ಶಿಕ್ಷಕನ ತಲೆಯ ಮೇಲೆ ಕಸದಬುಟ್ಟಿ ಹಾಕಿ ವಿಕೃತಿ, ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Saturday, December 11th, 2021
Student Attack

ದಾವಣಗೆರೆ: ತರಗತಿಯಲ್ಲಿ ಹರಡಿದ್ದ ಕಸವನ್ನು ನೋಡಿ ಬುದ್ಧಿ ಹೇಳಿದ ಶಿಕ್ಷಕನ ತಲೆಯ ಮೇಲಕ್ಕೇ ಕಸದಬುಟ್ಟಿ ಹಾಕಿ ವಿಕೃತಿ ಮೆರೆದ ವಿದ್ಯಾರ್ಥಿಗಳ ಮೇಲೆ ಇದೀಗ ಪೊಲೀಸ್ ಪ್ರಕರಣ ದಾಖಲಾಗಿದೆ. ಈ ಕುಚೇಷ್ಟೆಯ ವಿಡಿಯೋ ವೈರಲ್ ಆಗಿತ್ತು. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕು ನಲ್ಲೂರಿನ ಸರ್ಕಾರಿ ಜೂನಿಯರ್ ಕಾಲೇಜಿನ ಹೈಸ್ಕೂಲ್ ವಿಭಾಗದಲ್ಲಿ ಹಿಂದಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವ ಪ್ರಕಾಶ್ ಬೋಗಾರ್‌, ಡಿಸೆಂಬರ್ 3 ರಂದು ಪಾಠ ಮಾಡುತ್ತಿದ್ದ ಸಂದರ್ಭದಲ್ಲಿ ತರಗತಿಯ ಕೆಲವು ವಿದ್ಯಾರ್ಥಿಗಳು ಹಲ್ಲೆ ನಡೆಸಿ ಅಸಭ್ಯವಾಗಿ ವರ್ತಿಸಿದ್ದರು. ಈ […]