ಶಿವಮೊಗ್ಗ ಜಿಲ್ಲೆಯಲ್ಲಿ ಕವಾಸಕಿ ರೋಗಕ್ಕೆ ನಾಲ್ವರು ಮಕ್ಕಳು ಬಲಿ

Tuesday, June 8th, 2021
Kawasaki Disease

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಮಕ್ಕಳಲ್ಲಿ ಕವಾಸಕಿ ರೋಗ ಕಾಣಿಸಿಕೊಂಡಿದ್ದು ಶಿವಮೊಗ್ಗದ ಖಾಸಗಿ ಆಸ್ಪತ್ರೆಯೊಂದರಲ್ಲಿಯೇ ದಾಖಲಾದ 8 ಮಕ್ಕಳಲ್ಲಿ ನಾಲ್ವರು ಮಕ್ಕಳು ಬಲಿಯಾಗಿದ್ದಾರೆ. ರಾಜ್ಯದ ಎಲ್ಲೆಡೆ ಕವಾಸಕಿ ರೋಗ ಭೀತಿ ಉಲ್ಬಣಿಸಿದ್ದು, ಈ ಕವಾಸಕಿ ರೋಗಕ್ಕೆ ಶಿವಮೊಗ್ಗ ಜಿಲ್ಲೆಯಲ್ಲಿ ನಾಲ್ವರು ಮಕ್ಕಳು ಮೃತಪಟ್ಟಿದ್ದಾರೆ. ಕಳೆದ 15 ದಿನದಲ್ಲಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯೊಂದರಲ್ಲಿಯೇ 8 ಮಕ್ಕಳಲ್ಲಿ ರೋಗ ಕಾಣಿಸಿಕೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಲ್ಕು ಮಕ್ಕಳು ಮೃತಪಟ್ಟಿದ್ದಾರೆ. ಕೊರೊನಾ ಸೋಂಕಿಗೆ ತುತ್ತಾಗಿ ಚೇತರಿಸಿಕೊಂಡ, ಅಪೌಷ್ಠಿಕತೆ ಸಮಸ್ಯೆ ಇರುವ ಮಕ್ಕಳಲ್ಲಿ ಕವಾಸಕಿ ರೋಗ […]

ಮನೆಯವರಿಗೆ ಕೊರೊನಾ ಸೋಂಕು ಬರಬಹುದು ಎಂದು ಹೆದರಿ ಶಿಕ್ಷಕ ಆತ್ಮಹತ್ಯೆ

Tuesday, May 25th, 2021
mahantesh

ಗದಗ: ಜಕ್ಕಲಿ ಗ್ರಾಮದ ಸರ್ಕಾರಿ ಶಾಲೆ ಶಿಕ್ಷಕ ರೋರ್ವರು ಮನೆಯವರಿಗೆ ಕೊರೊನಾ ಸೋಂಕು ಬರಬಹುದು ಎಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಿಲ್ಲೆಯ ರೋಣ ತಾಲೂಕಿನ ಜಕ್ಕಲಿ ಗ್ರಾಮದ ಮಹಾಂತೇಶ್ ಕುದರಿ (32) ಮನೆಯಲ್ಲಿ ನೇಣಿಗೆ ಶರಣಾದವರು. ಮಹಾಂತೇಶ್ ಕುರ್ತಕೋಟಿ ಸರ್ಕಾರಿ ಶಾಲೆಯಲ್ಲಿ ಸಹ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮಹಾಂತೇಶ್ ಅವರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿತ್ತು. ಆದರೆ ಶಿಕ್ಷಕ ಮಾತ್ರ ತನ್ನ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದರು. ಕೊರೊನಾ ಪಾಸಿಟಿವ್ ಆಗಿದ್ದರಿಂದಾಗಿ ಮನೆ ಮಂದಿಗೆಲ್ಲಾ ಬರಬಹುದು ಎಂದು ಮನನೊಂದು ನೇಣು […]

ಧನ್ವಂತರಿ ಹೋಮದಲ್ಲಿ ಪಾಲ್ಗೊಂಡು ಕೊರೊನಾ ಸೋಂಕು ಇಳಿಮುಖವಾಗಲು ಪ್ರಾರ್ಥನೆ ಮಾಡಿದ ಸಚಿವ ಈಶ್ವರಪ್ಪ

Tuesday, May 18th, 2021
Eswarappa

ಶಿವಮೊಗ್ಗ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ  ಕೊರೊನಾ ಸೋಂಕಿತ ರು ಬೇಗ ಗುಣಮುಖರಾಗಲೆಂದು ಮತ್ತು ಸೋಂಕಿತರ ಸಂಖ್ಯೆ ಕಡಿಮೆಯಾಗಲಿ ಎಂದು ಸಚಿವ ಈಶ್ವರಪ್ಪ ಧನ್ವಂತರಿ ಹೋಮದಲ್ಲಿ ಪಾಲ್ಗೊಂಡು ಪ್ರಾರ್ಥನೆ ಮಾಡಿದ್ದಾರೆ ಸೇವಾ ಭಾರತಿ ಹಾಗೂ ಕೋವಿಡ್ ಸುರಕ್ಷಾ ಪಡೆ ವತಿಯಿಂದ ಶಿವಮೊಗ್ಗದ ಶುಭಮಂಗಳ ಸಮುದಾಯ ಭವನದ ಆವರಣದಲ್ಲಿರುವ ದೇವಾಲಯದಲ್ಲಿ,  ಆಯೋಜಿಸಿದ್ದ ಧನ್ವಂತರಿ ಹೋಮದಲ್ಲಿ, ಸಚಿವ ಈಶ್ವರಪ್ಪ ಕುಟುಂಬ ಸಮೇತ ಭಾಗವಹಿಸಿ, ಪೂಜೆ ನೆರವೇರಿಸಿದ್ದಾರೆ. ಈಶ್ವರಪ್ಪ ದಂಪತಿ ಸಮೇತ ಪೂರ್ಣಾಹುತಿ ನೆರವೇರಿಸಿ,  ಕೊರೊನಾ ಇಳಿಕೆಗೆ ಭಗವಂತನಿಗೆ ನಮಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 89 ಮಂದಿ ಪೊಲೀಸರಿಗೆ ಕೊರೊನಾ ಸೋಂಕು

Saturday, May 15th, 2021
corona Virus

ಮಂಗಳೂರು  : ಕೊರೊನಾ ವಾರಿಯರ್ ಆಗಿ ದ.ಕ ಜಿಲ್ಲೆಯಲ್ಲಿ ಕೆಲಸಮಾಡುತ್ತಿರುವ 89 ಮಂದಿ ಪೊಲೀಸರಿಗೆ ಕೊರೊನಾ ಸೋಂಕು ತಗುಲಿದ್ದು , 51 ವರ್ಷದ ಓರ್ವ ಸಿಬ್ಬಂದಿ ಮೃತಪಟ್ಟಿದ್ದಾರೆ. ಈ ಬಾರಿ ಪೊಲೀಸರ ಕುಟುಂಬ ಸದಸ್ಯರ ಹಲವು ಮಂದಿಗೆ ಸೋಂಕು ತಗುಲಿದ್ದು ಅವರ ಸುರಕ್ಷತೆಗೂ ಹೆಚ್ಚಿನ ಗಮನ ನೀಡಲಾಗುತ್ತಿದೆ. ಇದೇ ಕಾರಣಕ್ಕಾಗಿ ಪೊಲೀಸ್ ಕೊವೀಡ್ ಕೇರ್ ಸೆಂಟರ್ ಆರಂಭಿಸಲಾಗಿದೆ. ಕಮಿಷನರೆಟ್ ವ್ಯಾಪ್ತಿಯಲ್ಲಿ 1700 ಪೊಲೀಸರಿಗೆ 2 ನೇ ಡೋಸ್ ಕೂಡಾ ಶೇ. 95 ರಷ್ಟೂ ಪೂರ್ಣಗೊಂಡಿದೆ. ಹೆಚ್ಚಿನ ಪೊಲೀಸರಿಗೆ […]

ಮಂಗಳೂರಿನಲ್ಲಿ 29 ಗರ್ಭಿಣಿಯರಲ್ಲಿ ಮತ್ತು ಎರಡು ನವಜಾತ ಶಿಶುಗಳಲ್ಲಿ ಕೊರೊನಾ ಸೋಂಕು

Thursday, May 13th, 2021
corona

ಮಂಗಳೂರು :  ಮಂಗಳೂರಿನ ಸರ್ಕಾರಿ ಲೇಡಿ ಗೋಶನ್ ಆಸ್ಪತ್ರೆಯಲ್ಲಿ ಕಳೆದ ಒಂದು ವಾರದಲ್ಲಿ ಕೊರೊನಾ ಸೋಂಕು  25 ಗರ್ಭಿಣಿಯರಲ್ಲಿ ಮತ್ತು ಹೊಸ ತಾಯಂದಿರಲ್ಲಿ ಕಾಣಿಸಿಕೊಂಡಿದ್ದು ಅವರಿಗಾಗಿ ಹೆಚ್ಚುವರಿ 14 ಹಾಸಿಗೆಗಳ ವಾರ್ಡ್ ನ್ನು ಮೀಸಲಿರಿಸಲಾಗಿದೆ. ಈ ರೋಗಿಗಳ ಆರೋಗ್ಯದ ಮೇಲ್ವಿಚಾರಣೆಗಾಗಿ ವಾಟ್ಸಾಪ್ ಗ್ರೂಪ್ ರಚಿಸಲಾಗಿದ್ದು ತಾಲೂಕು ಮತ್ತು ಜಿಲ್ಲಾ ಆರೋಗ್ಯ ಅಧಿಕಾರಿಗಳು ಕಿರಿಯ ಆರೋಗ್ಯ ಸಹಾಯಕರ ಮೂಲಕ ಈ ರೋಗಿಗಳನ್ನು ಪರಿಶೀಲಿಸಲಾಗುತ್ತದೆ . ಎರಡು ನವಜಾತ ಶಿಶುಗಳಿಗೆ ಸೋಂಕು ದೃಢಪಟ್ಟಿದೆ ಎಂದು ಲೇಡಿ ಗೊಸ್ಚೆನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದುರ್ಗಾ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 664 ಮಂದಿಗೆ ಕೊರೊನಾ ಸೋಂಕು, ನಾಲ್ವರ ಸಾವು

Wednesday, April 28th, 2021
Corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 664 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹಾಗೆಯೇ 256 ಮಂದಿ ಸೋಂಕಿತರು ಬುಧವಾರ ಗುಣಮುಖರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ವರದಿಯಾದ 664 ಕೊರೊನಾ ವೈರಸ್‌ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ 42,729 ಕ್ಕೆ ಏರಿಕೆಯಾಗಿದೆ. ಈ ಪೈಕಿ 4694 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. ಒಟ್ಟು 7,29,742 ಮಾದರಿಗಳನ್ನು ಪರೀಕ್ಷಿಸಲಾಗಿದ್ದು ಅದರಲ್ಲಿ 687013 ಮಾದರಿಗಳು ನೆಗೆಟಿವ್‌‌ ಆಗಿದೆ. ಬುಧವಾರ 256 ಜನರು ಗುಣಮುಖರಾಗಿದ್ದು […]

ಕೊರೊನಾ ಸೋಂಕಿನಿಂದ ಇಂಡಿಯಾ ಆಸ್ಪತ್ರೆಯಲ್ಲಿ ಮೃತರಾದ ವೈದ್ಯೆ 8 ತಿಂಗಳ ಹಿಂದೆಯಷ್ಟೇ ಮದುವೆಯಾದ್ದರು

Wednesday, April 28th, 2021
Indiana

ಮಂಗಳೂರು: ಕೇರಳ ಮೂಲದ ಯುವ ವೈದ್ಯೆ ಕೊರೊನಾ ಸೋಂಕಿನಿಂದ ಇಂಡಿಯಾನ ಆಸ್ಪತ್ರೆ ಯಲ್ಲಿ ಮೃತಪಟ್ಟಿದ್ದಾರೆ. ನಗರದ ಪಂಪ್ ವೆಲ್ ಬಳಿಯ ಇಂಡಿಯಾನ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮಹಿಳೆಗೆ ಇತ್ತೀಚೆಗೆ ಕೊರೊನಾ ಸೋಂಕು ತಗುಲಿತ್ತು‌. ಈ ಹಿನ್ನೆಲೆಯಲ್ಲಿ  ಆಕೆಯನ್ನು ಅದೇ ಆಸ್ಪತ್ರೆಯಲ್ಲಿ  ದಾಖಲಿಸಲಾಗಿತ್ತು. ಆದರೆ ಅವರು ಉಸಿರಾಟದ ಸಮಸ್ಯೆಯಿಂದ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಬೆಳಗ್ಗೆ ಮೃತಪಟ್ಟಿದ್ದಾರೆ. ದೇರಳಕಟ್ಟೆಯಲ್ಲಿರುವ ಕಣಚೂರು ಆಸ್ಪತ್ರೆಯಲ್ಲಿಯೂ ಆಕೆ ವೈದ್ಯೆಯಾಗಿ ಸೇವೆ ಸಲ್ಲಿಸಿದ್ದರು. ವೈದ್ಯೆಗೆ ವಿವಾಹವಾಗಿ ಕೇವಲ 8 ತಿಂಗಳಾಗಿದ್ದು, ಪತಿ-ಪತ್ನಿ ಇಬ್ಬರೂ ಇಂಡಿಯಾನ ಆಸ್ಪತ್ರೆಯಲ್ಲಿಯೇ ಕರ್ತವ್ಯ ನಿರ್ವಹಿಸುತ್ತಿದ್ದರು‌. […]

ಶ್ರೀನಿವಾಸ ಫಾರ್ಮಸಿ ಕಾಲೇಜ್​ ನ ನಾಲ್ವರು ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು

Tuesday, January 26th, 2021
corona-positivedk

ಮಂಗಳೂರು : ವಲಚ್ಚಿಲ್ ಶ್ರೀನಿವಾಸ ಫಾರ್ಮಸಿ ಕಾಲೇಜ್ ನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವ ನಾಲ್ವರು ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು ದೃಢವಾಗಿರುವ ಕಾರಣ ಪ್ರಾಂಶುಪಾಲರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿದೆ. ನಾಲ್ವರೂ ಕೇರಳದ ವಿದ್ಯಾರ್ಥಿಗಳಾಗಿದ್ದು ಇವರು ತಮ್ಮ ರಾಜ್ಯದಿಂದ ನಗರದ ಕಾಲೇಜಿಗೆ ಬರುವಾಗ ತಪಾಸಣೆ ನಡೆಸಿ ನೆಗೆಟಿವ್ ವರದಿ ಇಲ್ಲದೆ ಬಂದಿದ್ದರು. ಇದೀಗ ಅವರನ್ನು ತಪಾಸಣೆ ನಡೆಸಿದಾಗ ನಾಲ್ವರಲ್ಲಿಯೂ ಸೋಂಕು ದೃಢಪಟ್ಟಿದೆ. ಇಬ್ಬರು ಸೋಂಕಿತರು ಹಾಸ್ಟೆಲ್‌ನಲ್ಲಿ ಐಸೋಲೇಷನ್ಗೆ ಒಳಗಾಗಿದ್ದಾರೆ. ಆದರೆ, ಕಾಸರಗೋಡು ಹಾಗೂ ಎರ್ನಾಕುಲಂನ ಇಬ್ಬರು ಸೋಂಕಿತರು ಕಾಲೇಜಿನಿಂದ ಪರಾರಿಯಾಗಿ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 220 ಮಂದಿಗೆ ಕೊರೊನಾ ಸೋಂಕು, 5 ಮಂದಿ ಬಲಿ

Saturday, October 17th, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ 220 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಶುಕ್ರವಾರ 391 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಶುಕ್ರವಾರದ ರಾಜ್ಯ ಆರೋಗ್ಯ ಬಲಿಟಿನ್ ಮಾಹಿತಿ ಪ್ರಕಾರ 5 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಈವರೆಗೆ ಕೊರೊನಾ ಸೋಂಕಿಗೆ ಒಟ್ಟು  624 ಸಾವು ಸಂಭವಿಸಿದೆ. ಶುಕ್ರವಾರದ 391 ಮಂದಿ ಒಳಗೊಂಡು ಈವರೆಗೆ ಒಟ್ಟು ಗುಣಮುಖರಾದವರು 23804 ಮಂದಿ. ದ.ಕ ಜಿಲ್ಲೆಯಲ್ಲಿ ಈವರೆಗೆ  ಸಕ್ರಿಯ ಪ್ರಕರಣಗಳ ಸಂಖ್ಯೆ  3531, ಒಟ್ಟು ಕೊರೊನಾ ನೆಗೆಟಿವ್ ಪ್ರಕರಣಗಳು 189046,  ಪಾಸಿಟಿವ್ ಪ್ರಕರಣಗಳು 27959, ಈವರೆಗೆ 217005 ಮಂದಿಯ ಕೊರೊನಾ ಪರೀಕ್ಷೆ ಮಾಡಲಾಗಿದೆ.

ಕೊರೊನಾ ಸೋಂಕು : ದಕ್ಷಿಣ ಕನ್ನಡ ಜಿಲ್ಲೆ – 258, ಸಾವು 9, ಉಡುಪಿ ಜಿಲ್ಲೆ – 158, ಸಾವು 3, ಕಾಸರಗೋಡು -257

Sunday, October 4th, 2020
Corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 258 ಮಂದಿಗೆ ಕೊರೊನಾ ದೃಢಪಟ್ಟಿದ್ದು 9 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 566 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 24,019 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು 344 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಈವರೆಗೆ 17,709 ಮಂದಿ ಗುಣಮುಖರಾದಂತಾಗಿದೆ. ಜಿಲ್ಲೆಯಲ್ಲಿ 5,744 ಮಂದಿ ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 4,361 ಮಾಸ್ಕ್ ಉಲ್ಲಂಘನೆ ಪ್ರಕರಣ ವರದಿಯಾಗಿದ್ದು, 5,30,885 ದಂಡ ವಸೂಲಿ […]