ರಾಜ್ಯದಲ್ಲಿ ಸುಭದ್ರ ಸರ್ಕಾರವನ್ನು ನೀಡಲು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ : ಉಮ್ಮನ್ ಚಾಂಡಿ

Friday, May 3rd, 2013
Oommen Chandy

ಮಂಗಳೂರು : ಬಿಜೆಪಿ ಪಕ್ಷದ ಭ್ರಷ್ಟಾಚಾರ, ಒಳಜಗಳದಿಂದ ಬೇಸತ್ತ ಕರ್ನಾಟಕದ ಜನತೆ ಉತ್ತಮ ಆಡಳಿತದ ನಿರೀಕ್ಷೆಯಲ್ಲಿದ್ದು, ಇಂತಹ ಆಡಳಿತವನ್ನು ನೀಡಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯವಿದೆ ಆದ್ದರಿಂದ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್  ನಿಶ್ಚಿತ ಗೆಲುವು ಸಾಧಿಸುವುದು ಎಂದು ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಹೇಳಿದರು. ಅವರು ಗುರುವಾರ ದಕ್ಷಿಣ ವಿಧಾನಸಭಾ ಚುನಾವಣಾ ಕಚೇರಿಯಲ್ಲಿ ಏರ್ಪಡಿಸಿದ್ದ ಪತ್ರಿಕಾಘೋಷ್ಟಿಯಲ್ಲಿ ಮಾತನಾಡುತ್ತಾ ಜಾತ್ಯಾತೀತ ರಾಷ್ಟ್ರ ನಿರ್ಮಾಣ ಕಾಂಗ್ರೆಸ್ ನ ಧ್ಯೇಯವಾಗಿದ್ದು ಇದಕ್ಕೆ ವ್ಯತಿರಿಕ್ತವಾದ ಅನುಭವವನ್ನು ಕರ್ನಾಟಕದ ಜನತೆ ಪ್ರಸ್ತುತ […]

ಉಡುಪಿಯಲ್ಲಿ 3 ದಶಕಗಳ ಬಳಿಕ ಅಧಿಕಾರಕ್ಕೆ ಬಂದ ಕಾಂಗ್ರೆಸ್

Monday, March 11th, 2013
Congress in Udupi

ಉಡುಪಿ : ಉಡುಪಿ ನಗರಸಭೆಯ ಇತಿಹಾಸದಲ್ಲಿ 3 ದಶಕಗಳಲ್ಲಿ ಇದೆ ಮೊದಲ ಬಾರಿಗೆ ಕಾಂಗ್ರೆಸ್ ಗೆಲುವು ದಾಖಲಿಸಿಕೊಂಡಿದೆ. ಒಟ್ಟು 35 ವಾರ್ಡುಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ 22 ವಾರ್ಡ್ ಗಳಲ್ಲಿ ಗೆಲುವನ್ನು ಸಾದಿಸಿದರೆ ಬಿಜೆಪಿ ಪಕ್ಷ ಕೇವಲ 12 ಸೀಟುಗಳನ್ನು ಗೆದ್ದುಕೊಂಡು ತೀವ್ರ ನಿರಾಸೆಯನ್ನನುಭವಿಸಿದೆ. ಒಂದು ಸ್ಥಾನ ಪಕ್ಷೇತರ ಅಭ್ಯರ್ಥಿಯ ಪಾಲಾಗಿದೆ. ಕಾರ್ಕಳ ಪುರಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ಗೆಲುವು ದಾಖಲಿಸಿದ್ದು, ಒಟ್ಟು 23 ವಾರ್ಡುಗಳಲ್ಲಿ ಕಾಂಗ್ರೆಸ್‌ 12 ಸ್ಥಾನಗಳನ್ನು, ಬಿಜೆಪಿ 11 ಸ್ಥಾನಗಳನ್ನು ಪಡೆದಿದೆ. ಕುಂದಾಪುರ ಪುರಸಭೆಯಲ್ಲಿ […]