ಸರ್ಕಾರಿ ಬಸ್ ಓಡಾಟ ನಡೆಸುತ್ತಿದ್ದ ರೂಟ್ ನಲ್ಲಿ ಖಾಸಗಿ ಬಸ್ ಓಡಾಟ

Wednesday, April 7th, 2021
private Bus

ಮಂಗಳೂರು: ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಮತ್ತು ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಬರೆಯಲು ತಯಾರಿ ನಡೆಸುತ್ತಿರುವ ಸಮಯದಲ್ಲಿ ರಸ್ತೆ ಸಾರಿಗೆ ನಿಗಮದ ನೌಕರರ ಮುಷ್ಕರ ಸರಿಯಲ್ಲ ಎಂದು ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲೀಕರ ಸಂಘ ಹೇಳಿದೆ. ಮಂಗಳೂರಿನಲ್ಲಿ ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಮಾಲೀಕರು ಮುಷ್ಕರದ  ದಿನ ಸೇವೆಗಳನ್ನು ಒದಗಿಸಿದ್ದಾರೆ. ಸಾರಿಗೆ ಸಂಸ್ಥೆ ನೌಕರರು ನಡೆಸುತ್ತಿರುವ ಮುಷ್ಕರವು ಮಂಗಳೂರಿನಲ್ಲಿ ಪ್ರಯಾಣಿಕರ ಮೇಲೆ ಯಾವುದೇ ಪರಿಣಾಮ ಬೀರಿಲ್ಲ.  ನಗರದಲ್ಲಿ ಖಾಸಗಿ ಬಸ್ ಗಳೇ  ಓಡಾಟ ನಡೆಸುತ್ತಿದೆ. ಗ್ರಾಮೀಣ ಭಾಗದಲ್ಲಿ ಮತ್ತು ಜಿಲ್ಲೆಯ ದೂರದೂರಿಗೆ ಮತ್ತು […]