ಕೇಸರಿ ಬಟ್ಟೆ ಬಗ್ಗೆ ಟೀಕಿಸಿದ್ದ ಪ್ರಿಯಾಂಕಾ ಗಾಂಧಿ ವಾದ್ರಾಗೆ ಸಿಎಂ ಯೋಗಿ ಆದಿತ್ಯನಾಥ್ ಎಚ್ಚರಿಕೆ

Tuesday, December 31st, 2019
yogi-adhithyanath

ಲಕ್ನೋ : ಕೇಸರಿ ಬಟ್ಟೆ ಯೋಗಿ ಆದಿತ್ಯನಾಥ್ ಅವರ ಸ್ವತ್ತಲ್ಲ ಎಂಬ ಹೇಳಿಕೆ ನೀಡಿದ್ದ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ತಿರುಗೇಟು ನೀಡಿರುವ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ‘ನಾನು ಎಲ್ಲವನ್ನೂ ತ್ಯಾಗ ಮಾಡಿಯೇ ಸಾರ್ವಜನಿಕ ಸೇವೆಗೆ ಬಂದವನು’ ಎಂದು ಹೇಳಿದ್ದಾರೆ. ಸಿಎಎ ವಿರುದ್ಧದ ಹೋರಾಟವನ್ನು ಬೆಂಬಲಿಸಿ ಲಕ್ನೋ ಪ್ರವಾಸದಲ್ಲಿರುವ ಪ್ರಿಯಾಂಕಾ ಗಾಂಧಿ ಸೋಮವಾರ ಸುದ್ದಿಗೋಷ್ಠಿ ನಡೆಸಿದ್ದರು. ಈ ವೇಳೆ ಮಾತನಾಡುವಾಗ ಯೋಗಿ ಆದಿತ್ಯನಾಥ್ ವಿರುದ್ಧ ಹರಿಹಾಯ್ದಿದ್ದರು. ಸಿಎಂ ಯೋಗಿ […]

ಜಿಲ್ಲೆಯ ಸಾಮರಸ್ಯದ ಪರಂಪರೆಯ ಉಳಿವಿಗೆ ಮತದಾರರು ಬೆಂಬಲಿಸುತ್ತಾರೆ : ಮಿಥುನ್ ರೈ

Thursday, April 18th, 2019
Mithun-Rai

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಿಥುನ್ ರೈ ಬಲ್ಮಠ ಮಹಿಳಾ ಕಾಲೇಜಿನಲ್ಲಿ ಮತ ಚಲಾಯಿಸಿದರು. ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಸಾಮರಸ್ಯದ ಪರಂಪರೆಯ ಉಳಿವಿಗೆ ಮತದಾರರು ಬೆಂಬಲಿಸುತ್ತಾರೆಂಬ  ಸಂಪೂರ್ಣ ವಿಶ್ವಾಸ ಇದೆ ಎಂದು ಹೇಳಿದ್ದಾರೆ. ಕೇಸರಿ ಎಂಬುದು ತ್ಯಾಗ, ಸೌಹಾರ್ದತೆಯ ಸಂಕೇತ. ದುರದೃಷ್ಟವೆಂದರೆ ಕೆಲ ದಿನಗಳಿಂದ ಕೇಸರಿ ಅಂದರೆ ಭೀತಿಯನ್ನು ಹುಟ್ಟಿಸುವ ಕೆಲಸ ನಡೆಯುತ್ತಿದೆ. ಈ ತಪ್ಪು ಅಭಿಪ್ರಾಯ ನಿವಾರಣೆಗೆ ಕೇಸರಿ ಶಾಲು ನಿರಂತರ ಬಳಸುತ್ತಿದ್ದೇನೆ ಎಂದು ಸಮರ್ಥನೆ ನೀಡಿದ್ದಾರೆ.