ತವರು ಮನೆಗೆ ಬಂದಿದ್ದ ತಾಯಿ ಮಗು ಕೆರೆಯಲ್ಲಿ ಮುಳುಗಿ ಸಾವು

Sunday, August 8th, 2021
Abhishek

ಸುಳ್ಯ: ತವರು ಮನೆಗೆ ಪೂಜೆಗೆ ಬಂದಿದ್ದ ತಾಯಿ ಮಗು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದ ಪರಿಣಾಮ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ನೆಲ್ಲೂರು ಕೇಮ್ರಾಜೆ ಗ್ರಾಮದಲ್ಲಿ ನಡೆದಿದೆ. ನೆಲ್ಲೂರು ಕೇಮ್ರಾಜೆ ಗ್ರಾಮದ ಮಾಪಲಕಜೆಯಲ್ಲಿ ತವರು ಮನೆ ಹೊಂದಿರುವ ಮೆಲ್ಕಾರ್ ನಿವಾಸಿ ಅಮಿತ್ ಎಂಬವರ ಪತ್ನಿ ಸಂಗೀತಾ(30) ಮತ್ತು ಆಕೆಯ ಮಗು‌ ನಾಲ್ಕು ವರ್ಷದ ಅಭಿಮನ್ಯು ಮೃತರು. ತಾಯಿ ಮಗು  ನಾಳೆ ಮೆಲ್ಕಾರ್ಗೆ ಹೋಗುವವರಿದ್ದರು ಎನ್ನಲಾಗಿದೆ. ಪಕ್ಕದ ನೆಂಟರೋರ್ವರ ಮನೆಗೆ ಹೋಗುವಾಗ ಮಗು ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ […]