ಜಿಹಾದಿಗಳಿಗೆ ಕಾಂಗ್ರೆಸ್ ಸರಕಾರ ಪ್ರೋತ್ಸಾಹ -ಕ್ಯಾ.ಬ್ರಿಜೇಶ್ ಚೌಟ ಖಂಡನೆ

Friday, April 19th, 2024
Brijesh-Chowta

ಮಂಗಳೂರು : ಹುಬ್ಬಳ್ಳಿಯಲ್ಲಿ ಹಿಂದೂ ಯುವತಿ ನೇಹಾಳನ್ನು ಬರ್ಬರವಾಗಿ ಹತ್ಯೆ ನಡೆಸಿರುವುದನ್ನು ದ.ಕ.ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ತೀವ್ರವಾಗಿ ಖಂಡಿಸಿದ್ದಾರೆ. ಕಾಂಗ್ರೆಸ್ ಸರಕಾರದ ಅತಿಯಾದ ಓಲೈಕೆ ನೀತಿಗೆ ಮುಗ್ದ ಹಿಂದೂ ಯುವತಿ ಬಲಿಯಾಗಿದ್ದಾಳೆ. ಓಟಿಗಾಗಿ ಎಸ್ ಡಿಪಿಐ ಜತೆ ಕೈಜೋಡಿಸಿರುವ ಕಾಂಗ್ರೆಸ್ ಜಿಹಾದಿಗಳಿಗೆ ಪ್ರೋತ್ಸಾಹ ನೀಡುವ ಹೀನಕೃತ್ಯಕ್ಕೆ ಇಳಿದಿದೆ. ಇದರ ಪರಿಣಾಮ ಕರ್ನಾಟಕದಲ್ಲಿ ಹಿಂದೂಗಳು ಸದಾ ಆತಂಕದಿಂದ ಬದುಕುವ ಸ್ಥಿತಿ ನಿರ್ಮಾಣವಾಗಿದ ಜೈ ಶ್ರೀರಾಮ್ ಘೋಷಣೆ ಕೂಗಿದರೆ ಹಲ್ಲೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ನ ಈ ನೀಚ […]

ರಾಜ್ಯದಲ್ಲಿ ತೀವ್ರ ಬರಗಾಲವಿದ್ದರೂ ಕಾಂಗ್ರೆಸ್ ಸರಕಾರ, ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿಯಲ್ಲಿ ತೊಡಗಿದೆ

Wednesday, November 22nd, 2023
vijayendra

ಮಂಗಳೂರು : ಬಿಜೆಪಿ ಸರಕಾರವು ಬೇಸಿಗೆಯಲ್ಲೂ ರೈತರಿಗೆ ತೊಂದರೆ ಆಗಬಾರದೆಂದು ಕನಿಷ್ಠ 7 ಗಂಟೆ ವಿದ್ಯುತ್ ಕೊಟ್ಟಿತ್ತು, ರಾಜ್ಯದಲ್ಲಿ ತೀವ್ರ ಬರಗಾಲವಿದ್ದರೂ ರಾಜ್ಯದ ಕಾಂಗ್ರೆಸ್ ಸರಕಾರ, ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳು ನಿಗಮ, ಮಂಡಳಿಗಳ ಅಧ್ಯಕ್ಷರ ನೇಮಕಾತಿ, ಲೋಕಸಭಾ ಚುನಾವಣೆ ಕಡೆ ಗಮನ ಹರಿಸುತ್ತಿದೆ ಎಂದು ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರನವರು ಆಕ್ಷೇಪಿಸಿದರು. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬೇಸಿಗೆಯಲ್ಲಿ ವಿದ್ಯುತ್ ಕೊರತೆ ಆಗುವುದಾಗಿ ಮುಂಚಿತವಾಗಿಯೇ ಆಲೋಚಿಸಿ ಬಿಜೆಪಿ ಸರಕಾರವು ಹೊರ ರಾಜ್ಯಗಳಿಂದ ವಿದ್ಯುತ್ […]

ಕಾನೂನುಬಾಹಿರವಾಗಿ ಮಸೀದಿಗೆ ಮಂಜೂರು ಮಾಡಿದ ಜಾಗ ವಾಪಾಸ್ ಪಡೆದ ಸರಕಾರ

Saturday, June 26th, 2021
masjid

ಉಡುಪಿ : ವಕ್ಫ್ ಬೋರ್ಡ್ ಮೂಲಕ 2018ರಲ್ಲಿ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಕೊಡವೂರು ಪಳ್ಳಿಜಿಡ್ಡದ ಕಲ್ಮತ್ ಮಸೀದಿಗೆ ಮಂಜೂರು ಮಾಡಲಾದ ಕೊಡವೂರು ಗ್ರಾಮದ ಸರ್ವೆ ನಂ 53/6ರಲ್ಲಿ 0.67 ಸೆಂಟ್ಸ್ ಜಾಗವನ್ನು ವಾಪಸ್  ಪಡೆದು ಜೂ.22ರಂದು ಸರಕಾರದ ಹೆಸರಿಗೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ. ಕಂದಾಯ ಸಚಿವ ಆರ್.ಅಶೋಕ್ ಸೂಚನೆ ಮೇರೆಗೆ ಉಡುಪಿ ಜಿಲ್ಲಾಧಿಕಾರಿ ಸಲ್ಲಿಸಿರುವ ವರದಿಯಂತೆ ಮರಳಿ ವಶಕ್ಕೆ ಪಡೆಯಲಾಗಿದೆ. ಮಸೀದಿಗೆ ಈ ಜಾಗವನ್ನು ಮಂಜೂರು ಮಾಡಿರುವ ಬಗ್ಗೆ ಸ್ಥಳೀಯವಾಗಿ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಕಂದಾಯ ಸಚಿವರನ್ನು […]

ಶೀಘ್ರವೇ ರೈತರಿಗೆ ಪರಿಹಾರದ ಚೆಕ್ ವಿತರಿಸಲಾಗುವುದು: ಮೇಯರ್ ಕೆ. ಹರಿನಾಥ್

Thursday, January 5th, 2017
MCC

ಮಂಗಳೂರು: ನಾಗರಿಕರ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ತುಂಬೆ ಕಿಂಡಿ ಅಣೆಕಟ್ಟನ್ನು ಅಭಿವೃದ್ಧಿಪಡಿಸುವ ಸಂದರ್ಭ ಮುಳುಗಡೆಯಾದ ಭೂಮಿಯ ಒಡೆತನವುಳ್ಳ ಎಂಟು ಮಂದಿ ರೈತರಿಗೆ 2.81 ಲಕ್ಷ ರೂ. ಪರಿಹಾರ ನೀಡಲಾಗಿದೆ. ಇನ್ನುಳಿದ ಎಂಟು ಮಂದಿಗೆ ಶೀಘ್ರವೇ ಪರಿಹಾರದ ಚೆಕ್ ವಿತರಿಸಲಾಗುವುದು ಎಂದು ಮೇಯರ್ ಕೆ. ಹರಿನಾಥ್ ಭರವಸೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರ ರೈತರಿಗೆ ಅನ್ಯಾಯ ಮಾಡುವುದಿಲ್ಲ. ಆದರೆ, ಮಾಜಿ ಸಿಎಂ ಯಡಿಯೂರಪ್ಪ ರೈತರ ಪರಿಹಾರ ನೀಡಿಲ್ಲ ಎಂದು ಗುಲ್ಲೆಬ್ಬಿಸಿ ಹೋರಾಟ ಮಾಡುವುದಾಗಿ […]

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ: ಸಂಜೀವ ಮಠಂದೂರು

Thursday, January 5th, 2017
BJP

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಂಕಿ ಹಚ್ಚುವವರಿಗಿಂತ ಬೆಂಕಿ ಹರಡುವವರು ಹಾಗೂ ಆ ಬೆಂಕಿಯಲ್ಲಿ ಬೇಳೆ ಬೇಯಿಸುವವರ ಸಂಖ್ಯೆ ಜಾಸ್ತಿ ಆಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದರು ನೋವಿನಿಂದ ಹೇಳಿದ ಮಾತಿಗೆ ಕಾಂಗ್ರೆಸ್ ನಾಯಕರು ಬಣ್ಣ ಬಳಿಯಲು ಹೋಗುತ್ತಿದ್ದಾರೆ. ಕೇವಲ ಒಂದು ಮತದ ತುಷ್ಟೀಕರಣ ಮಾಡುತ್ತಾ ರಾಜಕೀಯ ಮಾಡುತ್ತಿದ್ದಾರೆ. ರಿಯಾಝ್ ಭಟ್ಕಳ್ ಸೇರಿದಂತೆ ಜಿಲ್ಲೆಯಲ್ಲಿ ಭಯೋತ್ಪಾದನಾ ಚಟುವಟಿಕೆಗೆ ಸಂಬಂಧಿಸಿದಂತೆ ನಂಟಿದ್ದರೂ ಕಾನೂನೂ ವ್ಯವಸ್ಥೆ ಭದ್ರವಾಗಿಲ್ಲ. ಒಂದೇ ವರ್ಷದಲ್ಲಿ ಜಿಲ್ಲೆಯ […]

ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಆಡಳಿತ ನಡೆಸಲು ವಿಫಲವಾಗಿದೆ -ಸುನೀಲ್ ಕುಮಾರ್

Thursday, March 5th, 2015
sunil Kumar

ಮಂಗಳೂರು : ದ.ಕ.ಜಿಲ್ಲಾ ಬಿಜೆಪಿ ಕಚೇರಿಯ ಅಕ್ಷಯ ಸಭಾ ಭವನದಲ್ಲಿ ಮಂಗಳೂರು ವಿಭಾಗದ ಪೂರ್ಣಾವಧಿ ಕಾರ್ಯಕರ್ತರ ಯೋಜನೆ, ಕಾರ್ಯ ನಿರ್ವಹಣೆಯ ಬಗ್ಗೆ ಕಾರ್ಯಾಗಾರ ಗುರುವಾರ, ಮಾರ್ಚ್ 5 ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ಉಪಾಧ್ಯಕ್ಷರು/ವಿಪಕ್ಷ ಮುಖ್ಯ ಸಚೇತಕರಾದ ಶ್ರೀ ಸುನೀಲ್ ಕುಮಾರ್ ಉದ್ಘಾಟಿಸುತ್ತಾ, ರಾಜ್ಯದ ಕಾಂಗ್ರೇಸ್ ಸರಕಾರ 2 ವರ್ಷದ ಆಡಳಿತದಲ್ಲಿ ವೈಫಲ್ಯಗಳಿಂದ ಕೂಡಿದ್ದು, ವಿವಾದಿತ ಹೇಳಿಕೆಗಳನ್ನು ನೀಡುತ್ತಾ ಅಭಿವೃದ್ಧಿಯ ಕಡೆಗೆ ಗಮನ ನೀಡದೆ ಭ್ರಷ್ಟಾಚಾರಕ್ಕೆ ನೀರೆರೆಯುತ್ತಾ, ಆಡಳಿತ ನಡೆಸುತ್ತಿರುವುದನ್ನು ಕಾಣುತ್ತಿದ್ದೇವೆ. ಈ ಬಗ್ಗೆ ಪಕ್ಷದ […]

ಉಗ್ರ ಹೋರಾಟ ಮಾಡಲು ಸಿದ್ಧರಿದ್ದೇವೆ : ಶ್ರೀರಾಮ ಸೇನೆ

Saturday, October 19th, 2013
shri-ram-sena

ಮಂಗಳೂರು: ಸೌಜನ್ಯ ಹತ್ಯೆ ಪ್ರಕರಣವಾಗಿ ಧರ್ಮಸ್ಥಳ ಕ್ಷೇತ್ರ ಮತ್ತು ವೀರೇಂದ್ರ ಹೆಗ್ಗಡೆಯವರ ಬಗ್ಗೆ ಅವಹೇಳನಕಾರಿ ಮಾತುಗಳು ಕೇಳಿಬರುತ್ತಿದೆ. ಇದನ್ನು ಶ್ರೀರಾಮಸೇನೆ ಸಹಿಸುವುದಿಲ್ಲ, ಅದಕ್ಕಾಗಿ ಉಗ್ರ ಹೋರಾಟ ಮಾಡಲು ಸಿದ್ಧರಿದ್ದೇವೆ ಎಂದು ಶ್ರೀರಾಮ ಸೇನೆ ರಾಜ್ಯ ಉಪಾ ಧ್ಯಕ್ಷ ಕುಮಾರ್ ಮಾಲೆಮಾರ್ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಶ್ರೀರಾಮ ಸೇನೆ ರಾಜ್ಯ ಉಪಾಧ್ಯಕ್ಷ ಕುಮಾರ್ ಮಾಲೆಮಾರ್ ಅವರು, ಸೌಜನ್ಯ ಸಾವಿನ ಬಗ್ಗೆ ಮಹೇಶ್ ಶೆಟ್ಟಿ ತಿಮರೋಡಿ ಧ್ವನಿ ಎತ್ತಿದ್ದಾರೆ. ಆದರೆ ಇದನ್ನು ಖಂಡಿಸುವವರು ತುಂಬಾ […]