ಯೂಟ್ಯೂಬ್ ವೀಡಿಯೋ ನೋಡಿ ಹೆರಿಗೆ, ಪ್ರಿಯಕರನ ಬಂಧನ

Thursday, October 28th, 2021
YouTube Baby

ತಿರುವನಂತಪುರ:  ಪ್ರಿಯಕರನಿಂದ ಗರ್ಭಿಣಿಯಾದ  17 ವರ್ಷದ ಹುಡುಗಿಯೊಬ್ಬಳು ಯೂಟ್ಯೂಬ್ ವೀಡಿಯೋಗಳ ಸಹಾಯದಿಂದ ಮನೆಯಲ್ಲಿ ತಾನೇ ಹೆರಿಗೆ ಮಾಡಿಕೊಂಡು ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ. ಅಕ್ಟೋಬರ್ 20ರಂದು ಹುಡುಗಿ ಮಗುವಿಗೆ ಜನ್ಮ ನೀಡಿದ್ದು, ಯೂಟ್ಯೂಬ್ ವೀಡಿಯೋಗಳನ್ನು ಮಾರ್ಗದರ್ಶಿಯಾಗಿ ಬಳಸಿಕೊಂಡು ಹೊಕ್ಕಳಬಳ್ಳಿಯನ್ನು ಕತ್ತರಿಸಿಕೊಂಡಿದ್ದಾಳೆ. ಸಂಪೂರ್ಣ ಹೆರಿಗೆ ಪ್ರಕ್ರಿಯೆಯನ್ನು ಹುಡುಗಿ ಯಾವುದೇ ಹೊರಗಿನವರ ಸಹಾಯ ಪಡೆಯದೇ ತಾನೇ ಮಾಡಿಕೊಂಡಿದ್ದಾಳೆ ಎಂಬ ವಿಚಾರ ತನಿಖೆ ವೇಳೆ ಪೊಲೀಸರಿಗೆ ತಿಳಿದುಬಂದಿದೆ. ಸದ್ಯ ಮಂಜೇರಿಯ ಸರ್ಕಾರಿ ವೈದ್ಯಕೀಯ ಕಾಲೇಜು […]

ಮೀನುಗಾರರ ಬಲೆಗೆ ಬಿದ್ದ ಭಾರೀ ಗಾತ್ರದ ಗಿಟಾರ್ ಶಾರ್ಕ್ ಮೀನು

Monday, October 4th, 2021
Shark Fish

ಮಲ್ಪೆ :  ಅಪರೂಪದ ಹಾಗೂ ಭಾರೀ ಗಾತ್ರದ ಗಿಟಾರ್ ಶಾರ್ಕ್ ಮೀನು ಮಲ್ಪೆ ಬಂದರಿನಿಂದ ಸುಮಾರು 20 ನಾಟೇಕಲ್ ದೂರದಲ್ಲಿ ಆಳ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಬೋಟಿಗೆ ಬಿದ್ದಿದೆ. ಅಕ್ಕಪಕ್ಕ ಬೆನ್ನ ಮೇಲೆ ಅಗಲ ರೆಕ್ಕೆಯಿರುವ ಈ ಮೀನು ಲುಕ್ಮನ್ ಎಂಬವರಿಗೆ ಸೇರಿದ ಮೀನುಗಾರಿಕಾ ಬೋಟಿನಲ್ಲಿನ ಮೀನುಗಾರರು ಬೀಸಿದ ಬಲೆಗೆ ಬಿದ್ದಿದೆ. ಅಂಜಲ್, ಬಂಗುಡೆ ಮೀನಿನ ಜೊತೆಗೆ ಈ ಮೀನು ಬಿದ್ದಿದೆ. ಸ್ಥಳೀಯವಾಗಿ ಇದಕ್ಕೆ ನೆಮ್ಮೀನ್ ಹಾಗೂ ಹೆಲಿಕಾಪ್ಟರ್ ಫಿಶ್ ಎಂಬುದಾಗಿ ಕರೆಯುತ್ತಾರೆ. ಈ ಮೀನು ಸುಮಾರು 84 ಕೆ.ಜಿ. ತೂಗುತ್ತಿತ್ತು. ಕೇರಳಿಗರು […]

ಕರ್ನಾಟಕ ಮತ್ತು ಕೇರಳದಲ್ಲಿ ತುಳುವನ್ನು ಅಧಿಕೃತ ರಾಜ್ಯ ಭಾಷೆಯನ್ನಾಗಿ ಘೋಷಿಸಲು ಟ್ವಿಟ್ ಅಭಿಯಾನ

Sunday, June 13th, 2021
Tulu Language

ಮಂಗಳೂರು:  ಕರ್ನಾಟಕ ಮತ್ತು ಕೇರಳ ಸರಕಾರ ತುಳು ಭಾಷೆಯನ್ನು ಅಧಿಕೃತ ರಾಜ್ಯ ಭಾಷೆಯನ್ನಾಗಿ ಮಾಡಬೇಕು ಎಂದು ಒತ್ತಾಯಿಸಿ ಜೈ ತುಳುನಾಡು ಸೇರಿದಂತೆ ಇತರೇ ಸಂಘಟನೆಗಳು ಮತ್ತು ತುಳು ಭಾಷಿಗರಿಂದ ರವಿವಾರದಂದು ಟ್ವಿಟರ್ ಅಭಿಯಾನ ಆರಂಭಗೊಂಡಿದೆ. ರವಿವಾರ ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಆಯೋಜಿಸಲಾದ ಟ್ವೀಟ್ ಅಭಿಯಾನಕ್ಕೆ ಸಾವಿರಾರು ಮಂದಿ ಟ್ವೀಟ್ ಮಾಡಿ ಬೆಂಬಲ ಸೂಚಿಸಿದ್ದಾರೆ. ಟ್ವೀಟ್ ಅಭಿಯಾನದಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ 1 ಲಕ್ಷಕ್ಕೂ ಹೆಚ್ಚಿನ ಟ್ವೀಟ್ ಗಳು ದಾಖಲಾಗಿವೆ. ತುಳುಭಾಷೆಯ ಸ್ಥಾನಮಾನಕ್ಕಾಗಿ ಈ ಹಿಂದೆಯೂ ಟ್ವೀಟ್‌ […]

ಇನ್ನು ಮುಂದೆ ಕರ್ನಾಟಕದಲ್ಲಿ ಬಸ್ಸುಗಳ ಮೇಲೆ ಕೆಎಸ್ಆರ್‌ಟಿಸಿ ಇರಲ್ಲ, ಅದು ಕೇರಳದ ಪಾಲಾಗಿದೆ

Thursday, June 3rd, 2021
ksrtcBus.

ಮಂಗಳೂರು  : ಕರ್ನಾಟಕ ಮತ್ತು ಕೇರಳ ಸರ್ಕಾರಿ ಬಸ್ಸುಗಳು ಕೆಎಸ್ಆರ್‌ಟಿಸಿ ಅಂತ ಕಡಿತ ಗೊಳಿಸಿದ ಇಂಗ್ಲಿಷ್ ಪದ ಬಳಸುತ್ತಿತ್ತು. ಆದರೆ ಆ  ಕೆಎಸ್ಆರ್‌ಟಿಸಿ  ಪದವನ್ನು ಕೇರಳ ಮಾತ್ರ ಪದ ಬಳಸಬೇಕು ಎಂದು ಕೇಂದ್ರ ವ್ಯಾಪಾರ ಗುರುತು ನೋಂದಾವಣಿ(ಟ್ರೇಡ್ ಮಾರ್ಕ್ ರಿಜಿಸ್ಟಿ) ಅಂತಿಮ ತೀರ್ಪು ನೀಡಿದೆ. ಕೇರಳ ಮಾತ್ರ ಇನ್ನು ಮುಂದೆ ತನ್ನ ಸಾರಿಗೆ ಸಂಸ್ಧೆಯನ್ನು ಕೆಎಸ್ಆರ್‌ಟಿಸಿ ಅಂತ ಬಳಸಬೇಕು. ಅಲ್ಲದೆ ಕರ್ನಾಟಕ ರಾಜ್ಯದ ಸಾರಿಗೆ ಬಸ್ ಮತ್ತು ಇತರ ಕಡೆ ನೋದಾಯಿಸಿದ್ದ, ಪ್ರಕಟನೆ ಬೋರ್ಡ್ ಎಲ್ಲ ಲೋಗೋ ಮತ್ತು ಚಿತ್ರಗಳನ್ನು […]

ಕೇರಳದಲ್ಲಿ ಬಿಜೆಪಿ ಖಾತೆ ತೆರೆಯಲು ಬಿಡುವುದಿಲ್ಲ : ಪಿಣರಾಯಿ ವಿಜಯನ್

Wednesday, March 31st, 2021
pinarai

ಕಾಸರಗೋಡು : ಮಂಜೇಶ್ವರ ಕ್ಷೇತ್ರದ ಅಭ್ಯರ್ಥಿ ವಿ.ವಿ. ರಮೇಶನ್, ಕಾಸರಗೋಡು ಕ್ಷೇತ್ರದ ಎಂ.ಎ. ಲತೀಫ್ ಪರ ಚುನಾವಣಾ ಪ್ರಚಾರದಲ್ಲಿರುವ ಕೇರಳ ಮುಖ್ಯಮಂತ್ರಿ  ಪಿಣರಾಯಿ ವಿಜಯನ್ ಕೇರಳದಲ್ಲಿ ಈ ಬಾರಿ  ಒಂದು ಸ್ಥಾನಕ್ಕೂ ಅವಕಾಶ ನೀಡುವುದಿಲ್ಲ ಎಂದಿದ್ದಾರೆ. ಬಿಜೆಪಿ  2019 ರಲ್ಲಿ ಕೇವಲ ಒಂದೇ ಒಂದು ಸ್ಥಾನದಲ್ಲಿ ಖಾತೆ ತೆರೆದಿದ್ದು ನೇಮಂನಲ್ಲಿ ಗೆದ್ದಿತ್ತು. ಈ ಬಾರಿ ಈ ಖಾತೆಯನ್ನು ಮುಚ್ಚುತ್ತೇವೆ,   ಕಾಂಗ್ರೆಸ್ ನ ಒಳಒಪ್ಪಂದದಿಂದ ಬಿಜೆಪಿ ಗೆದ್ದಿತ್ತು. ಈ ಬಾರಿ ಅದನ್ನು ಬಂದ್ ಮಾಡುತ್ತೇವೆ ಎಂದು ಹೇಳಿದರು. ಮೊಗ್ರಾಲ್ ಶಾಲಾ ಮೈದಾನ ದಲ್ಲಿ ಮಂಜೇಶ್ವರ […]

ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದ ಹಿನ್ನೆಲೆ ; ಕರ್ನಾಟಕ ಪ್ರವೇಶ ನಿರ್ಬಂಧ

Monday, February 22nd, 2021
keralagate

ಮಂಗಳೂರು  : ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ವಯನಾಡ್ ಮತ್ತು ಕಾಸರಗೋಡು ಜಿಲ್ಲೆಯಲ್ಲಿರುವ 13  ಪ್ರವೇಶ ದ್ವಾರಗಳನ್ನು ಮುಚ್ಚಲು ನಿರ್ಧರಿಸಲಾಗಿದೆ. ಗಡಿಭಾಗ ತಲಪಾಡಿಯಲ್ಲಿ ಆರೋಗ್ಯ ಅಧಿಕಾರಿಗಳ ಪರಿಶೀಲನಾ ಕೇಂದ್ರ ಇಂದಿನಿಂದ ಮತ್ತೆ ಆರಂಭಗೊಂಡಿದ್ದು, ಆರ್ಟಿಪಿಸಿಆರ್ ವರದಿ ಇದ್ದರೆ ಮಾತ್ರ ನಾಳೆಯಿಂದ ಕರ್ನಾಟಕ ಪ್ರವೇಶಕ್ಕೆ ಅವಕಾಶ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲಾ ಆರೋಗ್ಯ ಅಧಿಕಾರಿ ರಾಮಕೃಷ್ಣ ಬಾಯರಿ, ತಹಶೀಲ್ದಾರ್ ಗುರುಪ್ರಸಾದ್ ನೇತೃತ್ವದ ತಂಡ ತಲಪಾಡಿ ಗಡಿಭಾಗದಲ್ಲಿ ನಿಂತು ಕೇರಳದಿಂದ ಬರುವವರನ್ನು ತಡೆದು ಟೆಸ್ಟ್ ವರದಿ ನೀಡುವಂತೆ […]

ಮಂಗಳೂರು : ಕೇರಳ ಮೂಲದ ಉದ್ಯಮಿಯನ್ನು ಮನೆಯಲ್ಲೇ ಕೊಲೆಗೈದ ದುಷ್ಕರ್ಮಿಗಳು

Tuesday, November 3rd, 2020
Murder

ಮಂಗಳೂರು : ಕೇರಳ ಮೂಲದ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಚೂರಿಯಿಂದ ಹಾಡಹಗಲೇ ಇರಿದು ಹತ್ಯೆ ಮಾಡಿದ ಘಟನೆ ನಗರದ ಕಾವೂರಿನಲ್ಲಿ ಮಂಗಳವಾರ ನಡೆದಿದೆ. ಕಾವೂರು ಮಲ್ಲಿ ಲೇಔಟ್ ನಿವಾಸಿ ಸುರೇಂದ್ರನ್ (60) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ಮೂಲತಃ ಕೇರಳದವರಾದ ಸುರೇಂದ್ರನ್ ಅವರು ಹಲವು ವರ್ಷಗಳಿಂದ ಕಾವೂರು ಮಲ್ಲಿ ಲೇಔಟ್‌ನಲ್ಲೇ ಸ್ವಂತ ಮನೆ ಮಾಡಿ ತನ್ನ ಪತ್ನಿ ಜತೆ ವಾಸಿಸುತ್ತಿದ್ದರು. ಮಂಗಳವಾರ ಸುರೇಂದ್ರನ್ ನಗರಕ್ಕೆ ಹೋಗಿದ್ದರೆ, ಅವರ ಪತ್ನಿ ಫಾರ್ಮ್ ಉದ್ಯಮ ವ್ಯವಹಾರ ನೋಡಿಕೊಳ್ಳಲು ತೆರಳಿದ್ದರು. ಮಧ್ಯಾಹ್ನ 1 […]

ಕೇರಳ ಪೊಲೀಸರು ಮತ್ತು ಜಿಲ್ಲಾಡಳಿತದ ದೌರ್ಜನ್ಯ ಖಂಡಿಸಿ ಬಿಜೆಪಿಯಿಂದ ತಲಪಾಡಿಯಲ್ಲಿ ಪ್ರತಿಭಟನೆ

Tuesday, September 1st, 2020
Bjp protest

ಮಂಜೇಶ್ವರ : ಕೇರಳ ಮತ್ತು ಕರ್ನಾಟಕ ಅಂತರ್ ರಾಜ್ಯ ಸಂಚಾರಕ್ಕೆ ಮುಕ್ತ ಅವಕಾಶ ನೀಡಬೇಕೆಂದು ಆಗ್ರಹಿಸಿ ಮಂಜೇಶ್ವರ ಬಿಜೆಪಿ ಮಂಡಲ ಸಮಿತಿಯ ನೇತೃತ್ವದಲ್ಲಿ ತಲಪಾಡಿಯಲ್ಲಿ ಗಡಿಯಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಗೆ ಬಿಜೆಪಿ ಜಿಲ್ಲಾಧ್ಯಕ್ಷ ನ್ಯಾಯವಾದಿಗಳು ಆದ ಶ್ರೀಕಾಂತ್ ಚಾಲನೆ ನೀಡಿದರು. ಮಂಜೇಶ್ವರ ಮಂಡಲ ಸಮಿತಿಯ ಅಧ್ಯಕ್ಷರಾದ ಮಣಿಕಂಠ ರೈ ಅಧ್ಯಕ್ಷತೆ ವಹಿಸಿದ್ದರು. ಕೊರೊನಾ ಪಾಸಿಟಿವ್ ಹೆಚ್ಚಿರುವ ಮಲಪ್ಪುರಂ, ಕಣ್ಣೂರು ಮತ್ತು ಅನ್ಯರಾಜ್ಯಗಳಿಂದ ವ್ಯಾಪಾರ ಸಂಭಂದಿತ ಸರಕು ವಾಹನಗಳಿಗೆ ಯಾವುದೇ ನಿರ್ಬಂಧ ಮಾಡದೆ ಕೇವಲ ದಕ್ಷಿಣಕನ್ನಡ ಜಿಲ್ಲೆಗೆ […]

ಕೊರೋನಾ ನಿಯಮಗಳನ್ನು ಪಾಲಿಸಲು ರಸ್ತೆಯಲ್ಲಿಯೇ ಮದುವೆ ಮಾಡಿಕೊಂಡ ಜೋಡಿ

Wednesday, July 22nd, 2020
ಕೊರೋನಾ ನಿಯಮಗಳನ್ನು ಪಾಲಿಸಲು ರಸ್ತೆಯಲ್ಲಿಯೇ ಮದುವೆ ಮಾಡಿಕೊಂಡ ಜೋಡಿ

ಚಾಮರಾಜನಗರ : ಕೇರಳದ ವರ ಮತ್ತು ಶಿವಮೊಗ್ಗ ಜಿಲ್ಲೆಯ ವಧು ಈ ಜಿಲ್ಲೆಯ ಮೂಲೆಹೋಲ್ ಚೆಕ್ ಪೋಸ್ಟ್ ಬಳಿ  ರಸ್ತೆಯಲ್ಲಿಯೇ ಪರಸ್ಪರ ಹೂಮಾಲೆ ಬದಲಾಯಿಕೊಂಡು ಕೊರೋನಾ ನಿಯಮಗಳನ್ನು ಉಲ್ಲಂಘಿಸದಂತೆ ಮದುವೆ ಮಾಡಿಕೊಂಡರು. ಕೇರಳದೊಂದಿಗೆ ತನ್ನ ಗಡಿಯನ್ನು ಹಂಚಿಕೊಳ್ಳುವ ಚಾಮರಾಜನಗರ ಜಿಲ್ಲೆಯ ಗುಂಡಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಅಭಯಾರಣ್ಯದಲ್ಲಿರುವ ಕರ್ನಾಟಕ ಗಡಿಯ ಮೂಲೆಹೋಲ್‌ನಲ್ಲಿ ಜುಲೈ 21 ರ ಮಂಗಳವಾರ ಈ ಮದುವೆ ನಡೆಯಿತು. ಮಂಗಳವಾರ ಮಧ್ಯಾಹ್ನ, ಇಬ್ಬರು ಹೂಮಾಲೆಗಳನ್ನು ವಿನಿಮಯ ಮಾಡಿಕೊಂಡರು ಮತ್ತು ವರನು ಮಂಗಳಸೂತ್ರವನ್ನು ಹುಡುಗಿಯ ಕುತ್ತಿಗೆಗೆ ಕಟ್ಟಿದನು. ಕರೋನಾ ನಿಯಮವನ್ನು ಉಲ್ಲಂಘಿಸದಿರಲು […]

ಕೇರಳದಲ್ಲಿ ಕೋವಿಡ್ ಸೋಂಕು ತಡೆಯಲು ಕೊಡೆಗಳ ಪ್ರಯೋಗ

Wednesday, April 29th, 2020
kerala-umbrella

ಕೇರಳ  : ಇದೇನು ಕೊರೋನಾ ವೈರಸ್ ಗಳು ಆಕಾಶದಿಂದ ಉದುರುತ್ತವೆ ಅಂದು ಕೊಂಡ್ರ. ಕೊರೋನಾ ವೈರಸ್ ಗಳಿಗೆ ಕೊಡೆಗಳನ್ನು ಕಂಡರೆ ಭಯವೇ, ಅಲ್ಲವೇ ಅಲ್ಲ. ಜನರು ಸಾರ್ವಜನಿಕ ಸ್ಥಳಗಳಲ್ಲಿ ಕೊಡೆಗಳನ್ನು ಬಿಡಿಸಿಕೊಂಡು ನಿಲ್ಲುವುದರಿಂದ ಸೂಕ್ತ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು  ಸಾಧ್ಯ ಎಂಬುದನ್ನು ಕೇರಳದ ಅಲಪ್ಪುಝ ಜಿಲ್ಲೆಯ ಥನೀರ್ ಮುಕ್ಕೊಂ ಪಂಚಾಯತ್ ವ್ಯಾಪ್ತಿಯಲ್ಲಿ ಸಾಧಿಸಿ ತೋರಿಸಲಾಗಿದೆ. ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಅಲಪ್ಪುಝಾದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗಿತ್ತು. ಈ ಸಂದರ್ಭದಲ್ಲೇ ಕೇರಳ ಹಣಕಾಸು ಸಚಿವರಾಗಿರುವ ಥೋಮಸ್ ಐಸಾಕ್ ಅವರು ಸಾಮಾಜಿಕ […]