ಕೊರೋನ ಭೀತಿಯಿಂದ ಮೈಮೇಲೆ ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆ

Friday, January 21st, 2022
flame

ಕಾರ್ಕಳ :  ಕೊರೋನ ಭೀತಿಯಿಂದ ಮೈಮೇಲೆ ಬೆಂಕಿ ಹಚ್ಚಿಕೊಂಡು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರ್ಗಾನ ಗ್ರಾಮದ ಹೊಸ್ಮಾರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಹೊಸ್ಮಾರು ನಿವಾಸಿ ಲಕ್ಷ್ಮೀ(65) ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರು, ಕೊರೋನ ಪಾಸಿಟಿವ್ ಅಲ್ಲದಿದ್ದರೂ ಕೊರೋನ ಭೀತಿಯಲ್ಲಿ ಪತ್ರ ಬರೆದಿಟ್ಟು, ಮನೆಯ ಹಿಂಬದಿಯಲ್ಲಿ ಮೈಮೇಲೆ ಡಿಸೇಲ್ ಸುರಿದು ಬೆಂಕಿಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಭಜನೆಯಿಲ್ಲದ ಭಜನೆಯ ಕಂಠಗಳು ಎಲ್ಲೆಡೆ ಮೊಳಗಲಿ : ಶ್ರೀ ಮೋಹನದಾಸ ಪರಮಸಿಂಹ ಸ್ವಾಮೀಜಿ

Sunday, November 7th, 2021
Bhajane

ಮಂಗಳೂರು : ಭಜನೆ ಎಂದರೆ ಕೇವಲ ಹಾಡುವುದೆಂದಷ್ಟೇ ಅರ್ಥವಲ್ಲ. ಭಕ್ತಿ, ಜಪ, ನೆನವರಿಕೆ ಮಾಡುತ್ತಾ ಭಗವಂತನಿಗೆ ಹತ್ತಿರವಾಗುವುದು. ಆಧ್ಯಾತ್ಮಕ ಪ್ರಭಾವಲಯವನ್ನು ವೃದ್ಧಿಸಿಕೊಳ್ಳುವುದೇ ಆಗಿದೆ. ಇಂದು ಕೊರೋನದಂತಹ ಕಷ್ಟ ಕಾಲದಲ್ಲಿ ನಮ್ಮ ಪೀಳಿಗೆ ಸನಾತನೀಯವಾದ ಧರ್ಮದ ಸಾರವನ್ನು ಮರೆತಿವೆ. ಅವರನ್ನು ಪುನಃ ಧಾರ್ಮಿಕ ಹಳಿಗೆ ತಂದು ಈ ರಾಷ್ಟ್ರವನ್ನು ಪ್ರೀತಿಸುವ ಪ್ರಜೆಗಳನ್ನಾಗಿಸುವ ಕಾರ್ಯ ನಡೆಯಬೇಕಿದೆ. ಅಲ್ಲಲ್ಲಿ ಅಲ್ಲಲ್ಲಿ ಇಂತಹಾ ಜನಜಾಗೃತಿಯ ಕಾರ್ಯ ಆಗಬೇಕು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಇಂತಹ ಅನೇಕ ಕಾರ್ಯಕ್ರಮಗಳನ್ನು ನಡೆಸುತ್ತಾ ಬರುತ್ತಿದ್ದು, ಜನಮನವನ್ನು ತಲುಪಿದೆ. […]

ಮೂರನೇ ಅಲೆಯ ಜೊತೆಗೆ ಇನ್ನೆಷ್ಟು ಅಲೆಗಳು ಬಂದರೂ ಅದನ್ನು ಎದುರಿಸುವ ಶಕ್ತಿ ಮೋದಿ ಸರಕಾರಕ್ಕಿದೆ : ಶಾಸಕ ರಾಜೇಶ್ ನಾಯ್ಕ್

Tuesday, September 7th, 2021
Rajesh Naik

ಬಂಟ್ವಾಳ  : ಮೋದಿ ನೇತೃತ್ವದ ಕೇಂದ್ರ ಸರಕಾರ ಅಧಿಕಾರಲ್ಲಿರುವ ವರೆಗೆ ಕೊರೋನ ಮೂರನೇ ಅಲೆಯ ಜೊತೆಗೆ ಇನ್ನೆಷ್ಟು ಅಲೆಗಳು ಬಂದರೂ ಅದನ್ನು ಎದುರಿಸುವ ಶಕ್ತಿ ಭಾರತಕ್ಕೆ ಇದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದರು. ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರದಲ್ಲಿ ಮಂಗಳವಾರ ನಡೆದ ಅರೋಗ್ಯ ಸ್ವಯಂ ಸೇವಕರ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೋವಿಡ್ ನಿಂದ ಜಗತ್ತಿನ ಸೂಪರ್ ಪವರ್ ದೇಶಗಳು ತತ್ತರಿಸಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ […]

ಕೊರೋನ ನಿರ್ಬಂಧದ ನೆಪದಲ್ಲಿ ಖಾಸಗಿ ಬಸ್ ದರ ಹೆಚ್ಚಳ : ಡಿವೈಎಫ್ಐ ವಿರೋಧ

Monday, June 28th, 2021
Bus-service

ಮಂಗಳೂರು  : ಲಾಕ್ ಡೌನ್ ನಿಯಮಗಳು ಸಡಿಲಗೊಳ್ಳುತ್ತಿರುವ ಹಿನ್ನಲೆಯಲ್ಲಿ ಸಂಚಾರ ಆರಂಭಿಸಲಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಖಾಸಗಿ‌ ಬಸ್ಸುಗಳ ಮಾಲಕರ ಒಕ್ಕೂಟಗಳು ಕೊರೋನ ನಿರ್ಬಂಧಗಳ ಪಾಲನೆಯ ನೆಪದಲ್ಲಿ “ಸೆಸ್ ಹಾಕಲು ತಮಗೆ ಸರಕಾರ ಅವಕಾಶ ನೀಡಿದೆ” ಎಂದು ಶೇಕಡಾ ಇಪ್ಪತ್ತೈದರಷ್ಟು ಪ್ರಯಾಣ ದರ ಏಕಪಕ್ಷೀಯವಾಗಿ ಏರಿಸಲು ತೀರ್ಮಾನಿಸಿರುವುದನ್ನು ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ತೀವ್ರವಾಗಿ ವಿರೋಧಿಸಿದೆ. ಲಾಕ್ ಡೌನ್, ಕೊರೋನಾ ನಿರ್ಬಂಧಗಳನ್ನು ವಿಧಿಸಿರುವ ಸರಕಾರದೊಂದಿಗೆ ತೆರಿಗೆ ವಿನಾಯತಿ ಸಹಿತ ವಿವಿಧ ರಿಯಾಯತಿಗಳಿಗಾಗಿ ಒತ್ತಡ ಹಾಕುವ […]

ದಕ್ಷಿಣ ಕನ್ನಡದಲ್ಲಿ ಇಳಿಯದ ಕೋವಿಡ್ ಸೋಂಕಿನ ಪ್ರಮಾಣ, ಲಾಕ್‌ ಡೌನ್ ನಿಯಮ ಮತ್ತಷ್ಟು ಕಠಿಣ

Monday, June 7th, 2021
KV Rajendra

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಪ್ರಸ್ತುತ ಕೊರೋನ ಸೋಂಕಿನ ದರ ಶೇ. 20ರಿಂದ 21ರಷ್ಟಿದ್ದು ಸರಕಾರದ ಆದೇಶದಂತೆ ಜೂ. 14ರವರೆಗೂ ಪ್ರಸ್ತುತ ಜಾರಿಯಲ್ಲಿರುವ ಲಾಕ್‌ ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಕೊರೋನ ಸೋಂಕಿನ ದರ ಶೇ. 5ಕ್ಕೆ ಇಳಿಸಿ ಅನ್‌ ಲಾಕ್‌ ಗೊಳಿಸುವಲ್ಲಿ ಜನರ ಸಹಕಾರ ಅಗತ್ಯವಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಹೇಳಿದ್ದಾರೆ. ಜಿಲ್ಲೆಯಲ್ಲಿ 50ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳಿರುವ ಗ್ರಾಪಂಗಳಲ್ಲಿ ಪೂರ್ವ ನಿಗದಿತ ಮದುವೆ ಹಾಗೂ ಇತರ ಕಾರ್ಯಕ್ರಮಗಳನ್ನು ರದ್ದು […]

18 ಸಾವಿರ ಬಾಡಿಗೆ ಕೊಟ್ಟಿಲ್ಲಎಂದು ಪುಟ್ ಪಾತ್ ಮೇಲೆ ಕೊರೋನ ರೋಗಿಯ ಶವ ಬಿಟ್ಟು ಹೋದ ಆಂಬ್ಯುಲೆನ್ಸ್ ಚಾಲಕ

Friday, May 28th, 2021
ambulance

ಬೆಂಗಳೂರು:  ಕೊರೋನ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಶವವನ್ನು ಇಳಿಸಲು ಆಂಬ್ಯುಲೆನ್ಸ್ ಚಾಲಕ ಕುಟುಂಬದವರ ಬಳಿ 18 ಸಾವಿರ ರೂಪಾಯಿ ಹಣ ಕೇಳಿ, ಹಣ ಕೊಟ್ಟಿಲ್ಲ ಎಂದು ಶವವನ್ನ ಪುಟ್ ಪಾತ್ ಮೇಲೆ ಇಳಿಸಿ ಹೋದ ಘಟನೆ ಹೆಬ್ಬಾಳ ದಲ್ಲಿ ನಡೆದಿದೆ. ಚಾಲಕನನ್ನು ಶರತ್ ಗೌಡ ಎಂದು ಗುರುತಿಸಲಾಗಿದೆ. ಹೆಬ್ಬಾಳ ಚಿತಾಗಾರಕ್ಕೆ ಸೋಂಕಿತ ಮೃತ ವ್ಯಕ್ತಿಯ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗುತ್ತಿತ್ತು. ಮೃತರ ಪತ್ನಿಯ ಬಳಿ ಚಾಲಕ ಶರತ್ ಗೌಡ 18 ಸಾವಿರ ರೂಪಾಯಿ ಕೊಡುವಂತೆ ಬೇಡಿಕೆ ಇಟ್ಟಿದ್ದ. ಆಗ ಮೊದಲಿಗೆ 3 ಸಾವಿರ ರೂಪಾಯಿ […]

ಸಂಘಟನೆ, ಪಕ್ಷ ಅಥವಾ ಇನ್ಯಾವುದೋ ಪಾಸ್ ಬಳಸಿ ಸುತ್ತಾಡಿದರೆ ವಾಹನ ಮುಟ್ಟುಗೋಲು

Sunday, May 9th, 2021
police Commissioner

ಮಂಗಳೂರು :  ಕೊರೋನ ಲಾಕ್ ಡೌನ್ ಸಂದರ್ಭ ಸಂಘಟನೆ, ಪಕ್ಷ ಅಥವಾ ಇನ್ಯಾವುದೋ ಪಾಸ್ ಬಳಸಿ ಸುತ್ತಾಡಿದರೆ ಅಂತಹವರ ವಾಹನಗಳನ್ನು ನಿರ್ದಾಕ್ಷಿಣ್ಯವಾಗಿ ಮುಟ್ಟುಗೋಲು ಹಾಕಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ರವಿವಾರ ಸಾಮಾಜಿ ಜಾಲತಾಣಗಳ ಲೈವ್ ನಲ್ಲಿ ಎಚ್ಚರಿಕೆ ನೀಡಿದ್ದಾರೆ. ನಾಗರಿಕರ ಹಿತದೃಷ್ಟಿಯಿಂದ ಕೋವಿಡ್, ವೀಕೆಂಡ್ ಕರ್ಫ್ಯೂವನ್ನು ಜಾರಿ ಮಾಡಲಾಗಿದೆ. ಮೆಡಿಕಲ್, ವೈದ್ಯಕೀಯ, ಪತ್ರಿಕೆ ಸಹಿತ ತುರ್ತು ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ವಿನಾಯಿತಿ ನೀಡಲಾಗಿದೆ. ಆದರೆ ಕೆಲವರು ನಿರ್ಗತಿಕರಿಗೆ ಊಟದ ವ್ಯವಸ್ಥೆ ನೀಡುತ್ತಿದ್ದೇವೆ ಎಂದು ಹೇಳಿಕೊಂಡು […]

ಕೊರೋನ ಹಿನ್ನೆಲೆಯಲ್ಲಿ ಸೋಮೇಶ್ವರದ ಶ್ರೀ ಸೋಮನಾಥ ದೇವಳದ ಬ್ರಹ್ಮಕಲಶೋತ್ಸವ ರದ್ದು

Tuesday, April 20th, 2021
Somanatha

ಮಂಗಳೂರು :  ಸೋಮೇಶ್ವರದ ಶ್ರೀ ಸೋಮನಾಥ ದೇವಳದ ಬ್ರಹ್ಮಕಲಶೋತ್ಸವ ಹಾಗೂ ವರ್ಷಾವಧಿ ಉತ್ಸವವನ್ನು ರದ್ದುಗೊಳಿಸಲಾಗಿದೆ ಎಂದು ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಎ.18ರಿಂದ ಆರಂಭಗೊಂಡು ಮೇ 1ರವರೆಗೆ ಕಾರ್ಯಕ್ರಮ ನಡೆಯಬೇಕಿತ್ತು. ಆದರೆ, ಕೊರೋನ ಹಿನ್ನೆಲೆಯಲ್ಲಿ ತಾಲೂಕು ದಂಡಾಧಿಕಾರಿಯ ಆದೇಶದಂತೆ ಧಾರ್ಮಿಕ ಕಾರ್ಯಕ್ರಮ ರದ್ದುಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಕೊರೋನ 2ನೇ ಅಲೆ : ಮಂಗಳೂರಿನಲ್ಲಿ 144 (3) ಸೆಕ್ಷನ್ ಜಾರಿ

Tuesday, March 30th, 2021
KV Rajendra

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೋನ ಸೋಂಕಿತರ ಸಂಖ್ಯೆಯಿಂದ ಸಾರ್ವಜನಿಕ ಆರೋಗ್ಯ ಕಾಪಾಡುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 144 (3) ಸೆಕ್ಷನ್ ಜಾರಿ ಮಾಡಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಆದೇಶ ಹೊರಡಿಸಿದ್ದಾರೆ. ಮಾರ್ಚ್‌ 29ರಿಂದಲೇ  ದ.ಕ. ಜಿಲ್ಲೆಯಲ್ಲಿ 144(3) ಸೆಕ್ಷನ್‌ ನಿಷೇಧಾಜ್ಞೆ ಜಾರಿಯಲ್ಲಿದ್ದು, ಮುಂಬರುವ ಧಾರ್ಮಿಕ ಹಬ್ಬಗಳಾದ ಯುಗಾದಿ, ಹೋಳಿಹಬ್ಬ, ಶಬೇ ಬರಾಅತ್ , ಗುಡ್ ಫ್ರೈಡೇ ಇತ್ಯಾದಿ ಸಂದರ್ಭದಲ್ಲಿ ಯಾವುದೇ ಸಾರ್ವಜನಿಕ ಸ್ಥಳಗಳು, ಸಾರ್ವಜನಿಕ ಮೈದಾನ, ಉದ್ಯಾನವನ, ಮಾರುಕಟ್ಟೆ, ಧಾರ್ಮಿಕ ಪ್ರದೇಶಗಳು ಇತ್ಯಾದಿ […]

ಕೇರಳದಲ್ಲಿ ಕೊರೋನ ಉಲ್ಬಣ ಜಿಲ್ಲೆಗೆ ಆಗಮಿಸುವ ಜನರಿಗೆ ತಪಾಸಣೆಗೊಳಪಡಸಲು ಕ್ರಮ

Monday, February 8th, 2021
KV Rajendra

ಮಂಗಳೂರು : ಪಕ್ಕದ ರಾಜ್ಯ ಕೇರಳದಲ್ಲಿ ಕೊರೋನ ಉಲ್ಬಣ ವಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಗೆ ಆಗಮಿಸುವ ಅಲ್ಲಿನವರನ್ನು ಸೂಕ್ತ ತಪಾಸಣೆಗೊಳಪಡಿಸಿ ಜಿಲ್ಲೆಯಲ್ಲಿ ಕೊರೋನ ಹರಡದಂತೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಆಯುಷ್ ಕಚೇರಿಯಲ್ಲಿ ಇಂದು ಪೊಲೀಸ್ ಆಯುಕ್ತರು, ಡಿಎಚ್‌ಒ ಜತೆ ನಡೆಸಲಾದ ತುರ್ತು ಸಭೆಯ ಬಳಿಕ ಸುದ್ದಿಗಾರರ ಪ್ರಶ್ನೆಗೆ ಡಾ. ರಾಜೇಂದ್ರ ಈ ಪ್ರತಿಕ್ರಿಯೆ ನೀಡಿದರು. ಸಾವಿರಾರು ಸಂಖ್ಯೆಯಲ್ಲಿ ದಿನನಿತ್ಯ ಕೆಲಸ ಕಾರ್ಯ, ಕಾಲೇಜುಗಳಿಗಾಗಿ ಕೇರಳದಿಂದ ಕರ್ನಾಟಕಕ್ಕೆ ಬರುವುದರಿಂದ ಕೋವಿಡ್ ಅನ್‌ಲಾಕ್ ಮಾರ್ಗಸೂಚಿಗಳನ್ನು […]