ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾ ಷಷ್ಠಿ ಹಾಗೂ ವೈಭವದ ಬ್ರಹ್ಮರಥೋತ್ಸವ

Tuesday, December 19th, 2023
Kukke Subrahmanya

ಸುಳ್ಯ : ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾ ಷಷ್ಠಿ ವೈಭವ ಹಾಗೂ ಬ್ರಹ್ಮರಥೋತ್ಸವವು ಸೋಮವಾರ ವಿಜೃಂಭಣೆಯಿಂದ ನೆರವೇರಿತು. ನಾಡಿನೆಲ್ಲೆಡೆಯಿಂದ ಭಕ್ತ ಸಾಗರವೇ ಕುಕ್ಕೆಗೆ ಆಗಮಿಸಿ, ಬ್ರಹ್ಮರಥೋತ್ಸವ ಕಣ್ಣುಂಬಿಕೊಂಡರು. ಜೊತೆಗೆ ಕುಕ್ಕೆಯ ಶ್ರೀ ಸುಬ್ರಮಣ್ಯ ಸ್ವಾಮಿಯ ದರ್ಶನ ಪಡೆದು ಪುನೀತರಾದರು. ಇತಿಹಾಸ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲೂ, ಐದು ದಿನಗಳ ಪರ್ಯಂತ ಷಷ್ಠಿ ಮಹೋತ್ಸವ ವೈಭವದಿಂದ ನೆರವೇರಿದೆ. ಕೊನೆಯ ದಿನವಾದ ಸೋಮವಾರ ಚಂಪಾಷಷ್ಠಿ ಮಹೋತ್ಸವಕ್ಕೆ ಬೆಳಗ್ಗೆ 7.30ರ ಧನುಲಗ್ನ ಮುಹೂರ್ತದಲ್ಲಿ ಅದ್ಧೂರಿ […]

ಕುಕ್ಕೆ ಸುಬ್ರಹ್ಮಣ್ಯದ ದುಡ್ಡಿನಲ್ಲಿ ನಾಲ್ಕು ವರ್ಷಗಳಿಂದ ಇನ್ನೋವಾ ಕಾರಿನಲ್ಲಿ ತಿರುಗುತ್ತಿದ್ದ ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳು

Tuesday, November 7th, 2023
kuuke-subrahmanya

ಮಂಗಳೂರು : ಕುಕ್ಕೆ ಸುಬ್ರಹ್ಮಣ್ಯಕ್ಕೆ ನಾಲ್ಕು ವರ್ಷಗಳ ಹಿಂದೆ ದೇವಸ್ಥಾನದ ಬಳಕೆಗೆಂದು ಖರೀದಿಸಿದ್ದ ಇನ್ನೋವಾ ಕ್ರಿಸ್ಟಾ ಕಾರನ್ನು ಬೆಂಗಳೂರಿನ ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳು ದೇವಳದ ಖರ್ಚಿನಲ್ಲೇ ಬೆಂಗಳೂರಿನಲ್ಲಿ ಉಪಯೋಗಿಸುತ್ತಿರುವುದು ಬೆಳಕಿಗೆ ಬಂದಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ 2019ರಲ್ಲಿ ಹೊಸ ಇನ್ನೋವಾ ಕಾರನ್ನು ಖರೀದಿಸಲಾಗಿತ್ತು. ಆರಂಭದಲ್ಲಿ ದೇವಸ್ಥಾನದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅವರೇ ಈ ಕಾರನ್ನು ಬಳಕೆ ಮಾಡುತ್ತಿದ್ದರು. ಎರಡೇ ತಿಂಗಳಲ್ಲಿ ಈ ಕಾರು ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿಗಳು ಬೆಂಗಳೂರಿನ ಇಲಾಖಾ ಆಯುಕ್ತರ ಕಚೇರಿಗೆ ಕಳುಹಿಸಿಕೊಡಲು ಸೂಚನೆ […]

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಪತ್ನಿ ಸಮೇತ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ

Monday, October 9th, 2023
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಪತ್ನಿ ಸಮೇತ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ

ಸುಬ್ರಹ್ಮಣ್ಯ : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮ ಅವರು ಇಂದು ಬೆಳ್ಳಗ್ಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆಡಿದ್ದಾರೆ. ಭಾನುವಾರ ರಾತ್ರಿ ಸುಬ್ರಹ್ಮಣ್ಯಕ್ಕೆ ಆಗಮಿಸಿರುವ ದೇವೇಗೌಡರ ಕುಟುಂಬ ಆ.9ರ ಸೋಮವಾರ ಬೆಳಗ್ಗೆ ದೇವರ ದರ್ಶನ ಪಡೆದು, ಕ್ಷೇತ್ರದಲ್ಲಿ ಇಂದು ವಿವಿಧ ಸೇವೆ ನೆರವೇರಿಸಲಿದ್ದಾರೆ. ದೇವೇಗೌಡರು ನಿನ್ನೆ ಮಧ್ಯಾಹ್ನ ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ನಿರೀಕ್ಷೆ ಇತ್ತು. ಆದರೆ ಸಕಲೇಶಪುರ ಮತ್ತು ಕುಕ್ಕೆ […]

ಮುಸುಕುಹಾಕಿ ಕಾರಿನಲ್ಲಿ ಬಂದು ಗೋವುಗಳ ಕಳ್ಳತನಕ್ಕೆ ಯತ್ನಿಸಿದ ತಂಡ

Sunday, March 27th, 2022
Cow Thief

ಕಡಬ : ಮಲಗಿದ್ದ ಗೋವುಗಳನ್ನು ಮುಸುಕುಧಾರಿ ತಂಡವೊಂದು ಕಳ್ಳತನಕ್ಕೆ ಯತ್ನಿಸಿದ ಘಟನೆ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಕುಕ್ಕೆ ಸುಬ್ರಹ್ಮಣ್ಯದ ಆಂಜನೇಯ ಗುಡಿ ಬಳಿ ಈ ಘಟನೆ ನಡೆದಿದ್ದು, ಮಾ.25ರಂದು ಸಿಸಿ ಕೆಮರಾ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಮಲಗಿದ್ದ ಗೋವನ್ನು ಕಾರಿನಲ್ಲಿ ಬಂದ ತಂಡ ಹಿಡಿಯಲು ಯತ್ನಿಸಿದ್ದು, ಗೋವು ತಪ್ಪಿಸಿಕೊಂಡಿರುವುದು ಸಿಸಿ ಕೆಮರಾದಲ್ಲಿ ಸೆರೆಯಾಗಿರುವ ಕೆಲವು ದೃಶ್ಯ ವೈರಲ್‌ ಆಗಿದೆ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ

Tuesday, December 28th, 2021
Abdul Nazir

ಸುಬ್ರಹ್ಮಣ್ಯ : ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಅಬ್ದುಲ್ ನಝೀರ್ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದರು. ಸೋಮವಾರ ದೇವಸ್ಥಾನಕ್ಕೆ ಆಗಮಿಸಿದ  ಅವರನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ವತಿಯಿಂದ ಸ್ವಾಗತ ಕೋರಲಾಯಿತು. ದೇವಸ್ಥಾನದಲ್ಲಿ  ಅವರು ಆಶ್ಲೇಷ ಬಲಿ ಪೂಜೆ ನೆರವೇರಿಸಿದರು.  ಅಬ್ದುಲ್ ನಝೀರ್ ಅವರು ಮಂಗಳವಾರ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ, ಬ್ರಹ್ಮ ರಥೋತ್ಸವ

Friday, December 10th, 2021
Kukke-Subrahmanya

ಸುಬ್ರಹ್ಮಣ್ಯ:  ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಉತ್ಸವದ ಪ್ರಯುಕ್ತ ಬ್ರಹ್ಮ ರಥೋತ್ಸವ ಸಂಭ್ರಮ ಸಡಗರದಿಂದ ನಡೆಯಿತು. ಗುರುವಾರ ಬೆಳ್ಳಗೆ 6.58ರ ವೃಶ್ಚಿಕ ಲಗ್ನ ಸುಮೂಹರ್ತದಲ್ಲಿ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವರು ರಥಾರೂಢರಾಗಿ  ಬ್ರಹ್ಮ ರಥೋತ್ಸವ ಮುನ್ನ ವಿವಿಧ ವೈದಿಕ ಕಾರ್ಯ ಹಾಗೂ ಸುಬ್ರಹ್ಮಣ್ಯ ದೇವರಿಗೆ ವಿಶೇಷ ಮಹಾಪೂಜೆ ನೇರವೇರಿದ ಬಳಿಕ ಬ್ರಹ್ಮ ರಥೋತ್ಸವ ಸಂಭ್ರಮದಿಂದ ನಡೆಯಿತು.  ಬೆಳ್ಳಗೆ 6.58 ವೃಶ್ಚಿಕ ಲಗ್ನದಲ್ಲಿ ಸುಬ್ರಹ್ಮಣ್ಯ ದೇವರು ಬ್ರಹ್ಮ ರಥದಲ್ಲಿ, ಉಮಾಮಹೇಶ್ವರ ದೇವರು ಪಂಚಮಿ ರಥದಲ್ಲಿ ಆರೂಢರಾಗಿ ಬಳಿಕ […]

ಕುಕ್ಕೆ ಸುಬ್ರಹ್ಮಣ್ಯದ ದೇವರ ದರ್ಶನಕ್ಕೆ ಬಂದಿದ್ದ ಭಕ್ತರ ಬ್ಯಾಗ್ ಕಳವು

Saturday, July 24th, 2021
Kukke Subrahmanya

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ದೇವರ ದರ್ಶನಕ್ಕೆ ಬಂದಿದ್ದ ಭಕ್ತರ ಬ್ಯಾಗೊಂದನ್ನು ಉಪಹಾರ ಸೇವಿಸುತ್ತಿದ್ದ ವೇಳೆ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಅದರಲ್ಲಿ ಸುಮಾರು 17 ಲಕ್ಷ ರೂ. ಮೌಲ್ಯದ ಸ್ವತ್ತುಗಳಿತ್ತು ಎನ್ನಲಾಗಿದೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಗ್ರಾಮದ ಬೈರಲಿಂಗೇನ ಹಳ್ಳಿಯ ಗಂಗಮ್ಮ ಮತ್ತು ಮನೆಯವರು ಜು.20ಕ್ಕೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಂದು ಖಾಸಗಿ ವಸತಿಗೃಹದಲ್ಲಿ ಉಳಿದಿದ್ದರು. ಮರು ದಿನ ಬೆಳಗ್ಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು ರಥ ಬೀದಿಯ ಖಾಸಗಿ ಹೋಟೆಲ್ವೊಂದರಲ್ಲಿ ಉಪಹಾರ ಸೇವಿಸಿದ್ದಾರೆ. ಈ […]

ಕುಕ್ಕೆ ದೇವಳದಿಂದ ನಿರ್ಮಿತವಾದ ವಿದ್ಯಾನಗರ-ಅಗ್ರಹಾರ ಕಾಂಕ್ರಿಟ್ ರಸ್ತೆ ಉದ್ಘಾಟನೆ

Tuesday, July 6th, 2021
s Angara

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಗಳ ಅಭ್ಯುದಯದಲ್ಲಿ ಕುಕ್ಕೆ ದೇವಳದಪಾತ್ರ ಅನನ್ಯ.ಶ್ರೀ ದೇವಳದಿಂದ ಕ್ಷೇತ್ರದ ಅನೇಕ ರಸ್ತೆಗಳು ಕಾಂಕ್ರಿಟೀಕರಣಗೊAಡು ಅಭಿವೃದ್ಧಿಯಾಗಿದೆ.ಅಲ್ಲದೆ ಶ್ರೀ ದೇವಳದಿಂದ ನೆರವೇರುತ್ತಿರುವ ಸಮಗ್ರ ಅಭಿವೃದ್ಧಿಯ ೧೮೦ ಕೋಟಿ ರೂಗಳ ಮಾಸ್ಟರ್ ಪ್ಲಾನ್ ಯೋಜನೆಯಲ್ಲಿ ರಸ್ತೆ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಇತರ ಮೂಲಭೂತ ಸೌಕರ್ಯಗಳು ನಿರ್ಮಿತವಾಗಿದೆ. ದೇ ರೀತಿ ಕೋವಿಡ್-೧೯ ಸಂಕಷ್ಠದ ಸಮಯದಲ್ಲಿ ಕೂಡಾ ಶ್ರೀ ದೇವಳವು ಉತ್ಕೃಷ್ಠವಾದ ಸಹಕಾರ ನೀಡಿದೆ ಎಂದು ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ […]

ಸೀಲ್ ಡೌನ್ ಇದ್ದರೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸುತ್ತಿರುವ ಭಕ್ತರು

Wednesday, June 16th, 2021
Subrahmanya

ಸುಬ್ರಹ್ಮಣ್ಯ : ಸೋಮವಾರದಿಂದ  ಸುಬ್ರಹ್ಮಣ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸೀಲ್ ಡೌನ್ ಮಾಡಲಾಗಿದ್ದರೂ ಹೊರ ಜಿಲ್ಲೆಗಳಿಂದ ಕುಕ್ಕೆಗೆ ಯಾತ್ರಿಕರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ  ಆಗಮಿಸುತ್ತಿದ್ದಾರೆ. ರಾಜ್ಯದ ಇತರ ಜಿಲ್ಲೆಗಳಲ್ಲಿ ಆನ್ ಲಾಕ್ ಇರುವುದರಿಂದ ಮತ್ತು ಮಂಗಳವಾರ ಆಶ್ಲೇಷ ನಕ್ಷತ್ರ ಇದ್ದುದರಿಂದ ಹೆಚ್ಚಿನ ಭಕ್ತರು ಆಗಮಿಸಿದ್ದರು. ಸೋಮವಾರದಿಂದ ಸುಬ್ರಹ್ಮಣ್ಯ   ಪಂಚಾಯತಿ ವ್ಯಾಪ್ತಿಯ ಪ್ರವೇಶ ರಸ್ತೆಗಳನ್ನು ಬಂದ್ ಮಾಡಿ ಚೆಕ್ ಪೋಸ್ಟ್ ತೆರೆಯಲಾಗಿದೆ. ಕುಲ್ಕುಂದ ಭಾಗದಿಂದ ಕುಕ್ಕೆ ಕಡೆಗೆ ಯಾತ್ರಿಕರ ವಾಹನಗಳು ಆಗಮಿಸುತ್ತಿದೆ. ಅಲ್ಲಿ ನಿರ್ಮಿಸಿರುವ ಚೆಕ್ ಪೋಸ್ಟ್ ನಲ್ಲಿ ಪೊಲೀಸರು […]

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠೀ, ಬ್ರಹ್ಮರಥೋತ್ಸವ

Sunday, December 20th, 2020
Kukke subrahmanya

ಸುಬ್ರಹ್ಮಣ್ಯ : ದಕ್ಷಿಣ ಭಾರತದ ಪ್ರಮುಖ ನಾಗ ಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠೀ ಮಹೊತ್ಸವ ಸಂಪನ್ನಗೊಂಡಿದೆ. ದೇವಳದ ರಾಜಮಾರ್ಗದಲ್ಲಿ ಯಶಸ್ವಿನಿ ಅನೆಯೊಂದಿಗೆ ಸಂಭ್ರಮದ ಬ್ರಹ್ಮರಥೋತ್ಸವ ಜರಗಿತು.ಕೋಟ್ಯಾಂತರ ಭಕ್ತರ ಅರಾಧ್ಯ ದೈವ ಸುಬ್ರಹ್ಮಣ್ಯ ಸ್ವಾಮಿ ಮುಂಜಾನೆಯ 7.25 ರ ಧನು ಲಗ್ನ ಸುಮುಹೂರ್ತದಲ್ಲಿ ಬ್ರಹ್ಮರಥದಲ್ಲಿ ರಥಾರೂಢನಾಗಿ ಭಕ್ತರಿಗೆ ದರ್ಶನ ನೀಡಿದ್ದಾನೆ. ಕೋವಿಡ್ ಕಾರಣದಿಂದಾಗಿ ಪರ ಊರಿನ ಭಕ್ತರಿಗೆ ಪ್ರವೇಶ ನಿರ್ಬಂನಿರ್ಬಂಧವಿದ್ದರೂ ಕೂಡಾ ಅಪಾರ ಸಂಖ್ಯೆಯಲ್ಲಿ ಭಕ್ತರು  ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮ ರಥೋತ್ಸವವನ್ನು ನೋಡಿ ಕಣ್ತುಂಬಿಕೊಂಡರು. […]