ಬಡವರ ಬಾಳಿಗೆ ನೆರವಾದ ಕುದ್ರೋಳಿ ಕ್ಷೇತ್ರ, ಪ್ರತಿನಿತ್ಯ 1000ಮಂದಿಗೆ ಅನ್ನದಾನ
Saturday, May 2nd, 2020ಮಂಗಳೂರು : ಲಾಕ್ಡೌನ್ನಿಂದ ಸಂಕಷ್ಟಕ್ಕೀಡಾದ ದಕ್ಷಿಣ ಕನ್ನಡ ಜಿಲ್ಲೆಯ ದಿನಗೂಲಿ ಕಾರ್ಮಿಕರಿಗೆ, ಬಡವರು, ಜನಸಾಮಾನ್ಯರಿಗೆ ಜೀವನ ಸಾಗಿಸಲು ಅನುಕೂಲವಾಗುವಂತೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ 300ಕ್ವಿಂಟಾಲ್ ಅಕ್ಕಿ ವಿತರಣೆ ಮಾಡಲಾಗುತ್ತಿದ್ದು, ಪ್ರತಿನಿತ್ಯ 1ಸಾವಿರ ಮಂದಿಗೆ ದೇವಸ್ಥಾನದಿಂದಲೇ ಅನ್ನದಾನ ವಿತರಣೆ ಮಾಡಲಾಗುತ್ತಿದೆ. ಕೇಂದ್ರದ ಮಾಜಿ ಸಚಿವ, ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ, ರಾಜಕೀಯ ನೇತಾರ ಬಿ.ಜನಾರ್ದನ ಪೂಜಾರಿಯವರ ಸಲಹೆಯಂತೆ ಈ ಅಕ್ಕಿ ವಿತರಣೆ ಕಾರ್ಯ ಆರಂಭಗೊಂಡಿದ್ದು, ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಪ್ರಾರಂಭದಲ್ಲಿ 100 ಕ್ವಿಂಟಾಲ್ ಅಕ್ಕಿ ನೀಡುವ ಉದ್ದೇಶ […]