ಅಕ್ರಮವಾಗಿ ದನ ಕರುಗಳನ್ನು ವಧೆಗೆ ಸಾಗಿಸುತ್ತಿದ್ದಾಗ ರಸ್ತೆಗೆ ಬಿದ್ದ ಆರು ಕರುಗಳು, ಬೆನ್ನಟ್ಟಿದ ವಿಹೆಚ್ ಪಿ ಕಾರ್ಯಕರ್ತರು

Sunday, October 4th, 2020
vhp-protest

  ಮಂಗಳೂರು: ಅಕ್ರಮವಾಗಿ 30-35 ದನದ ಕರುಗಳನ್ನು 407 ವಾಹನವೊಂದರಲ್ಲಿ ಕುದ್ರೋಳಿಯ ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಆರು ಕರುಗಳು ವಾಹನದಿಂದ ಬಿದ್ದು  ಗಂಭೀರ ಗಾಯಗೊಂಡ ಘಟನೆಯನ್ನು ಖಂಡಿಸಿ ನಗರದ ಮಣ್ಣಗುಡ್ಡ ಗುರ್ಜಿ ಬಳಿ ವಿಶ್ವ ಹಿಂದೂ ಪರಿಷತ್ – ಬಜರಂಗದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ನೇತ್ರಾವತಿ ಎಂಬ ಹೆಸರಿನ 407 ವಾಹನವೊಂದರಲ್ಲಿ ನಸುಕಿನ ಜಾವದಲ್ಲಿ 30-35 ದನದ ಕರುಗಳನ್ನು ಅಮಾನವೀಯವಾಗಿ ತುಂಬಿಸಿ ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಕೆಎಸ್ಆರ್ ಟಿಸಿ ಬಳಿ ಹಂಪ್ಸ್ ನಲ್ಲಿ ವಾಹನದಿಂದ 2 ದನದ ಕರುಗಳು ಬಿದ್ದಿವೆ. […]

ಕುಡ್ಲೂರು ಬಸ್ ಗಳ ನಡುವೆ ಅಪಘಾತ : ಬಸ್ ಚಾಲಕ ಸಾವು, 20 ಮಂದಿಗೆ ಗಾಯ

Thursday, September 5th, 2019
KSRTC

ಚಿಕ್ಕಮಗಳೂರು : ಕೆಎಸ್ಆರ್ ಟಿಸಿ ಹಾಗೂ‌ ಎಸ್ ಆರ್ ಎಸ್ ಖಾಸಗಿ‌ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಕೆಎಸ್ಆರ್ ಟಿಸಿ ಬಸ್ ಚಾಲಕ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಕುಡ್ಲೂರು ಸಮೀಪ‌ ಶಿವಮೊಗ್ಗ -ಬೆಂಗಳೂರು ರಾಷ್ಟ್ರೀಯ‌ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಕೆಎಸ್ ಆರ್ ಟಿಸಿ ಬಸ್ ತೆರಳುತ್ತಿತ್ತು. ಖಾಸಗಿ ಬಸ್ ನಲ್ಲಿ ಸಿಲುಕಿದ್ದ ಚಾಲಕನನ್ನು ಹರಸಾಹಸ ಪಟ್ಟು ಸ್ಥಳೀಯರು ಹೊರತೆಗೆದಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು […]

ಬೆಳ್ತಂಗಡಿ ಕೆಎಸ್ಆರ್ ಟಿಸಿ ಬಸ್ಸಿಗೆ ಕಾರು ಡಿಕ್ಕಿ ಇಬ್ಬರು ಸ್ಥಳದಲ್ಲೇ ಸಾವು

Monday, August 6th, 2018
Belthangady Accident

ಮಂಗಳೂರು : ಬೆಳ್ತಂಗಡಿ ತಾಲೂಕಿನ ಕೌಕ್ರಾಡಿ ಬಳಿ ಬೆಂಗಳೂರು ಕಡೆ ತೆರಳುತ್ತಿದ್ದ ಕೆಎಸ್ಆರ್ ಟಿಸಿ ಬಸ್ಸಿಗೆ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಯಿಂದ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಧರ್ಮಸ್ಥಳ ನಿವಾಸಿಗಳಾದ ದಿನೇಶ್(32) ಹಾಗೂ ಸಂದೇಶ್(30) ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಈ ಇಬ್ಬರು ತೀವ್ರವಾಗಿ ಗಾಯಗೊಂಡು ನರಳಾಡುತ್ತಿದ್ದರು. ಅವರನ್ನು ಸ್ಥಳೀಯ ಯುವಕರು ಹರಸಾಹಸಪಟ್ಟು ಕಾರಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸುತ್ತಿದ್ದರು. ಈ ವೇಳೆ ಮಾರ್ಗಮಧ್ಯೆ ದಿನೇಶ್ ಮತ್ತು ಸಂದೇಶ ಅಸುನೀಗಿದ್ದಾರೆ. […]

ಕೆಎಸ್ಆರ್ ಟಿಸಿ ದುಸ್ಥಿತಿಯನ್ನು ಬೆಳಕಿಗೆ ತಂದ ಚಾಲಕ ರಮೇಶ್ ಗೆ ಧಮ್ಕಿ

Monday, June 11th, 2018
Ramesh Ksrtc

ಮಂಗಳೂರು : ಕೆಎಸ್ಆರ್ ಟಿಸಿ ಚಾಲಕ ರು ಪಡುವ ಕಷ್ಟವನ್ನು ಸಾರ್ವಜನಿಕರ ಗಮನಕ್ಕೆ ತಂದ ಕೆಎಸ್ ಆರ್ ಟಿಸಿ ಚಾಲಕನಿಗೆ ಆಡಳಿತ ಮಂಡಳಿ ಮಾನಸಿಕವಾಗಿ ಕಿರುಕುಳ ನೀಡ್ತಿರುವ ಸುದ್ದಿ ಹೊರಬಿದ್ದಿದೆ. ಧರ್ಮಸ್ಥಳ ಡಿಪೋಗೆ ಸೇರಿದ ಬಸ್ ಚಾಲಕ ರಮೇಶ್, ತಮಗೆ ಅಧಿಕಾರಿಗಳು ನೀಡ್ತಿರುವ ಬಸ್ ಗಳ ಶೋಚನೀಯ ಅವಸ್ಥೆಯನ್ನು ದೃಶ್ಯ ಸಮೇತ ಮೊಬೈಲ್ ನಲ್ಲಿ ಸೆರೆ ಹಿಡಿದು ಚಾಲಕ ಸಮೂಹಕ್ಕೆ ಕಳುಹಿಸಿದ್ದರು. ಇದರಿಂದ ಎಚ್ಚೆತ್ತುಕೊಂಡು ಆಗಿರುವ ಸಮಸ್ಯೆಗೆ ಪರಿಹಾರ ಕೊಡುವ ಬದಲುರಮೇಶ್ ವಿರುದ್ದ ಸೇಡಿನ ಕ್ರಮ ಕೈಗೊಂಡಿದ್ದಾರೆ. […]