ಅನಾರೋಗ್ಯ ಪೀಡಿತರಿಗೆ ನೆರವಾಗಲು ಗಣೇಶೋತ್ಸವದಲ್ಲಿ ವೇಷ ಹಾಕಿದ ಯುವಕ

Sunday, September 12th, 2021
Dhanu Poojary

ಮಂಗಳೂರು: ಕೃಷ್ಣಾಪುರ ಸಾರ್ವಜನಿಕ ಗಣೇಶೋತ್ಸವದ ಸಂದರ್ಭದಲ್ಲಿ ವೇಷ ಧರಿಸಿದ ಯುವಕನೊಬ್ಬ ಅದರಿಂದ ಸಂಗ್ರವಾದ ಹಣವನ್ನು ಅನಾರೋಗ್ಯದಿಂದ ಬಳಲುತ್ತಿರುವ ಮೂವರಿಗೆ ನೀಡಲು ಮುಂದಾಗಿದ್ದಾರೆ. ನಗರದ ಹೊರವಲಯದ ಸುರತ್ಕಲ್ ಸಮೀಪದ ಜನತಾ ಕಾಲೋನಿಯ ನಿವಾಸಿ ಧನಂಜಯ(ಧನು) ಪೂಜಾರಿಯವರು ಕೃಷ್ಣಾಪುರ ಸಾರ್ವಜನಿಕ ಗಣೇಶೋತ್ಸವದ ಸಂದರ್ಭದಲ್ಲಿ ವೇಷ ಧರಿಸಿ ಸಂಗ್ರಹಿಸಿದ ರೂ 26,994 ವನ್ನು ಮೂವರು ಅನಾರೋಗ್ಯ ಪೀಡಿತರಿಗೆ ನೀಡಲಿದ್ದಾರೆ. ಕಲಾವಿದರಾಗಿರುವ ಧನಂಜಯ(ಧನು) ಪೂಜಾರಿಯ ಸುರತ್ಕಲ್ ಆಪತ್ಬಾಂಧವ ಸಮಾಜ ಸೇವಾ ಸಂಘದ ಸದಸ್ಯರಾಗಿದ್ದಾರೆ.

ಮಂಗಳೂರಿಗೆ ಬಂದಿದೆ ಇಲೆಕ್ಟ್ರಿಕ್ ಆಟೋ, ಅತೀ ಕಡಿಮೆ ವೆಚ್ಚದಲ್ಲಿ ಪ್ರಯಾಣ ಸಾಧ್ಯ

Tuesday, August 3rd, 2021
Electric-Auto

ಮಂಗಳೂರು : ಸುರತ್ಕಲ್ ಸಮೀಪದ ಕೃಷ್ಣಾಪುರದಲ್ಲಿ ಇಲೆಕ್ಟ್ರಿಕ್ ರಿಕ್ಷಾ ಡ್ರೈವ್ ಮಾಡಿದ ಶಾಸಕರು ಇಲೆಕ್ಟ್ರಿಕ್ ವಾಹನವು ಮಾಲಿನ್ಯ ರಹಿತ, ನಿಶ್ಶಬ್ದ ಹಾಗೂ ಅತೀ ಕಡಿಮೆ ವೆಚ್ಚದಲ್ಲಿ ಲಾಭದಾಯಕ ಸ್ವ ಉದ್ಯೋಗ ಆಗುವ ಎಲ್ಲಾ ಲಕ್ಷಣಗಳಿದೆ ಎಂದರು. ಸರಕಾರದಿಂದ ಅರ್ಹ ಫಲಾನುಭವಿಗಳಿಗೆ ಸ್ವ ಉದ್ಯೋಗ ಮಾಡಲು ಕೊಡಲಾಗುವ ವಾಹನಗಳಲ್ಲಿ ಇಲೆಕ್ಟ್ರಿಕ್ ವಾಹನ ನೀಡುವ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆಯುವುದಾಗಿ ಶಾಸಕ ಡಾ.ಭರತ್ ಶೆಟ್ಟಿ ವೈ. ಹೇಳಿದ್ದಾರೆ. ಕೇಂದ್ರ ಸರಕಾರ ಮಾಲಿನ್ಯ ಕಡಿಮೆ ಮಾಡಲು ವಿದ್ಯುತ್ ಚಾಲಿತ ವಾಹನಗಳಿಗೆ ಭಾರೀ […]