ಬೈಕ್ ಗೆ ಹಿಂಬದಿಯಿಂದ ಕಾರು ಡಿಕ್ಕಿ, ಗಂಭೀರ ಗಾಯಗೊಂಡ ಬೈಕ್ ಸವಾರ ಮೃತ್ಯು

Wednesday, October 4th, 2023
car-accident

ಬಂಟ್ವಾಳ : ಬೈಕ್ ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬಂಟ್ವಾಳದ ಕಾಮಾಜೆ ಕ್ರಾಸ್ ಬಳಿ ಇಂದು ನಡೆದಿದೆ. ವಾಮದಪದವು ಸಮೀಪದ ಪಾಂಗಲ್ಪಾಡಿ ನಿವಾಸಿ ಶ್ರೀನಿವಾಸ (ಬಾಬು) ಉಡುಪ ಮೃತಪಟ್ಟವರು. ವಾಮದಪದವನಿಂದ ಬಿಸಿರೋಡಿಗೆ ಬರುತ್ತಿದ್ದ ವೇಳೆ ಹಿಂಬದಿಯಿಂದ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ. ಶ್ರೀನಿವಾಸ ಅವರು ಬಂಟ್ವಾಳ ದಿಂದ ಬರುತ್ತಿದ್ದು,ಕಾಮಾಜೆ ಕ್ರಾಸ್ ಬಳಿ ತಿರುಗಿಸಿದ ವೇಳೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಇವರನ್ನು ತುಂಬೆ […]

ಕುಂಪಲ ಬೈಪಾಸ್ ಅಫಘಾತ : ಬಾಲಕ ಸಾವು

Saturday, December 5th, 2020
Ayan

ಮಂಗಳೂರು :  ಕುಂಪಲ ಬೈಪಾಸ್‌ ಬಳಿ ರಸ್ತೆ ದಾಟುತ್ತಿದ್ದ ಸಂದರ್ಭ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಬಾಲಕ ಡಿ.5ರ ಶನಿವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಮೃತಪಟ್ಟ ಬಾಲಕನನ್ನು ಬಶೀರ್‌‌‌‌‌ ಅಹ್ಮದ್‌ ಹಾಗೂ ರಿಯಾನ್‌ ದಂಪತಿಗಳ ಹಿರಿಯ ಪುತ್ರ ಐಯಾನ್‌ (16) ಎಂದು ಗುರುತಿಸಲಾಗಿದೆ. ಇವರು ಕುಂಪಲ ಬೈಪಾಸ್‌ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದರು. ಡಿ..4ರ ಶುಕ್ರವಾರದಂದು ಸಂಜೆ ಐಯಾನ್‌‌ ತನ್ನ ಮನೆಯ ಮುಂದಿನ ರಸ್ತೆ ದಾಟುತ್ತಿದ್ದ ಸಂದರ್ಭ ತಲಪಾಡಿಯಿಂದ ಮಂಗಳೂರು ಕಡೆ  ಹೋಗುತ್ತಿದ್ದ ರಿಟ್ಜ್‌‌ ಕಾರು […]

ಕಾರು ಡಿಕ್ಕಿ ಹೊಡೆದು ಲಾರಿಯಡಿಗೆ ಸಿಲುಕಿ ದ್ವಿ ಚಕ್ರವಾಹನ ಸವಾರ ದಾರುಣ ಸಾವು

Saturday, July 11th, 2020
ubaid ullal

ಮಂಗಳೂರು : ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಲಾರಿನಡಿಗೆ ಬಿದ್ದು ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲ ಸೇತುವೆಯಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ಉಳ್ಳಾಲ ಬಂಡಿಕೊಟ್ಯ ನಿವಾಸಿ ಉಬೈದ್(28) ಎಂದು ಗುರುತಿಸಲಾಗಿದೆ. ಉಬೇದ್‌ ಗೆ ಇದೇ ಜುಲೈ 23 ರಂದು ಮದುವೆ ಕೂಡ ನಿಶ್ಚಯವಾಗಿತ್ತು. ಹಿಂಬದಿ ಸವಾರ ಶಾಕಿರ್ ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಬೈದುಲ್ಲಾ ಅವರು ಶಾಕಿರ್ ಎಂಬಾತನ ಜೊತೆಗೂಡಿ ದ್ವಿಚಕ್ರ ವಾಹನದಲ್ಲಿ ಮಂಗಳೂರಿನಿಂದ ಉಳ್ಳಾಲಕ್ಕೆ ತೆರಳುತ್ತಿದ್ದಾಗ […]

ಮೀಜಾರ್ ಸಮೀಪ ಬಿಜೆಪಿ ಜಿಲ್ಲಾಧ್ಯಕ್ಷರ ಕಾರು ಇನ್ನೊಂದು ವಾಹನಕ್ಕೆ ಡಿಕ್ಕಿ

Wednesday, July 1st, 2020
sudarshan-car

ಮಂಗಳೂರು  : ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆಯವರ ಕಾರು ಇನ್ನೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ಜಖಂ ಗೊಂಡ ಘಟನೆ ಬುಧವಾರ ಮಧ್ಯಾಹ್ನಮೀಜಾರ್ ಸಮೀಪ ನಡೆದಿದೆ. ಕಾರನ್ನು ಸುದರ್ಶ ಅವರೇ ಚಲಾಯಿಸಿದ್ದು, ಘಟನೆಯಲ್ಲಿ ಸುದರ್ಶನ್ ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಿಜಾರ್ ಸಮೀಪ ಪಾದಚಾರಿಗೆ ಕಾರ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಿದ ವೇಳೆ ರಸ್ತೆ ಪಕ್ಕ ಕೆಸರಿಗೆ ಜಾರಿದ ಕಾರ್ ಮುಂಭಾಗದಲ್ಲಿ ಬರುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಮೂಡಬಿದ್ರೆ ಠಾಣಾ ಪೊಲೀಸರು ಭೇಟಿಕೊಟ್ಟು […]

ಬೆಳುವಾಯಿಯಲ್ಲಿ ಕಾರು ಡಿಕ್ಕಿ ನಾಲ್ವರಿಗೆ ಗಾಯ ವಿದ್ಯಾರ್ಥಿನಿ ಗಂಭೀರ

Tuesday, August 13th, 2019
belvai

ಮೂಡುಬಿದಿರೆ : ಬೆಳುವಾಯಿಯಲ್ಲಿ ಇನ್ನೋವಾ ಕಾರೊಂದು ಕಾಲೇಜು ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ವಿದ್ಯಾರ್ಥಿನಿ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳುವಾಯಿ ಮುಡಾಯಿ ಕಾಡು ನಿವಾಸಿ ಜಗನ್ನಾಥ ಮಡಿವಾಳರ ಪುತ್ರಿ , ಉಡುಪಿ ಹಿರಿಯಡ್ಕ ಸರಕಾರಿ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿನಿ ಶುಭಲಕ್ಷ್ಮಿ ಗಂಭೀರ ಗಾಯಗೊಂಡಿರುವ ವಿದ್ಯಾರ್ಥಿನಿ. ಬೆಳಿಗ್ಗೆ ನಾಲ್ವರು ವಿದ್ಯಾರ್ಥಿಗಳು ಕಾರ್ಕಳ ಕಡೆಗೆ ಹೋಗುವ ಬಸ್ಸಿಗಾಗಿ ಕಾಯುತ್ತಾ ನಿಂತಿದ್ದು ಈ ಸಂದರ್ಭದಲ್ಲಿ ಮೂಡುಬಿದಿರೆ ಕಡೆಯಿಂದ ಅತೀ ವೇಗದಿಂದ ಬಂದ ಇನ್ನೋವಾ ಕಾರು ಶುಭಲಕ್ಷ್ಮಿಗೆ ಢಿಕ್ಕಿ ಹೊಡೆದಿದ್ದು […]

ಕಾರುಗಳ ನಡುವೆ ಡಿಕ್ಕಿ 5 ಮಂದಿಗೆ ಗಾಯ

Monday, May 6th, 2019
Nelyadi

ಮಂಗಳೂರು : ಆ್ಯಂಬುಲೆನ್ಸ್ಗೆ ಸೈಡ್ ಕೊಡುವ ಸಂದರ್ಭದಲ್ಲಿ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಕೊಕ್ಕಡ ಎಂಬಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಅಪಘಾತದಲ್ಲಿ ಐದು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಎರಡು ಕಾರುಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಎರಡೂ ಕಾರಿನ ಮುಂಭಾಗ ತೀವ್ರವಾಗಿ ಜಖಂಗೊಂಡಿವೆ. ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸುತ್ತಿದ ಮಾರುತಿ ಸ್ವಿಫ್ಟ್ ಡಿಸೈರ್ ಹಾಗೂ ಪುತ್ತೂರಿನ ಮಾರುತಿ ಸೆಲರಿಯೋ ಅಪಘಾತಕ್ಕೊಳಗಾಗಿವೆ. ಅತೀ ವೇಗದಲ್ಲಿ ಕಾರು ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ಡಿಕ್ಕಿ ಇಬ್ಬರು ಮೃತ್ಯು

Friday, April 26th, 2019
accident

ಬಂಟ್ವಾಳ  : ಪಾಣೆಮಂಗಳೂರಿನ ಹಳೆಟೋಲ್ ಗೇಟ್ ಸಮೀಪ ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿ ಮತ್ತಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ  ಏ.26 ರ ಶುಕ್ರವಾರ 3 ಗಂಟೆ ವೇಳೆಗೆ ನಡೆದಿದೆ. ಪುತ್ತೂರಿನಿಂದ ಕಡೆಯಿಂದ ವೇಗವಾಗಿ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ಬಂಟ್ವಾಳ ಕಡೆಯಿಂದ ಹೋಗುತ್ತಿದ್ದ ಕಾರಿನ ನಡುವೆ ಮುಖಮುಖಿ ಢಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ಪ್ರಯಾಣಿಕರಾದ ಸರೋಜಿನಿ ಮತ್ತು ರುಕ್ಮಿಣಿ ಎಂಬಿಬ್ಬರು ಸಾವನ್ನಪ್ಪಿದ್ದಾರೆ. ಕಾರು ಚಾಲಕ ಹಾಗೂ ಅನುಷಾ ಎಂಬವರು […]

ಮೈಮೇಲೆ ವಾಹನ ಹರಿದು ದಂಪತಿಗಳು ಸಾವು

Wednesday, March 9th, 2016
Manjeshwara accident

ಮಂಜೇಶ್ವರ: ಸಂಚರಿಸುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿಹೊಡೆದು ಹೊರಗೆಸೆಯಲ್ಪಟ್ಟ ದಂಪತಿಗಳ ಮೇಲೆ ಬೇರೊಂದು ವಾಹನ ಹರಿದು ಈರ್ವರೂ ಮೃತಪಟ್ಟ ದಾರುಣ ಘಟನೆ ಮಂಗಳವಾರ ಸಂಜೆ ವಾಮಂಜೂರು ಚೆಕ್‌ಪೋಸ್ಟ್ ಸನಿಹದ ಪೆಟ್ರೋಲ್ ಪಂಪ್ ಬಳಿ ನಡೆದಿದೆ. ಮಂಜೇಶ್ವರದಿಂದ ಉಪ್ಪಳದತ್ತಬರುತ್ತಿದ್ದ ಆಕ್ಟಿವಾ ಸ್ಕೂಟರ್ ಗೆ ಉಪ್ಪಳ ಕಡೆಯಿಂದ ಮಂಗಳೂರಿನತ್ತ ಸಾಗುತ್ತಿದ್ದ ಲಾರಿಯೊಂದು ಬೇರೊಂದು ವಾಹನವನ್ನು ಹಿಂದಿಕ್ಕಿ ಹೋಗುವ ಭರದಲ್ಲಿ ಡಿಕ್ಕಿಹೊಡೆದಿದ್ದು,ಈ ವೇಳೆ ಸ್ಕೂಟರ್ ನಲ್ಲಿದ್ದ ಪಾವೂರು ಸೂಫಿಗುರಿ ನಿವಾಸಿ ಮೊಯ್ದೀನ್ ಕುಂಞಿಯವರ ಪುತ್ರ ಸಾಕೀರ್(35) ಹಾಗೂ ಅವರ ಪತ್ನಿ ಹಸೀನಾ(25)ರಸ್ತೆಗೆಸೆಯಲ್ಪಟ್ಟರು.ಈ ವೇಳೆ […]

ಮಾತೃಸಂಘದಿಂದ ಗ್ರಾ.ಪಂ.ಚುನಾವಣೆಯಲ್ಲಿ ಆಯ್ಕೆಯಾದ ಬಂಟ ಸದಸ್ಯರಿಗೆ ಅಭಿನಂದನೆ

Monday, July 20th, 2015
Bunts

ಮಂಗಳೂರು : ಬಂಟರ ಯಾನೆ ನಾಡವರ ಮಾತೃಸಂಘ ದ.ಕ. ವತಿಯಿಂದ ದ.ಕನ್ನಡ ಹಾಗೂ ಉಡುಪಿ ಜಿಲ್ಲೆಯ ಗ್ರಾಮಪಂಚಾಯತ್‌ಗಳಿಗೆ ಇತ್ತೀಚೆಗೆ ಜರಗಿದ ಚುನಾವಣೆಯಲ್ಲಿ ಆಯ್ಕೆಯಾದ ಬಂಟ ಸಮಾಜದ ಸದಸ್ಯರಿಗೆ ಅಭಿನಂದನಾ ಸಮಾರಂಭ ರವಿವಾರ ಬಂಟ್ಸ್‌ ಹಾಸ್ಟೆಲ್‌ನ ಎ.ಬಿ. ಶೆಟ್ಟಿ ಸಭಾಂಗಣದಲ್ಲಿ ಜರಗಿತು. ಕರ್ನಾಟಕದ ಮಾಜಿ ಸಚಿವ ಹಾಗೂ ಮಾಜಿ ಲೋಕಸಭಾ ಸದಸ್ಯ ಶ್ರೀ ಜಯಪ್ರಕಾಶ ಹೆಗ್ಡೆ ಅವರು ದೀಪ ಬೆಳಗಿಸುವ ಮೂಲಕ ಸಮಾರಂಭವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ತಮ್ಮ ಮೇಲಿರುವ ಹೊಣೆಗಾರಿಕೆ ಅರಿತುಕೊಂಡು ಜನರ ನಿರೀಕ್ಷೆಗಳಿಗೆ ಪೂರಕ […]