ಕಾಂಗ್ರೆಸ್ ಕಚೇರಿಯಲ್ಲಿ ಕುದ್ಮುಲ್ ರಂಗರಾವ್ ಅವರ 162ನೇ ಜನ್ಮದಿನಾಚರಣೆ
Tuesday, June 29th, 2021ಮಂಗಳೂರು : ಕುದ್ಮುಲ್ ರಂಗರಾವ್ ಅವರ 162ನೇ ಜನ್ಮದಿನಾಚರಣೆಯನ್ನು ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ವರ್ಗದ ಘಟಕದ ವತಿಯಿಂದ ಇಂದು ಕದ್ರಿ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಜರಗಿತು. ಮಾಜಿ ಶಾಸಕ ಜೆ. ಆರ್.ಲೋಬೊ, ದಿ.ಕುದ್ಮುಲ್ ರಂಗರಾವ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆಗೈದು ಮಾತನಾಡಿತ್ತಾ ಸಾಮಾಜಿಕ ಬದ್ಧತೆ, ದಲಿತೋದ್ಧಾರದ ಪರಿಕಲ್ಪನೆ, ಸ್ವಾರ್ಥರಹಿತ ಸೇವಾ ಮನೋಭಾವ ಅವರನ್ನು ಸಮಾಜದ ಉನ್ನತ ಸ್ಥಾನಕ್ಕೆ ಏರಿಸಿತ್ತು ಎಂದರು. ಬ್ಲಾಕ್ ಅಧ್ಯಕ್ಷ ಪ್ರಕಾಶ್ ಸಾಲ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಪಾಲಿಕೆ ವಿಪಕ್ಷ […]