ಕಾರುಗಳ ಮುಖಾಮುಖಿ ಢಿಕ್ಕಿ, ಇಬ್ಬರಿಗೆ ಗಂಭೀರ ಗಾಯ

Friday, June 25th, 2021
car-accident

ಮಂಗಳೂರು : ಕಾರುಗಳ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಇಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಉಪ್ಪಿನಂಗಡಿ-ಕಡಬ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಕುಂಡಾಜೆ ಸೇತುವೆಯಲ್ಲಿ ಜೂನ್‌‌ 25ರ ಶುಕ್ರವಾರ ನಡೆದಿದೆ. ಬೆಲೆನೋ ಕಾರು ಆಲಂಕಾರು ಭಾಗದಿಂದ ಕೊಯಿಲ ಕಡೆಗೆ ಹೋಗುತ್ತಿದ್ದು, ಉಪ್ಪಿನಂಗಡಿ ಕಡೆಯಿಂದ ಕಡಬದ ಕಡೆಗೆ ವೇಗವಾಗಿ ಬರುತ್ತಿದ್ದ ಆಲ್ಟೋ ಕಾರು ಢಿಕ್ಕಿಯಾಗಿ ಜಖಂ ಗೊಂಡಿದೆ. ಘಟನೆಯ ಪರಿಣಾಮ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕಡಬ ಪೊಲೀಸರು ಪರಿಶೀಲನೆ […]