ಮಂಗಳೂರು ಸ್ಮಾರ್ಟ್ ಸಿಟಿ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ

Wednesday, November 24th, 2021
ACB raid

ಮಂಗಳೂರು : ಆದಾಯಕ್ಕಿಂತ ಹೆಚ್ಚಿನ ಆರೋಪ ಹೊತ್ತಿರುವ ಮಂಗಳೂರು ಸ್ಮಾರ್ಟ್ ಸಿಟಿ ಅಧಿಕಾರಿಯಾಗಿರುವ ಕೆ.ಎಸ್.ಲಿಂಗೇಗೌಡ ಅವರ ಮನೆ ಮೇಲೆ ಇಂದು ಮುಂಜಾನೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉರ್ವದಲ್ಲಿರುವ ಲಿಂಗೇ ಗೌಡ ಮನೆಗೆ ಇಂದು ಬೆಳಗ್ಗೆ ದಾಳಿ ಮಾಡಿದ ಏಳು ಮಂದಿ ಎಸಿಬಿ ಅಧಿಕಾರಿಗಳ ತಂಡ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಮಂಗಳೂರು ಮಹಾನಗರ ಪಾಲಿಕೆಯ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿದ್ದ  ಅವರು ಹಲವು ವರ್ಷಗಳಿಂದ ಮಂಗಳೂರಿನಲ್ಲೇ ಬೇರೆ ಬೇರೆ ಹುದ್ದೆಯಲ್ಲಿ  ಸೇವೆ ನಿರ್ವಹಿಸಿದ್ದರು, ಲಿಂಗೇಗೌಡರ ವಿರುದ್ಧ […]

ನೇತ್ರಾವತಿ ಸೇತುವೆಯಿಂದ ನದಿತೀರದಲ್ಲಿ ಎನ್.ಎಂ.ಪಿ.ಟಿ ವರೆಗೆ ರಸ್ತೆ : ಶಾಸಕ ಜೆ.ಆರ್.ಲೋಬೊ

Thursday, December 21st, 2017
j-r-lobo

ಮಂಗಳೂರು: ನೇತ್ರಾವತಿ ಸೇತುವೆಯಿಂದ ನದಿ ಬದಿಯಲ್ಲಿ ಮಂಗಳೂರು ಹಳೆ ಬಂದರು, ಸುಲ್ತಾನ್ ಬತ್ತೇರಿ, ತಣ್ಣೀರುಬಾವಿಯಾಗಿ ನವಮಂಗಳೂರು ಬಂದರಿಗೆ ಪರ್ಯಾಯ ಹೆದ್ದಾರಿ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಶಾಸಕ ಜೆ.ಆರ್.ಲೋಬೊ ಅವರು ಹೇಳಿದರು. ಅವರು ಮಲ್ಲಿಕಟ್ಟೆ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡುತ್ತಾ ಈ ಯೋಜನೆಗೆ ಸುಮಾರು ೧೦೦೦ ಕೋಟಿ ರೂಪಾಯಿ ಹೂಡಿಕೆಯಾಗಲಿದೆ ಎಂದರು. ಸುಲ್ತಾನ್ ಬತ್ತೇರಿಯಲ್ಲಿ ಸೇತುವೆಯನ್ನು ನಿರ್ಮಿಸಿ ತೂಗುಸೇತುವೆ ನಿರ್ಮಾಣವನ್ನು ಕೈಬಿಡಲು ಉದ್ದೇಶಿಸಲಾಗಿದೆ. ಸೇತುವೆ ನಿರ್ಮಾಣವಾದರೆ ತೂಗುಸೇತುವೆಯ ಅಗತ್ಯವಿರುವುದಿಲ್ಲ ಎಂದ ಅವರು ಈ ರಸ್ತೆಯನ್ನು ಬಹುಪಯೋಗಿಯ ರಸ್ತೆಯನ್ನು […]