ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ನೇಮಕ

Tuesday, April 2nd, 2024
Kishan-Hegde

ಉಡುಪಿ : ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ನೇಮಕ ಮಾಡಿದ್ದಾರೆ. ಏಪ್ರಿಲ್ 01 ರಂದು ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರನ್ನು ನೇಮಕಾತಿ ಮಾಡಲಾಗಿದ್ದು, ಇತ್ತೀಚೆಗಷ್ಟೇ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ಅವರನ್ನು ನೇಮಿಸಲಾಗಿತ್ತು. ಕಾಂಗ್ರೆಸ್ ಪಕ್ಷದ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರು, ಪಕ್ಷದಲ್ಲಿ ಹಲವು ವರ್ಷಗಳಿಂದ ಸಾಕಷ್ಟು ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ.

ಒಂದೇ ತಿಂಗಳಲ್ಲಿ ಮೂರು ಹಿಂದೂ ಯುವಕರ ಕೊಲೆ ನಡೆದಿದೆ, ಪೊಲೀಸರು ಎಚ್ಚೆತ್ತು ಕೊಳ್ಳಬೇಕು

Wednesday, October 28th, 2020
vhp

ಮಂಗಳೂರು: ಕರಾವಳಿಯಲ್ಲಿ ಒಂದೇ ತಿಂಗಳಲ್ಲಿ ಮೂರು ಹಿಂದೂ ಯುವಕರ ಕೊಲೆ ನಡೆದಿದೆ. ಕಿಶನ್ ಹೆಗ್ಡೆ, ಸಂಪತ್ ಕುಮಾರ್, ಹಾಗೂ ಸುರೇಂದ್ರ ಬಂಟ್ವಾಳ್ ಎಂಬ ಯುವಕ ರು ಪರಸ್ಪರ ವೈಯಕ್ತಿಕ ದ್ವೇಷ ಗಂಗ್ವಾರ್ ಗಳಿಗೆ ಬಲಿಯಾಗಿದ್ದರೆ, ಇಂತಹ ಕೃತ್ಯಗಳು ಮುಂದೆ ನಡೆಯಬಾರದು ಎಂದು ಪೊಲೀಸರಿಗೆ ಮನವಿ ಸಲ್ಲಿಸಿರುವುದಾಗಿ ವಿಶ್ವ ಹಿಂದೂ ಪರಿಷತ್ತಿನ ಶರಣ್ ಪಂಪ್ ವೆಲ್ ಹೇಳಿದ್ದಾರೆ. ವಿಶ್ವ ಹಿಂದೂ ಪರಿಷತ್ ಕಚೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಇಂತಹ ಕೃತ್ಯಗಳು ನಡೆದ ಕೂಡಲೇ ಆ ಪ್ರದೇಶದ ಯುವಕರನ್ನು ಕರೆಸಿ […]

ಸುರೇಂದ್ರ ಬಂಟ್ವಾಳ್ ಕೊಲೆ ಆರೋಪಿ ಸತೀಶ್ ಕುಲಾಲ್ ಮತ್ತು ಇನ್ನೊಬ್ಬ ಸಹಚರನ ಬಂಧನ

Sunday, October 25th, 2020
Surendra Bantwal

ಬಂಟ್ವಾಳ : ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆ.20ರಂದು ರಾತ್ರಿ ಸುರೇಂದ್ರ ಬಂಟ್ವಾಳ್ ನನ್ನು ಬಿ.ಸಿ.ರೋಡಿನ ಪ್ಲ್ಯಾಟ್ ನಲ್ಲಿ ಚೂರಿಯಿಂದ ಇರಿದು ಹತ್ಯೆಗೈದ ಪ್ರಕರಣದ ಪ್ರಮುಖ ಆರೋಪಿಗಳಾದ ಸುರೇಂದ್ರನ ಆಪ್ತ ಸ್ನೇಹಿತ ಬಂಟ್ವಾಳ ನಿವಾಸಿ ಸತೀಶ್ ಕುಲಾಲ್ ಮತ್ತು ಕಿನ್ನಿಗೋಳಿ ನಿವಾಸಿ ಗಿರೀಶ್ ಯಾನೆ ಗಿರಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಬ್ಬರು ಕಾಸರಗೋಡು ಕಡೆಯಿಂದ ಬಾಡಿಗೆ ವಾಹನದಲ್ಲಿ ಬಂಟ್ವಾಳ ಕಡೆ ಶನಿವಾರ ರಾತ್ರಿ ಬರುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ಡಿವೈಎಸ್ಪಿ […]

ಸುರೇಂದ್ರ ಬಡ್ಡಿ ವ್ಯವಹಾರದ ಪಾಪದ ಹಣವನ್ನು ಕಿಶನ್ ಹೆಗ್ಡೆ ಕೊಲೆಗೆ ಬಳಸಿದ್ದ, ಅದಕ್ಕಾಗಿ ಕೊಲೆ ಶಂಕೆ

Thursday, October 22nd, 2020
suresh Kulal

ಬಂಟ್ವಾಳ : ಕಿಶನ್ ಹೆಗ್ಡೆ ಕೊಲೆಗೆ ಪ್ರತಿಕಾರವಾಗಿ ಸುರೇಂದ್ರ ಬಂಟ್ವಾಳ್ ಅವರನ್ನು ಕೊಲೆ ಮಾಡಲಾಗಿದೆ ಎನ್ನುವ ಬಗ್ಗೆ ಮಹತ್ವದ ಸುಳಿವು ಸಿಕ್ಕಿದ್ದು,  ಸುರೇಂದ್ರನ ಆಪ್ತ ಸ್ನೇಹಿತ  ಎಂದು ಹೇಳಿಕೊಂಡು ಒಬ್ಬ ವ್ಯಕ್ತಿ ಆಡಿಯೋ ಕಳಿಸಿದ್ದು ಪೊಲೀಸರು ಸುಳಿವಿನ ಬೆನ್ನು ಹತ್ತಿದ್ದಾರೆ. ರೌಡಿ ಶೀಟರ್, ನಟ ಸುರೇಂದ್ರ ಭಂಡಾರಿ ಬಂಟ್ವಾಳ್ ಹತ್ಯೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು ಎರಡು ಪ್ರತ್ಯೇಕ ತಂಡ ರಚಿಸಿ ಹಂತಕರ ಬೇಟೆ ಆರಂಭಿಸಿದ್ದಾರೆ. ಸುರೇಂದ್ರ ಬಂಟ್ವಾಳ್ ಅವರ ಆಪ್ತ ಸ್ನೇಹಿತ ಸತೀಶ್ ಕುಲಾಲ್ ಎಂದು ಹೇಳಿಕೊಂಡು ಒಬ್ಬ ವ್ಯಕ್ತಿ ಆಡಿಯೋ ಸಂದೇಶದ  […]

ಹಿರಿಯಡ್ಕ ಪೇಟೆಯಲ್ಲಿ ಹಾಡುಹಗಲೇ ನಡುರಸ್ತೆಯಲ್ಲಿ ವ್ಯಕ್ತಿಯನ್ನು ಅಟ್ಟಾಡಿಸಿ ಕೊಲೆ

Thursday, September 24th, 2020
kishan Hegde

ಉಡುಪಿ: ಎರಡು ಇನ್ನೋವಾ ಕಾರುಗಳಲ್ಲಿ ಬಂದ ತಂಡವೊಂದು ಹಿರಿಯಡ್ಕ ಪೇಟೆಯಲ್ಲಿ ಹಾಡುಹಗಲೇ ನಡುರಸ್ತೆಯಲ್ಲಿ ವ್ಯಕ್ತಿಯೋರ್ವನನ್ನು ಅಟ್ಟಾಡಿಸಿ ಮಾರಕಾಯುಧಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಪಡುಬಿದ್ರಿ ಇನ್ನಾದ  ಕಿಶನ್ ಹೆಗ್ಡೆ (42) ಕೊಲೆಯಾದ ವ್ಯಕ್ತಿ. ಈತ ರಿಯಲ್ ಎಸ್ಟೇಟ್ ಉದ್ಯಮವನ್ನು ನಡೆಸುತ್ತಿದ್ದ ಎನ್ನಲಾಗಿದೆ. ಈತನ ಮೇಲೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣಗಳಿವೆ, ರೌಡಿ-ಶೀಟರ್ ಎಂದು ಹೇಳಲಾಗಿದೆ. ಮಂಗಳೂರು ಮೂಲದ ಗ್ಯಾಂಗ್ ಒಂದು ಈ ಹತ್ಯೆ ಮಾಡಿದೆ ಎಂದು ಹೇಳಲಾಗಿದೆ. ಗುರುವಾರ ಮಧ್ಯಾಹ್ನ ಹಿರಿಯಡ್ಕ ಪೇಟೆಯ ನಡುರಸ್ತೆಯಲ್ಲಿ ತಲೆಗೆ […]