ಬಾಲಕಲಾವಿದೆ ಜ್ಞಾನಾ ಐತಾಳ್‌ ರವರಿಂದ ಮಕ್ಕಳ ಚಲನಚಿತ್ರೋತ್ಸವ ಸಮಾರಂಭಕ್ಕೆ ಚಾಲನೆ

Tuesday, November 27th, 2012
Children s Film Festival

ಮಂಗಳೂರು :ಚಿಲ್ಡ್ರನ್ಸ್‌ ಫಿಲ್ಮ್ ಸೊಸೈಟಿ ಚೆನೈ, ಜಿಲ್ಲಾ ಪಂಚಾಯಿತಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಜ್ಯೋತಿ ಚಿತ್ರಮಂದಿರದಲ್ಲಿ ಸೋಮವಾರ ಮಕ್ಕಳ ಚಲನಚಿತ್ರೋತ್ಸವ ಸಮಾರಂಭಕ್ಕೆ ಚಾಲನೆ ನೀಡಲಾಯಿತು. ಪ್ರತಿಭಾವಂತ ಬಾಲಕಲಾವಿದೆ ಜ್ಞಾನಾ ಐತಾಳ್‌ ಸಮಾರಂಭಕ್ಕೆ ಚಾಲನೆ ನೀಡಿದರು. ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ. ಎನ್. ವಿಜಯಪ್ರಕಾಶ್ ಅಧ್ಯಕ್ಷತೆ ವಹಿಸಿ ಅಸಾಧಾರಣ ಪ್ರತಿಭೆ ಮೂಲಕ ಅರ್ಥಪೂರ್ಣ ಉದ್ಘಾಟನೆ ನಡೆದಿದೆ. ಚಲನಚಿತ್ರದ ಸಂದೇಶ, ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸುವುದು ಪ್ರದರ್ಶನದ ಉದ್ದೇಶ. ವಿದ್ಯಾರ್ಥಿಗಳು ರಾಷ್ಟ್ರಪ್ರೇಮ, ಸತ್ಯ, ನಿಷ್ಠೆ […]

ನಗರ ವ್ಯಾಪ್ತಿಯಲ್ಲಿ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಅವಕಾಶ ಬೇಡ: ಜಿಲ್ಲಾಧಿಕಾರಿ

Friday, April 15th, 2011
ಜಿಲ್ಲಾಧಿಕಾರಿ ಸುಬೋಧ್ ಯಾದವ್

ಮಂಗಳೂರು : ನಗರ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಿಸಲು ಅದರಲ್ಲೂ ಮುಖ್ಯವಾಗಿ ಯೋಜನೆ ಉಲ್ಲಂಘಿಸಿ ನಿರ್ಮಾಣವಾಗುವ ಕಟ್ಟಡಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸ ಬೇಕೆಂದು ಜಿಲ್ಲಾಧಿಕಾರಿ ಸುಬೋಧ್ ಯಾದವ್ ಅವರು ಹೇಳಿದರು. ಅವರಿಂದು ಕಾರ್ಪೋರೇಷನ್ ಕಚೇರಿಯಲ್ಲಿ ನಡೆದ ಪಾಲಿಕೆ ಅಭಿವೃದ್ಧಿ ಸಭೆಯಲ್ಲಿ ಪ್ರಗತಿಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿಗಳ ಕಚೇರಿಗೆ ಕಟ್ಟಡ ನಿರ್ಮಾಣದಲ್ಲಿ ಅಕ್ರಮ ನಡೆಯುತ್ತಿರುವ ಬಗ್ಗೆ ಬಹಳಷ್ಟು ದೂರುಗಳು ಬರುತ್ತಿದ್ದು, ನಗರ ಯೋಜನಾಧಿಕಾರಿಗಳು ತಮ್ಮ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದರು. ಅಕ್ರಮಗಳ ದೂರು ವ್ಯಾಪಕವಾದರೆ ತನ್ನ ಮಧ್ಯಪ್ರವೇಶ ಅನಿವಾರ್ಯವಾದೀತು ಎಂಬ ಎಚ್ಚರಿಕೆಯನ್ನು […]