ಜಮೀರ್​​ ಅಹ್ಮದ್​ಗೆ ಕೊಲೆ ಬೆದರಿಕೆ: ಜೆಡಿಎಸ್​ ಕಾರ್ಯಕರ್ತನ ವಿರುದ್ಧ ಎಫ್‌ಐಆರ್

Thursday, August 26th, 2021
Zamir Ahamed

ಬೆಂಗಳೂರು: ಕಾಂಗ್ರೆಸ್‌ ಶಾಸಕ, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ಜೆಡಿಎಸ್ ಕಾರ್ಯಕರ್ತನ ಮೇಲೆ ಎಫ್ಐಆರ್ ದಾಖಲಾಗಿದೆ. ಹೆಚ್ಡಿಕೆ ಗಜಪಡೆ ಎಂಬ ಫೇಸ್ಬುಕ್ ಅಕೌಂಟ್ನಲ್ಲಿ ಜೆಡಿಎಸ್ ಕಾರ್ಯಕರ್ತ ನರಸಿಂಹ ಮೂರ್ತಿ ಎಂಬಾತ ಜಮೀರ್ ಅವರಿಗೆ ಕೊಲೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಭದ್ರತೆ ಇದ್ದರೂ ಹಲ್ಲೆ ಮಾಡಿ ಹತ್ಯೆ ಮಾಡುತ್ತೇವೆ ಎಂದು ವಿಡಿಯೋ ಮುಖಾಂತರ ಬೆದರಿಕೆ ಹಾಕಿದ್ದರು. ಅಷ್ಟೇ ಅಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿ ವಿಡಿಯೋ ಮಾಡಿದ್ದಾರೆ ಎಂದು ದೂರಿನಲ್ಲಿ […]

ಶಾಸಕ ಯು.ಟಿ ಖಾದರ್‌ ಅವರ ಕಾರನ್ನು ಫಾಲೋ ಮಾಡಿಕೊಂಡು ಬಂದ ವ್ಯಕ್ತಿಯ ಬಂಧನ

Thursday, December 24th, 2020
utKhader

ಮಂಗಳೂರು : ಮಾಜಿ ಸಚಿವ ಯು.ಟಿ ಖಾದರ್‌ ಅವರ ಕಾರನ್ನು ಬುಧವಾರ ರಾತ್ರಿ  ಬೈಕ್‌ನಲ್ಲಿ ಫಾಲೋ ಮಾಡಿಕೊಂಡು ಬಂದ ವ್ಯಕ್ತಿಯೊಬ್ಬನನ್ನು ಮಂಗಳೂರು ಪೊಲೀಸರು ತಡರಾತ್ರಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಯುವಕನನ್ನು ಬೋಳೂರು ನಿವಾಸಿ ಅನೀಶ್ ಪೂಜಾರಿ ಎಂದು ಗುರುತಿಸಲಾಗಿದೆ. ಬುಧವಾರ ಮಂಗಳೂರಿನ ದೇರಳಕಟ್ಟೆಯಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಕ್ಕೆ ಭದ್ರತಾ ವಾಹನದ ಬೆಂಗಾವಲಿನಲ್ಲಿ ಪ್ರಯಾಣ ಮಾಡುತ್ತಿದ್ದ ಸಂದರ್ಭದಲ್ಲಿ ಹೆಲ್ಮೆಟ್ ಧರಿಸಿದ ಅಪರಿಚಿತ ವ್ಯಕ್ತಿಯೋರ್ವ ಸುಮಾರು 15 ಕಿ.ಮೀ ಖಾದರ್‌ ಅವರ ವಾಹನವನ್ನು ಫಾಲೋ ಮಾಡಿದ್ದ ಎನ್ನಲಾಗಿದ್ದು,  ಭದ್ರತಾ […]

ಕೊಲೆ ಬೆದರಿಕೆ ಹಾಕಿದವರಿಗೆ ಶಿಕ್ಷೆ ನೀಡುವ ಬದಲು ಜಿಲ್ಲಾಧಿಕಾರಿಗಳಿಗೆ ವರ್ಗಾವಣೆ ಶಿಕ್ಷೆ ಯಾಕೆ ? ಯು.ಟಿ. ಖಾದರ್ ಪ್ರಶ್ನೆ

Wednesday, July 29th, 2020
UTKhader

ಮಂಗಳೂರು : ಜಾನುವಾರುಗಳನ್ನು ಸಾಗಾಟ ಮಾಡುವ ವಾಹನ ಹಾಗೂ ಜನರ ಮೇಲೆ ಹಲ್ಲೆ ನಡೆಸಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳುತ್ತೇನೆ ಎಂದಿದ್ದಕ್ಕೆ  ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರ ವರ್ಗಾವಣೆ ಆಗಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಟ್ವಿಟರ್ ನಲ್ಲಿ ರಾಜ್ಯ ಸರಕಾರದ ವಿರುದ್ದ ಆರೋಪ ವೆತ್ತಿದ್ದಾರೆ. ದನ  ಸಾಗಾಟಗಾರರ ಮೇಲೆ ಕಾನೂನು ಕೈಗೆತ್ತಿಕೊಂಡರೆ, ನೈತಿಕ ಪೋಲಿಸ್ ಗಿರಿ ಮಾಡಿದ್ರೆ ಕ್ರಮ ಕೈಗೊಳ್ಳತ್ತೇನೆ ಎಂದಿದ್ದಕ್ಕೆ ದುಷ್ಕರ್ಮಿಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ರವರಿಗೆ ಕೊಲೆ ಬೆದರಿಕೆ ಹಾಕಿದರು. […]

ಬೆದರಿಕೆಯೊಡ್ಡಿ ದರೋಡೆ: 4 ಮಂದಿ ಆರೋಪಿಗಳ ಬಂಧನ

Saturday, October 1st, 2016
manjeshwara

ಮಂಜೇಶ್ವರ: ಕಡಂಬಾರ್‌ಗುತ್ತು ನಿವಾಸಿ, ಆರ್.ಎಸ್.ಎಸ್ ಮಂಜೇಶ್ವರ ತಾಲೂಕು ಸಂಘ ಚಾಲಕ್ ಕೆ. ರವೀಂದ್ರನಾಥ ಶೆಟ್ಟಿಯವರ ಮನೆಯಿಂದ ನಗದು ದರೋಡೆ ನಡೆಸಿದ ಪ್ರಕರಣದಲ್ಲಿ ನಾಲ್ಕು ಮಂದಿ ಆರೋಪಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠರ ನೇತೃತ್ವದಲ್ಲಿರುವ ಪ್ರತ್ಯೇಕ ಸ್ಕ್ವಾಡ್ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಕುಂಜತ್ತೂರು ತೂಮಿನಾಡು ಹಿಲ್‌ಟೋಪ್ ನಗರದ ಸಾಕಿರ್ ಮಂಜಿಲ್‌ನಿವಾಸಿ ಸಿದ್ದಿಕ್ ಎಂಬವರ ಪುತ್ರ ಅಬ್ದುಲ್ ರಹ್ಮಾನ್ ಮುಬಾರಕ್ 26), ಮಂಜೇಶ್ವರ ಉದ್ಯಾವರ ಫಸ್ಟ್ ಸಿಗ್ನಲ್ ಯು.ಎ. ಅಹಮ್ಮದ್ ಕಂಪೌಂಡ್‌ನ ಇಬ್ರಾಹಿಂ ಎಂಬವರ ಪುತ್ರ ಮೊಹಮ್ಮದ್ ಹನೀಫ ಯಾನೆ ಅಂಚು ಯಾನೆ […]