ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಜೆ.ಸಿ.ಮಾಧುಸ್ವಾಮಿ

Saturday, October 26th, 2019
madhu-swamy

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ನೆರೆ ಹಾವಳಿಯಿಂದ ಹಾನಿಗೀಡಾದ ಪ್ರದೇಶಕ್ಕೆ ಶನಿವಾರ ಭೇಟಿ ನೀಡುವ ಮುನ್ನ ರಾಜ್ಯ ಸರಕಾರದ ಕಾನೂನು, ಸಂಸದೀಯ ವ್ಯವಹಾರ ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರು ಇಂದು ಬೆಳಿಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಈ ವೇಳೆ ಶಾಸಕ ಹರೀಶ್ ಪೂಂಜ ಮತ್ತಿರರು ಇದ್ದರು. ಬಳಿಕ ನೆರೆ ಹಾವಳಿಯಿಂದ ಹಾನಿಗೀಡಾದ ಕುಕ್ಕಾವು ಸೇತುವೆ ಪ್ರದೇಶಕ್ಕೆ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.  

ಬೆಳ್ತಂಗಡಿ : ಮನೆ ಕಟ್ಟಲು ಐದು ಲಕ್ಷ, ಮನೆಯಿಲ್ಲದವರಿಗೆ ಐದು ಸಾವಿರ ಬಾಡಿಗೆ , ತಕ್ಷಣದ ಪರಿಹಾರ ಹತ್ತು ಸಾವಿರ ಘೋಷಿಸಿದ ಸಿಎಂ

Monday, August 12th, 2019
Kakkavu bridge

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಉಂಟಾದ ನಷ್ಟಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸಮರೋಪಾದಿ ಯಲ್ಲಿ ಪರಿಹಾರ ಘೋಷಿಸಿದ್ದಾರೆ. ವಿಮಾನದ ಮೂಲಕ ಮಂಗಳೂರಿಗೆ 11.20 ಕ್ಕೆ ಬಂದಿಳಿದ ಸಿಎಂ ಬೆಳ್ತಂಗಡಿ ಗೆ ತೆರಳಿ ನೆರೆಯಿಂದ ಕೊಚ್ಚಿ ಹೋದ ಕುಕ್ಕಾವು ಸೇತುವೆಗೆ ಭೇಟಿ ನೀಡಿದ ಬಳಿಕ ಕುಕ್ಕಾವು ಪರಿಹಾರ ಕೇಂದ್ರದಲ್ಲಿ ಸಂತ್ರಸ್ತರನ್ನು ಭೇಟಿ ಮಾಡಿ ಅಹವಾಲು ಸ್ವೀಕರಿಸಿದರು. ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದರು ಮಳೆಯಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಮನೆ ನಿರ್ಮಾಣದ ತನಕ 5 ಸಾವಿರ ತಿಂಗಳಿಗೆ ಬಾಡಿಗೆ ಹಣ ಮತ್ತು 5 ಲಕ್ಷ ಪರಿಹಾರ ನೀಡಲಾಗುವುದು […]

ನೆರೆಯಲ್ಲಿ ಕೊಚ್ಚಿಹೋದ ಬೆಳ್ತಂಗಡಿ ಕಡಿರುದ್ಯಾವರ ಕುಕ್ಕಾವು ಸೇತುವೆ

Friday, August 9th, 2019
Kukkavu-bridge

ಮಂಗಳೂರು : ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆ ಪರಿಣಾಮ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕುಕ್ಕಾವು ಸೇತುವೆ ಕೊಚ್ಚಿ ಹೋಗಿದೆ. ಪರಿಣಾಮವಾಗಿ ಸೋಮಂತಡ್ಕ- ಕಾಜೂರು ಸಂಪರ್ಕ ರಸ್ತೆ ಕಡಿತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ 7 ಮನೆಗಳು ಕುಸಿದಿದೆ. ಬೆಳ್ತಂಗಡಿ ತಾಲೂಕಿನ ಕಾಜೂರು- ಕೊಲ್ಲಿ, ಮಲವಂತಿಗೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಪಾಯದಲ್ಲಿದ್ದ ಅಗ್ನಿಶಾಮಕ ದಳದ ಸಿಬ್ಬಂದಿ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ರವಾನೆ ಮಾಡಿದ್ದಾರೆ. ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ […]