ಕುಂದಾಪುರ ಮೂಲದ ಹುಡುಗನನ್ನು ಮದುವೆಯಾದ ಚಿತ್ರ ನಟಿ ಶುಭಾ ಪೂಂಜಾ

Wednesday, January 5th, 2022
Subha Poonja

ಉಡುಪಿ : ಚಿತ್ರ ನಟಿ ಶುಭಾ ಪೂಂಜಾ ಕುಂದಾಪುರ ಮೂಲದ ಸುಮಂತ್ ಮಹಾಬಲ ಜೊತೆ ಶಿರ್ವ ಸಮೀಪದ ಮಜಲಬೆಟ್ಟು ಬೀಡುವಿನ ನಿವಾಸದಲ್ಲಿ ಬುಧವಾರ ಹಸೆಮಣೆ ಏರಿದ್ದಾರೆ. ಈ ವಿಚಾರವನ್ನು ಶುಭಾ ಪೂಂಜಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ‘ಇಂದು ನಾನು ಮತ್ತು ಸುಮಂತ್ ಮಹಾಬಲ ಗುರು ಹಿರಿಯರ, ಕುಟುಂಬ ಮತ್ತು ಆತ್ಮೀಯ ಸ್ನೇಹಿತರ ಸಮ್ಮುಖದಲ್ಲಿ ನಮ್ಮ ಊರು ಮಜಲಬೆಟ್ಟು ಬೀಡುವಿನಲ್ಲಿ ಸರಳ ವಿವಾಹವಾದೆವು. ನಿಮ್ಮೆಲ್ಲರ ಪ್ರೀತಿ ಮತ್ತು ಹಾರೈಕೆ ಗಳು ನಮ್ಮ ಮೇಲಿರಲಿ’ ಎಂದು ಹೇಳಿಕೊಂಡಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಇವರು ಸರಳವಾಗಿ ವಿವಾಹ […]

ಕೋಡಿಕಲ್ ಕ್ರಾಸ್ ರಸ್ತೆಯ ಬಳಿ ಖಾಸಗಿ ಎಕ್ಸ್‌ಪ್ರೆಸ್ ಬಸ್ಸಿಗೆ ಕಲ್ಲೆಸದ ಕಿಡಿಗೇಡಿಗಳು

Monday, November 15th, 2021
akms travels

ಮಂಗಳೂರು : ಮಂಗಳೂರಿನಿಂದ ಕುಂದಾಪುರಕ್ಕೆ ಚಲಿಸುತ್ತಿದ್ದ  ಖಾಸಗಿ ಎಕ್ಸ್‌ಪ್ರೆಸ್ ಬಸ್ಸಿಗೆ ಕೋಡಿಕಲ್ ಕ್ರಾಸ್ ರಸ್ತೆಯ ಬಳಿ  ಕಿಡಿಗೇಡಿಗಳು ಕಲ್ಲೆಸೆದ ಘಟನೆ ಸೋಮವಾರ ಮಧ್ಯಾಹ್ನ 12.20 ಕ್ಕೆ ನಡೆದಿದೆ. ಕುಂದಾಪುರದ ಸೈಫ್ ಎನ್ನುವವರ ಮಾಲಕತ್ವದ ಎಕೆಎಂಎಸ್ ಎಕ್ಸ್‌ಪ್ರೆಸ್ ಬಸ್ ಗೆ ಕೋಡಿಕಲ್ ಕ್ರಾಸ್  ಬಳಿ ಇಬ್ಬರು ಯುವಕರು ಕೈ ತೋರಿಸಿ ನಿಲ್ಲಿಸಲು ಸೂಚಿಸಿ ಎರಡು ಕಲ್ಲುಗಳನ್ನು ಬಸ್ಸಿನ ಗಾಜಿಗೆ ಎಸೆದು ಬಳಿಕ ಕೋಡಿಕಲ್ ರಸ್ತೆಯಲ್ಲಿ  ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ. ಕಲ್ಲೆಸೆತದಿಂದ ಬಸ್ಸಿನ ಗಾಜಿಗೆ ಹಾನಿಯಾಗಿದೆ. ಕಿಡಿಗೇಡಿಗಳು ದ್ವಿಚಕ್ರ ವಾಹನದ ನಂಬರ್ ಪ್ಲೇಟ್ […]

ಕೆಲಸಕ್ಕೆ ಹೋದ ಯುವತಿ ಮನೆಗೆ ಬಾರದೇ ನಾಪತ್ತೆ

Tuesday, November 9th, 2021
Tara

ಭಟ್ಕಳ: ಮನೆಯಿಂದ ಕುಂದಾಪುರಕ್ಕೆ ಕೆಲಸಕ್ಕೆ ಹೋಗುತ್ತೇನೆ ಎಂದು ಹೇಳಿ ಹೋದ ಯುವತಿ ನಾಲ್ಕು ದಿನ ಕಳೆದರೂ ಮರಳಿ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾದ ಯುವತಿಯನ್ನು ತಾರಾ ನಾರಾಯಣ ಮರಾಠಿ ಎಂದು ಗುರುತಿಸಲಾಗಿದೆ. ಈಕೆ ನವೆಂಬರ್ 5 ರಂದು ಮಧ್ಯಾಹ್ನ 12-00 ಗಂಟೆಯ ಸುಮಾರಿಗೆ ಕುಂದಾಪುರಕ್ಕೆ ಕೆಲಸಕ್ಕೆ ಹೋಗುತ್ತೇನೆ ಎಂದು ಹೇಳಿ ಹೋದವಳು, ಅಲ್ಲಿಗೂ ಹೋಗದೇ ಈವರೆಗೂ ಮನೆಗೆ ವಾಪಸ್ ಬಾರದೇ, ಸಂಬಂಧಿಕರ ಮನೆಗೂ ಹೋಗದೇ ಕಾಣೆಯಾಗಿದ್ದಾಳೆ . ಈ ಬಗ್ಗೆ ಯುವತಿಯ ತಂದೆ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ […]

ಫೇಸ್ ಬುಕ್ ನಲ್ಲಿ ಅವಮಾನ, ಸೌದಿಯಲ್ಲಿ ಬಂಧಿತರಾಗಿರುವ ಹರೀಶ್ ಬಂಗೇರ ನಿರಪರಾಧಿ, ಬಿಡುಗಡೆ

Saturday, August 14th, 2021
Harish Bangera

ಉಡುಪಿ : ಸೌದಿ ಅರೇಬಿಯಾದ ದೊರೆ ಹಾಗೂ ಧರ್ಮದ ಬಗ್ಗೆ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಗಳನ್ನು ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿ ಹಾಕಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದು,  ಈ ಸಂಬಂಧ ಸೌದಿಯಲ್ಲಿ ಬಂಧಿತರಾಗಿರುವ ಕುಂದಾಪುರ ತಾಲೂಕಿನ ಹರೀಶ್ ಬಂಗೇರ ಅವರು ಆ.18ರಂದು ಬಿಡುಗಡೆಗೊಂಡು ಬೆಂಗಳೂರು ತಲುಪಲಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಹರೀಶ್ ಬಂಗೇರ ತಾಯ್ನಾಡಿಗೆ ಮರಳಲು ಪೂರೈಸಬೇಕಾಗಿದ್ದ  ಕೆಲಸಗಳು ಪೂರ್ಣಗೊಂಡಿದ್ದು ಆ.17ರಂದು ಸೌದಿ ಅರೇಬಿಯಾದ ದಮ್ಮಾಮ್ ವಿಮಾನ ನಿಲ್ದಾಣದಿಂದ ದೋಹಾ ಹೊರಟು ಆ.18 ರಂದು ಬೆಂಗಳೂರು […]

ಮೂರು ಮಕ್ಕಳೊಂದಿಗೆ ಮಹಿಳೆ ನಾಪತ್ತೆ

Monday, December 21st, 2020
Rasia

ಬ್ರಹ್ಮಾವರ :  ತನ್ನ ಮೂರು ಮಕ್ಕಳೊಂದಿಗೆ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಘಟನೆ ಹಾರಾಡಿ ಗ್ರಾಮದ ಹೊನ್ನಾಳ ಎಂಬಲ್ಲಿ ನಡೆದಿದೆ. ನಾಪತ್ತೆಯಾದವರನ್ನು ಹೊನ್ನಾಳ ಬಕ್ಕಪಟ್ಟಣ ನಿವಾಸಿ ಮುಹಮ್ಮದ್ ಖಲೀಲ್ ಎಂಬವರ ಪತ್ನಿ ರಾಸಿಯಾ (32), ಮಕ್ಕಳಾದ ಪಾತಿಮಾ ನಶ್ರಾ (11), ಅಬ್ದುಲ್ ಮುತ್ತಾಹೀರ್ (7), ಆಯಿಷಾ ಝಿಫ್ರಾ (3) ಎಂದು ಗುರುತಿಸಲಾಗಿದೆ. ರಾಸಿಯಾ ಡಿ.18ರಂದು ಬೆಳಗ್ಗೆ ತನ್ನ ಮೂರು ಮಕ್ಕಳೊಂದಿಗೆ ತವರು ಮನೆಯಾದ ಕುಂದಾಪುರದ ಕಂಡ್ಲೂರಿಗೆ ಹೋಗುವುದಾಗಿ ಹೇಳಿ ಹೋದವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈಟ್‌ ರಿಪೀಟ್ ಎಂದು ಹೆಸರಿಟ್ಟು ಕಬಾಬ್ ಜೊತೆ ಗಾಂಜಾ ಮಾರಾಟ – ಇಬ್ಬರು ಪೊಲೀಸರ ವಶಕ್ಕೆ

Monday, August 17th, 2020
Kabab shop

ಉಡುಪಿ : ಈಟ್‌ ರಿಪೀಟ್ ಎಂಬ ಕಬಾಬ್ ಅಂಗಡಿಯಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ 1 ಕೆ.ಜಿ. 50 ಗ್ರಾಂ ಗಾಂಜಾವನ್ನು ಪಾನಕದಕಟ್ಟೆ ಎಂಬಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕುಂದಾಪುರ ತಾಲೂಕಿನ ಬಸ್ರೂರು ಗ್ರಾಮದ ಪಾನಕದಕಟ್ಟೆ ಎಂಬಲ್ಲಿ ಈ ರೀತಿ ಕಬಾಬ್ ಜೊತೆ ಗಾಂಜಾವನ್ನು ಆರೋಪಿಗಳು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಬಂಧಿತರನ್ನು ಕಾವ್ರಾಡಿ ಗ್ರಾಮದ ಮಹ್ಮದ್ ತನ್ವೀರ್ (36) ಹಾಗೂ ಕಾವ್ರಾಡಿಯ ಜನತಾ ಕಾಲೋನಿಯ ಸಬೀಬ್ (25) ಎಂದು ಗುರುತಿಸಲಾಗಿದೆ. ಆರೋಪಿಗಳು  ಅಕ್ರಮವಾಗಿ […]

ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ನಾಲ್ವರು ಮೃತ್ಯು

Sunday, August 16th, 2020
boat

ಕುಂದಾಪುರ : ಮೀನುಗಾರಿಕೆಗೆ ತೆರಳಿದ್ದ ನಾಡದೋಣಿಯೊಂದು ಅಲೆಗಳ ಹೊಡೆತಕ್ಕೆ ಮಗುಚಿ ಬಿದ್ದ ಪರಿಣಾಮ ನಾಲ್ವರು ಮೀನುಗಾರರು ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ಕೊಡೇರಿ ಎಂಬಲ್ಲಿ ರವಿವಾರ ಮಧ್ಯಾಹ್ನ 3.30ರ ಸುಮಾರಿಗೆ ನಡೆದಿದೆ. ಬೆಳಗ್ಗೆ 10.30ರ ಸುಮಾರಿಗೆ ಸಾಗರಶ್ರೀ ಎಂಬ ನಾಡದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ಸಮುದ್ರದ ದೈತ್ಯ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಮಗುಚಿ ಬಿತ್ತೆನ್ನಲಾಗಿದೆ. ಇದರಿಂದ ನಾಗರಾಜ್ ಖಾರ್ವಿ, ಲಕ್ಷ್ಮಣ್ ಖಾರ್ವಿ, ಶೇಖರ್, ಮಂಜುನಾಥ್ ನೀರಿನಲ್ಲಿ ಮುಳುಗಿ ಮೃತಪಟ್ಟರೆಂದು ತಿಳಿದುಬಂದಿದೆ.  ಒಟ್ಟು 9 ಮಂದಿ ಮೀನುಗಾರರು ತೆರಳಿದ್ದರು. […]

ಉಡುಪಿ : ಹುಂಜದ ಜೊತೆ ನವಿಲಿನ ಫೈಟ್ ಸಖತ್ ವೈರಲ್

Thursday, July 23rd, 2020
peacock

ಉಡುಪಿ : ಕುಂದಾಪುರದಲ್ಲಿ ವ್ಯಕ್ತಿಯೊಬ್ಬರ‌ ಮನೆ‌ ಮುಂದೆ ನವಿಲು-ಕೋಳಿ ಕಾಳಗ ನಡೆದಿದ್ದು, ಸ್ಥಳೀಯರು ಆಶ್ಚರ್ಯಚಕಿತರಾಗಿ ಈ ದೃಶ್ಯವನ್ನುಸೆರೆ ಹಿಡಿದಿದ್ದಾರೆ.  ಟಗರು, ಬುಲ್, ಕೋಳಿ ಕಾಳಗ ಸಾಮಾನ್ಯ. ಆದರೆ ನವಿಲು ಹುಂಜದ ಜೊತೆ ಕಾಳಗ ಮಾಡಿರುವುದು ಅಲ್ಲಿದ್ದವರಿಗೆ ಆಶ್ಚರ್ಯ ಮೂಡಿಸಿದೆ. ಇನ್ನು ವಯ್ಯಾರಕ್ಕೆ ಹೆಸರಾದ ನವಿಲಿನ ಫೈಟ್ ಹುಂಜದ ಜತೆ ಈಗ ವೈರಲ್ ಆಗಿದೆ. ಹೆಣ್ಣುಕೋಳಿ ಸುತ್ತ ಗಿರಕಿ ಹೊಡೆಯುತ್ತಿದ್ದ ಹುಂಜಕ್ಕೂ ಬೋರ್ ಆಗಿರಬೇಕು. ಮತ್ತೊಂದು ಹುಂಜದ ಜೊತೆಗೆ ಫೈಟ್ ಮಾಡೋದನ್ನ ಬಿಟ್ಟು ನವಿಲಿನ ವಿರುದ್ಧ ಕಾದಟಕ್ಕಿಳಿದಿತ್ತು. ಮಳೆ ಬಂದ್ರೆ […]

ಸದಸ್ಯರಿಗೆ ಆಸರೆಯಾದ ಬಿಲ್ಲವ ಸೇವಾ ಸಂಘ ಕುಂದಾಪುರ (ರಿ) ಮುಂಬಯಿ

Monday, June 8th, 2020
soorya s

ಮುಂಬಯಿ : ಸಮಾಜ ಬಾಂಧವರ ಶ್ರೇಯೋಭಿವೃದ್ಧಿಗಾಗಿ ಸದಾ ಶ್ರಮಿಸುತ್ತಿರುವ ಬಿಲ್ಲವ ಸೇವಾ ಸಂಘ ಕುಂದಾಪುರ (ರಿ) ಮುಂಬಯಿಯು ಶ್ರೀ ನಾರಾಯಣ ಗುರುಗಳ ತತ್ವ – ಉಪದೇಶಗಳನ್ನು ಅಳವಡಿಸಿಕೊಂಡು ವಿದ್ಯೆಗೆ ಹೆಚ್ಚಿನ ಮಹತ್ವ ನೀಡಿ ಪ್ರತಿವರ್ಷ ಅಸಹಾಯಕ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರತಿಭಾವಂತರಿಗೆ ಪ್ರತಿಭಾ ಪುರಸ್ಕಾರ ನೀಡುವುದಲ್ಲದೆ ಅಸಹಾಯಕ ಸಮಾಜ ಬಾಂಧವರಿಗೆ ವೈದ್ಯಕೀಯ ನೆರವು ನೀಡುತ್ತಾ, ವಧು-ವರರ ಅನ್ವೇಷಣೆಗೆ ಸಹಾಯ ಮಾಡುತ್ತಾ ಬಂದಿರುವ ಸಂಘವು ಸದಸ್ಯ ಬಾಂಧವರ ಸುಖ-ದುಃಖಗಳಿಗೆ ಸದಾ ಸ್ಪಂದಿಸಿ ಪ್ರಗತಿಯ ಪಥದಲ್ಲಿ ಮುನ್ನಡೆಯುತ್ತಿದ್ದು ಇದೀಗ […]

ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿಗೆ ಮೊದಲ ಬಲಿ

Saturday, May 16th, 2020
covid-death

ಉಡುಪಿ:  ಕ್ವಾರಂಟೈನ್ ನಲ್ಲಿದ್ದು, ಹೃದಯಾಘಾತದಿಂದ ಸಾವನ್ನಪ್ಪಿದ್ದ ಕುಂದಾಪುರ ಮೂಲದ ವ್ಯಕ್ತಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಮಹಾರಾಷ್ಟ್ರದಿಂದ ಮೇ 5ರಂದು ಹುಟ್ಟೂರಾದ ಕುಂದಾಪುರ ಮೂಲದ 54 ವರ್ಷದ ವ್ಯಕ್ತಿ ಬಂದಿದ್ದರು. ಈ ವ್ಯಕ್ತಿಗೆ ಮೇ 13ನೇ ಸಂಜೆ ಹೃದಯಾಘಾತವಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವ್ಯಕ್ತಿ ಮೇ 14 ಸಂಜೆ ಮೃತಪಟ್ಟಿರುತ್ತಾರೆ. ವ್ಯಕ್ತಿಯ ಗಂಟಲು ದೃವ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದ್ದು, ಅದರಲ್ಲಿ ವ್ಯಕ್ತಿ ಕೋವಿಡ್-19 ಸೋಂಕಿತನಾಗಿರುವ ಬಗ್ಗೆ ದೃಢವಾಗಿದೆ. ಆ ವ್ಯಕ್ತಿಗೆ ಉಸಿರಾಟದ ತೊಂದರೆ ಇದ್ದ ಕಾರಣ […]