ಕಾಲೇಜಿಗೆ ಹೋದ ಯುವತಿ ಮನೆಗೆ ಮರಳಿ ಬಾರದೆ ನಾಪತ್ತೆ

Wednesday, December 22nd, 2021
Supriya

ಉಡುಪಿ : ಮನೆಯಿಂದ ಕಾಲೇಜಿಗೆ ಹೋದ ಯುವತಿಯೊಬ್ಬಳು  ಡಿ.15ರಂದು ವರು ಮನೆಗೆ ಮರಳಿ ಬಾರದೆ ನಾಪತ್ತೆಯಾಗಿದ್ದಾರೆ ಎಂದು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾರ್ಕಳ ತಾಲೂಕು ಮಾಳ ಗ್ರಾಮದ ಹುಕ್ರಟ್ಟೆ ಬೆಟ್ಟು ನಿವಾಸಿ ಸುಪ್ರಿಯಾ (18) ಕಾಣೆಯಾದ ಯುವತಿ. ಈಕೆ 5 ಅಡಿ 2 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ವೃತ್ತ ಕಚೇರಿ ದೂರವಾಣಿ ಸಂಖ್ಯೆ: 08258-231083, 9480805435, ಕಾರ್ಕಳ ಗ್ರಾಮಾಂತರ ಠಾಣೆ […]

ಸುರೇಂದ್ರ ಕುಲಾಲ್ ನಿಗೂಢ ಸಾವಿನ ಪ್ರಕರಣ-ಆರೋಪಿಗಳ ಜಾಮೀನು ಅರ್ಜಿ ವಜಾ

Saturday, July 29th, 2017
surendra Kulal

ಉಡುಪಿ: ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೋಳ ಎಂಬಲ್ಲಿ ನಿಗೂಢ ಸಾವಿಗೀಡಾಗಿರುವ ಸುರೇಂದ್ರ ಕುಲಾಲ್(28) ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ನಾಲ್ವರು ಆರೋಪಿಗಳ ಜಾಮೀನು ಅರ್ಜಿ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಿನ್ನೆ ತಿರಸ್ಕೃತಗೊಂಡಿದೆ. ಆರೋಪಿಗಳು ಸುರೇಂದ್ರ ಕುಲಾಲ್‌ನನ್ನು ಕೊಲೆಗೈದಿರುವ ಶಂಕೆಯಿದ್ದು, ಜಾಮೀನಿನ ಮೇಲೆ ಬಿಡುಗಡೆಗೊಳಿಸಿದಲ್ಲಿ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ. ಆದ್ದರಿಂದ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಎಂದು ಸರಕಾರಿ ಅಭಿಯೋಜಕಿ ಶಾಂತಿಬಾಯಿ ಅವರು ವಾದಿಸಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಆರೋಪಿಗಳಾದ ಜೀತು ಸಫಲಿಗ, ಮಹೇಶ್ […]