ಕೇರಳ ಪೊಲೀಸರನ್ನು ಮಂಗಳೂರು ಬಂದರಿನಲ್ಲಿ ಇಳಿಸಿದ ಕರ್ನಾಟಕ ಮೀನುಗಾರರ ಬೋಟ್

Tuesday, December 22nd, 2020
Karnataka Boat

ಕಾಸರಗೋಡು :  ಕರ್ನಾಟಕ ನೋಂದಣಿಯ ಬೋಟ್ ಕೇರಳ ಸರಹದ್ದಿನ ಮಂಜೇಶ್ವರ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಕ್ಕೆ ಕೇರಳ ಪೊಲೀಸರು ಬೋಟನ್ನು ವಶಪಡಿಸಿದ್ದರು ಆದರೆ  ಮೀನುಗಾರರ ತಂಡ ಇಬ್ಬರು ಕೇರಳ ಪೊಲೀಸರನ್ನು ಮಂಗಳೂರು ಬಂದರಿನಲ್ಲಿ ಇಳಿಸಿದ ಘಟನೆ ಸೋಮವಾರ ನಡೆದಿದೆ. ಕರಾವಳಿ ಪೊಲೀಸ್ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ಕೆ.ವಿ. ರಾಜೀವ್ ಕುಮಾರ್ ನೇತೃತ್ವದ ತಂಡವು ಸೋಮವಾರ ಕುಂಬಳೆ ಶಿರಿಯದಲ್ಲಿ ತಪಾಸಣೆ ನಡೆಸುತ್ತಿದ್ದ ಸಂದರ್ಭ ಮಂಜೇಶ್ವರ ಸಮುದ್ರದಲ್ಲಿ ಕರ್ನಾಟಕ ನೋಂದಣಿಯ ಬೋಟ್ ಕಂಡುಬಂದಿದೆ. ಈ ವೇಳೆ ಅದರ ದಾಖಲೆ ಗಳನ್ನು ಪರಿಶೀಲಿಸಿದಾಗ ಕೆಲ ಸಂಶಯ ಉಂಟಾದ […]