ಮಂಗಳೂರಿನಲ್ಲಿ ಖಾಸಗಿ ಶಾಲೆಗಳ ಫೀಸ್ ವಸೂಲಿ ಹಾವಳಿ : ಡಿಸಿ ಕಠಿಣ ಕ್ರಮದ ಎಚ್ಚರಿಕೆ

Thursday, June 10th, 2021
KV Rajendra

ಮಂಗಳೂರು : ನಗರದ ಶಾಲಾ, ಕಾಲೇಜು ಗಳು ವಿದ್ಯಾರ್ಥಿಗಳಿಂದ  ಬಲವಂತದ  ಫೀಸ್ ಕಲೆಕ್ಷನ್ ಆರಂಭಿಸಿದ್ದು, ಕೇವಲ ಆನ್ ಲೈನ್ ತರಗತಿ ನಡೆಸಿಯೇ ದುಬಾರಿ ಫೀಸ್ ಸಂಗ್ರಹಿಸಿರುವುದು, ಕಳೆದ ಶೈಕ್ಷಣಿಕ ವರ್ಷದ ಕೊರೋನಾ ಆರ್ಥಿಕ ಸಂಕಷ್ಟದ ನಡುವೆ ವರದಿಯಾಗಿದೆ. ಆರ್ಥಿಕ ಸಂಕಷ್ಟ ಮತ್ತು ಕೊರೋನಾ ಸಾಂಕ್ರಾಮಿಕದ ನಡುವೆ ವಿದ್ಯಾರ್ಥಿಗಳಿಂದ ಅಪಾರ ಫೀಸ್ ಹಣ ಪಡೆದಿರುವುದನ್ನು ಮತ್ತು ಕಳೆದ ವರ್ಷದ ಹಣ ವಸೂಲಾತಿ ಮಾಡಿರುವುದನ್ನು ತನಿಖೆ ಮಾಡಬೇಕು ಎಂದು ಪೋಷಕರು ಸರಕಾರವನ್ನು ಒತ್ತಾಯಿಸಿದ್ದಾರೆ. ಈ ರೀತಿ ಸಂಗ್ರಹ ಮಾಡಿದ  ಶಾಲಾ ಕಾಲೇಜುಗಳ ಆಡಳಿತ ಮಂಡಳಿಗೆ ದ.ಕ.ಜಿಲ್ಲಾಧಿಕಾರಿ […]

ಎಸ್​ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಕೋವಿಡ್ ಪ್ರಯೋಗಾಲಯ

Sunday, July 19th, 2020
sdm dharwad

ಧಾರವಾಡ: ಕೋವಿಡ್ ನಿಯಂತ್ರಣಕ್ಕೆ ಸರ್ಕಾರದ ಪ್ರಯತ್ನಗಳೊಂದಿಗೆ ಖಾಸಗಿ ಆಸ್ಪತ್ರೆಗಳು ಮತ್ತು ಸಾರ್ವಜನಿಕರ ಸಹಕಾರವೂ ಮುಖ್ಯ. ಲಾಕ್ಡೌನ್ಗಿಂತ ಸ್ವಯಂ ನಿರ್ಬಂಧ ಹೆಚ್ಚು ಪರಿಣಾಮಕಾರಿಯಾದುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು. ಎಸ್ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಕೋವಿಡ್ ಪ್ರಯೋಗಾಲಯ ಎಸ್ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಕೋವಿಡ್ ಪ್ರಯೋಗಾಲಯ ಸತ್ತೂರಿನ ಎಸ್ಡಿಎಂ ಆಸ್ಪತ್ರೆಯಲ್ಲಿ ಸಂಜೆ ಕೋವಿಡ್ ತಪಾಸಣೆ ವೈರಾಲಜಿ ಪ್ರಯೋಗಾಲಯ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಕೋವಿಡ್ ಸೋಂಕಿತರ ತ್ವರಿತ ಪತ್ತೆಗೆ ಮತ್ತೊಂದು ಪ್ರಯೋಗಾಲಯ ಪ್ರಾರಂಭವಾಗುತ್ತಿರುವುದು ನೆರವಾಗಲಿದೆ. ಕೊರೊನಾ ವಾರಿಯರ್ಗಳಾಗಿರುವ […]

ಪಿಯುಸಿ ಫಲಿತಾಂಶ ಆಯಾ ಕಾಲೇಜುಗಳಲ್ಲಿ ಬುಧವಾರ ಅಧಿಕೃತ ಫಲಿತಾಂಶ ಪ್ರಕಟ

Tuesday, July 14th, 2020
puc-result

ಮಂಗಳೂರು  : ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದೆ ಜೊತೆಗೆ ಉಡುಪಿ ಜಿಲ್ಲೆಯು ಶೇ.90.71 ಫಲಿತಾಂಶದೊಂದಿಗೆ ಪ್ರಥಮ ಸ್ಥಾನವನ್ನು ಹಂಚಿಕೊಂಡಿವೆ. ಪಿಯುಸಿ ಫಲಿತಾಂಶದ ಮೊದಲೆರಡು ಸ್ಥಾನಗಳು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ನಡುವೆ ಸ್ಪರ್ಧೆಯಲ್ಲಿತ್ತು. 2013ರಲ್ಲಿ ಉಡುಪಿ ಜಿಲ್ಲೆ ಶೇ.86.24 ಫಲಿತಾಂಶದೊಂದಿಗೆ ಅಗ್ರಸ್ಥಾನ ಪಡೆದಿದ್ದರೆ, 2014 ರಿಂದ 2016ರವರೆಗೆ ಸತತ ಮೂರು ವರ್ಷಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆ ಅಗ್ರಸ್ಥಾನ ವನ್ನು ತನ್ನ ಬಳಿ ಉಳಿಸಿಕೊಂಡಿತ್ತು. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ […]

‘ಕ್ಯಾರ್’ ಚಂಡಮಾರುತ ಭೀತಿ : ಇಂದು ಕರಾವಳಿಯ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

Friday, October 25th, 2019
cyar

ಮಂಗಳೂರು : ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾದ ‘ಕ್ಯಾರ್’ ಚಂಡಮಾರುತ ತೀವ್ರಗೊಳ್ಳುವ ಸಾಧ್ಯತೆ ಗೋಚರಿಸಿದ್ದು, ಮುಂದಿನ 48 ಗಂಟೆ ಕಾಲ ಭಾರಿ ಮಳೆ ಕರಾವಳಿಯನ್ನು ಅಪ್ಪಳಿಸುವ ಮುನ್ಸೂಚನೆ ದೊರೆತಿದೆ. ಗುರುವಾರ 15.4 ಡಿಗ್ರಿ ಉತ್ತರ ಅಕ್ಷಾಂಶ ಮತ್ತು 70.4 ಡಿಗ್ರಿ ಪೂರ್ವ ರೇಖಾಂಶದಲ್ಲಿ ವಾಯುಭಾರ ಕುಸಿತ ಪ್ರದೇಶವಿದ್ದು ಮಹಾರಾಷ್ಟ್ರದ ರತ್ನಗಿರಿಯಿಂದ 360 ಕಿ.ಮೀ. ಪಶ್ಚಿಮ-ನೈಋತ್ಯ ಮತ್ತು 490 ಕಿ.ಮೀ. ನೈಋತ್ಯ ಹಾಗೂ ಓಮನ್‌ನ ಸಲಾಹ್‌ನಿಂದ 1750 ಕಿ.ಮೀ. ಪೂರ್ವ-ಆಗ್ನೇಯ ದಿಕ್ಕಿನಲ್ಲಿ ಕೇಂದ್ರೀಕೃತವಾಗಿದೆ. ಚಂಡಮಾರುತ ಅ.25ರಂದು ಸಾಯಂಕಾಲದ ವರೆಗೆ ಪೂರ್ವ-ಈಶಾನ್ಯದತ್ತ […]