮೇಲೆ ಕಿಡಿಗೇಡಿಗಳು ಕಲ್ಲು‌ ತೂರಾಡಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಈ ಘಟನೆ ನಡೆದಿದೆ. ಕಲ್ಲು ತೂರಾಟದಿಂದ ಹೆಚ್ಚಿನ‌ ಗಾಯಗಳಾಗದೆ ಬಸ್‌ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಚಿವ ರೈ ಅವರ ಸಾಮರಸ್ಯ ನಡಿಗೆ ಫರಂಗಿಪೇಟೆಯಿಂದ ಕಲ್ಲಡ್ಕ ಮಾರ್ಗವಾಗಿ ಮಾಣಿಯವರೆಗೆ ನಡೆಯಲಿದ್ದು, ಶಾಂತಯುತವಾಗಿ ಸಾಗಬೇಕಾಗಿದ್ದ ಜಾಥಾಕ್ಕೆ ಆರಂಭದಲ್ಲೇ ದುಷ್ಕರ್ಮಿಗಳಿಂದ‌ ವಿಘ್ನ ಎದುರಾಗಿದೆ. ಸಚಿವ […]

ತಮಿಳುನಾಡಿನಲ್ಲಿ ಕನ್ನಡಿಗರ ಮೇಲಿನ ದೌರ್ಜನ್ಯ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕನ್ನಡಿಗರಿಂದ ಆಕ್ರೋಶ

Monday, September 12th, 2016
banglaore-protest

ಬೆಂಗಳೂರು: ತಮಿಳುನಾಡಿನಲ್ಲಿ ಕನ್ನಡಿಗರ ಮೇಲಿನ ದೌರ್ಜನ್ಯ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕನ್ನಡಿಗರಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಇಲ್ಲಿನ ಮೈಸೂರು ರಸ್ತೆ ಹಾಗೂ ನೈಸ್ ರಸ್ತೆಯಲ್ಲಿ ಎರಡು ಲಾರಿಗಳಿಗೆ ಬೆಂಕಿ ಹಚ್ಚಲಾಗಿದೆ. ತಮಿಳುನಾಡು ರಾಜ್ಯದ ನೋಂದಣೆ ಸಂಖ್ಯೆ ಹೊಂದಿದ್ದ ಲಾರಿಗಳಿಗೆ ಬೆಂಕಿ ಹಚ್ಚಲಾಗಿದೆ. ಪರಿಣಾಮ ಎರಡೂ ಲಾರಿಗಳು ರಸ್ತೆಯಲ್ಲೇ ಸುಟ್ಟು ಕರಕಲಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯ ನಡೆಸಿವೆ. ಇನ್ನು ನೈಸ್ ರಸ್ತೆಯಲ್ಲಿ ಮತ್ತೊಂದು ಲಾರಿಗೆ ಉದ್ರಿಕ್ತರಿಂದ ಕಲ್ಲು ತೂರಾಟ ನಡೆದಿದೆ. ತಮಿಳುನಾಡಿದ ಒಟ್ಟ ಐದು […]

ಕೆಎಸ್‌ಆರ್‌ಟಿಸಿ ರಾಜಹಂಸ ಬಸ್‌ ಮೇಲೆ ಕಲ್ಲು ತೂರಾಟ ನಡೆಸಿದ ದುಷ್ಕರ್ಮಿಗಳು

Monday, November 3rd, 2014
KSRTC bus

ಮಂಗಳೂರು : ಕೆಲವು ಅಪರಿಚಿತ ದುಷ್ಕರ್ಮಿಗಳು ಟೈರ್‌ಗೆ ಬೆಂಕಿ ಹಚ್ಚಿ ಕೆಎಸ್‌ಆರ್‌ಟಿಸಿ ರಾಜಹಂಸ ಬಸ್‌ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಸೋಮವಾರ ಮುಂಜಾನೆ ಅಡ್ಯಾರ್‌ ಕಟ್ಟೆಯಲ್ಲಿ ನಡೆದಿದೆ. ಜಿಲ್ಲೆಯಲ್ಲಿ ಕೆಲವು ಸಂಘಟನೆಗಳು ಬಂದ್‌ಗೆ ಕರೆ ನೀಡಿವೆ ಎಂಬ ವದಂತಿ ಹರಡಿದ ಹಿನ್ನೆಲೆಯಲ್ಲಿ ಮುಂಜಾನೆ ಅಡ್ಯಾರ್‌ ಕಟ್ಟೆಯಲ್ಲಿ ಮೊದಲು ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲೇ ಟೈರ್‌ಗೆ ಬೆಂಕಿ ಹಚ್ಚಲಾಯಿತು ಅಲ್ಲದೇ ದುಷ್ಕರ್ಮಿಗಳು ಆದೇ ಮಾರ್ಗದಲ್ಲಿ ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಮೇಲೆ ಕಲ್ಲು ತೂರಾಟ ನಡೆಸಿ ಗಾಜುಗಳನ್ನು ಪುಡಿಗೈದರು. ಘಟನಾಸ್ಥಳಕ್ಕೆ […]

ಉಳ್ಳಾಲ :ಕಿಡಿಗೇಡಿಗಳಿಂದ ಕಲ್ಲು ತೂರಾಟ ಬಸ್ಸುಗಳಿಗೆ ಹಾನಿ

Monday, April 22nd, 2013
Communal clash in Ullal

ಮಂಗಳೂರು : ಕ್ಷುಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ಏರ್ಪಟ್ಟು ಘಟನೆ ವಿಕೋಪಕ್ಕೆ ತಿರುಗಿ, ಘಟನೆಯಿಂದ ಹಲವಾರು ಮಂದಿ ಗಾಯಗೊಂಡು, ಬಸ್ ಗಳಿಗೆ ಕಲ್ಲೆಸೆದು ಹಾನಿಗೊಳಿಸಿದ ಘಟನೆ ನಿನ್ನೆ ಉಳ್ಳಾಲ ಬಳಿಯ ಮೊಗವೀರಪಟ್ನದ ಬೀಚ್ ಬಳಿ ನಡೆದಿದೆ. ರವಿವಾರ ಸಂಜೆ  ಮೊಗವೀರಪಟ್ನ ಬೀಚ್‌ ಬಳಿ  ಮಕ್ಕಳೊಂದಿಗೆ ಬೀಚ್‌ ವೀಕ್ಷಿಸಲು ಬಂದಿದ್ದ ಮದನಿ ನಗರ ನಿವಾಸಿ ಖತೀಜಮ್ಮ ಮೇಲೆ ಬೀಚ್ ಬಳಿ ಕಾರಿನಲ್ಲಿ  ತಿರುಗಾಡುತ್ತಿದ್ದ ತಂಡವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಮಹಿಳೆ ಗಾಯಗೊಂಡಿದ್ದು, ಇದನ್ನು ಪ್ರಶ್ನಿಸಿದ  ಅಬೀಬ್‌ […]