ಬಿಜೆಪಿ ಯುವ ಮೋರ್ಚಾ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ

Friday, September 18th, 2020
Kasaragod Protest

ಕಾಸರಗೋಡು : ಮಂಜೇಶ್ವರ ಶಾಸಕ ಎಂ.ಸಿ. ಖಮರುದ್ದೀನ್ ಹಾಗೂ ಕೇರಳ ಉನ್ನತ ಶಿಕ್ಷಣ ಸಚಿವ ಕೆ.ಟಿ. ಜಲೀಲ್ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಶುಕ್ರವಾರ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಗೆ ನಡೆಸಿದ ಪ್ರತಿಭಟನಾ ಜಾಥಾ ಹಿಂಸೆಗೆ ತಿರುಗಿತು. ವಿದ್ಯಾನಗರ ಬಿ.ಸಿ. ರೋಡ್ ನಿಂದ ಮೆರವಣಿಗೆ ಮೂಲಕ ಆಗಮಿಸಿದ ಕಾರ್ಯಕರ್ತರು ಜಿಲ್ಲಾಧಿಕಾರಿ ಗೇಟ್ ಬಳಿ ಹಾಕಲಾಗಿದ್ದ ಬ್ಯಾರಿಕೇಡ್ ಗಳನ್ನು ದೂಡಿ ಹಾಕಿ ಮುನ್ನುಗ್ಗಲು ಯತ್ನಿಸಿದ್ದು, ಕೆಲ ಕಾರ್ಯಕರ್ತರು ಬ್ಯಾರಿಕೇಡ್ ಮೂಲಕ ಜಿಲ್ಲಾಧಿಕಾರಿ ಕಚೇರಿ […]

ಟಿವಿ ವರದಿಗಾರನ ಪಾಸಿಟಿವ್ ವರದಿ ಬೆನ್ನಲ್ಲೇ ಕಾಸರಗೋಡು ಜಿಲ್ಲಾಧಿಕಾರಿ ಕೊರೊನಾ ಪರೀಕ್ಷೆ

Thursday, April 30th, 2020
Sajith babu

ಕಾಸರಗೋಡು : ಜಿಲ್ಲೆಯ ಪತ್ರಕರ್ತನೋರ್ವನಲ್ಲಿ ಸೋಂಕು ಪತ್ತೆಯಾದ ಹಿನ್ನಲೆ ಕಾಸರಗೋಡು ಜಿಲ್ಲಾಧಿಕಾರಿ ಡಿ. ಸಜಿತ್ ಬಾಬು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಜಿಲ್ಲೆಯ ಜಿಲ್ಲಾಧಿಕಾರಿ ಡಿ. ಸಜಿತ್ ಬಾಬು ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದು ವರದಿ ಕೈ ಸೇರಿದೆ. ಪತ್ರಕರ್ತನಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಸ್ವ ಕ್ವಾರಂಟೈನ್ ಗೆ ಒಳಗಾಗಿದ್ದರು. ಬುಧವಾರ ತಮ್ಮ ಗಂಟಲ ದ್ರವ ಪರೀಕ್ಷೆಗೆ ರವಾನಿಸಿದ್ದರು. ಇಂದು ಸಂಜೆ ಪರೀಕ್ಷಾ ವರದಿ ಕೈ ಸೇರಿದೆ. ಅಧಿಕಾರಿಯೊಬ್ಬರ ವರದಿಯ ನಿರೀಕ್ಷೆ ಯಲ್ಲಿ ಕಾಸರಗೋಡು ಜನರು ಆತಂಕ ಗೊಂಡಿದ್ದರು. ಗುರುವಾರ ದ ವೇಳೆಗೆ, ರಾಜ್ಯದಲ್ಲಿ […]

ಕೇರಳ ನೆರೆ ಸಂತ್ರಸ್ತರಿಗೆ ವಸ್ತು ರೂಪದ ನೆರವು : ಕಾಸರಗೋಡು ಜಿಲ್ಲಾಧಿಕಾರಿಗಳಿಗೆ ಹಸ್ತಾಂತರ

Friday, August 24th, 2018
cpim

ಮಂಗಳೂರು : ಭೀಕರ ಪ್ರವಾಹಕ್ಕೆ ತುತ್ತಾದ ಕೇರಳ ರಾಜ್ಯದ ನೆರೆ ಸಂತ್ರಸ್ತರಿಗೆ ಸಿಪಿಐ(ಎಂ) ದ.ಕ.ಜಿಲ್ಲಾ ಸಮಿತಿ ನೇತೃತ್ವದಲ್ಲಿ ಸಂಗ್ರಹಿಸಿದ್ದ ಅಕ್ಕಿ, ಸಕ್ಕರೆ ಸೇರಿದಂತೆ ಆಹಾರ ಸಾಮಾಗ್ರಿಗಳನ್ನು ಹಾಗೂ ಬಟ್ಟೆ ಬರೆಗಳನ್ನು ಕಾಸರಗೋಡು ಜಿಲ್ಲಾಧಿಕಾರಿಗಳಾದ ಡಾ.ಸಜಿತ್‌ಬಾಬು ರವರ ಮೂಲಕ ಹಸ್ತಾಂತರಿಸಲಾಯಿತು. ಕಳೆದ ಎರಡು ದಿನಗಳ ಅವಧಿಯಲ್ಲಿ ಮಂಗಳೂರು ಸೇರಿದಂತೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ನಿಧಿ ಸಂಗ್ರಹ ಹಾಗೂ ವಸ್ತು ರೂಪದ ಸಂಗ್ರಹಕ್ಕೆ ಕರೆ ನೀಡಲಾಗಿದ್ದು, ಜನತೆಯಿಂದ ವ್ಯಾಪಕ ಸ್ಪಂದನೆ ಬರುತ್ತಿದೆ. ಅಕ್ಕಿ, ಸಕ್ಕರೆ, ಎಣ್ಣೆ, ತೆಂಗಿನಕಾಯಿ ಸೇರಿದಂತೆ ಆಹಾರ […]