ಕುಕ್ಕೆ ಸುಬ್ರಹ್ಮಣ್ಯ ದ ವಿದ್ಯಾರ್ಥಿನಿಗೆ ಎಸ್ ಎಸ್ ಎಲ್ ಸಿ ಯಲ್ಲಿ ರಾಜ್ಯಕ್ಕೆ ತೃತೀಯ ಸ್ಥಾನ

Monday, May 7th, 2018
subramanya

ಮಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಕುಕ್ಕೆ ಸುಬ್ರಹ್ಮಣ್ಯ ದ ವಿದ್ಯಾರ್ಥಿನಿಗೆ ಎಸ್ ಎಸ್ ಎಲ್ ಸಿ ಯಲ್ಲಿ ರಾಜ್ಯಕ್ಕೆ ತೃತೀಯ ಸ್ಥಾನ ಬಂದಿದೆ. ಮಾಜಿ ಪ್ರಾಂಶುಪಾಲ, ಪತ್ರಕರ್ತ ದಿ.ವಿಠಲ ರಾವ್ ಅವರ ಪುತ್ರಿ ಅಭಿಜ್ಞಾ ರಾವ್ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625 ರಲ್ಲಿ 623 ಅಂಕ ಪಡೆದು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ. ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿ ಇವರಾಗಿದ್ದು, ಇವರ ಈ ಸಾಧನೆ ಶಾಲೆಗೆ, ಶಿಕ್ಷಕ ವೃಂದಕ್ಕೆ ಕೀರ್ತಿ ತಂದೊದಗಿಸಿದೆ.