ಅಂಗವೈಕಲ್ಯವಿದೆ ಎಂದು ಜನಿಸಿರುವ ಮಗುವನ್ನು ಆಸ್ಪತ್ರೆಯ ನೀರಿನ ತೊಟ್ಟಿಗೆ ಹಾಕಿದ ದಂಪತಿ

Sunday, June 13th, 2021
infant

ಚಾಮರಾಜನಗರ : ಅಂದಾಜು 6 ದಿನದ ಗಂಡು ಶಿಶುವನ್ನು ಅಂಗವೈಕಲ್ಯ ಹೊತ್ತುಕೊಂಡು ಜನಿಸಿರುವ ಕಾರಣ ಹೆತ್ತವರು  ಮಗುವನ್ನು ಪ್ಲಾಸ್ಟಿಕ್ ಕವರ್ ನಲ್ಲಿ ಹಾಕಿ ಖಾಸಗಿ ಆಸ್ಪತ್ರೆಯ ಖಾಲಿ ನೀರಿನ ತೊಟ್ಟಿಯಲ್ಲಿ ಎಸೆದ ಘಟನೆ  ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಕಾಮಗೆರೆಯ ಹೋಲಿ ಕ್ರಾಸ್ ಆಸ್ಪತ್ರೆಯಲ್ಲಿ ನಡೆದಿದೆ. ಅಂದಾಜು 6 ದಿನದ ಗಂಡು ಶಿಶು ಇದಾಗಿದ್ದು, ಕರುಳಬಳ್ಳಿ ಕತ್ತರಿಸದೇ ಹಾಗೆ ಬಿಟ್ಟಿದ್ದು ಕಂಡುಬಂದಿದೆ. ಆಸ್ಪತ್ರೆ ಶವಾಗಾರದ ಬಳಿ ಪ್ಲಾಸ್ಟಿಕ್ ಕವರಿನಲ್ಲಿ ಶಿಶು ಶವ ಪತ್ತೆಯಾಗಿದೆ. ಸಿಬ್ಬಂದಿ ಹೋದಾಗ ದುರ್ನಾತ […]

ಕಾಲೇಜಿಗೆ ಹೋಗು ಎಂದಿದ್ದಕ್ಕೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಯುವತಿ

Thursday, March 18th, 2021
Divya

ಚಾಮರಾಜನಗರ: ಲಾಕ್‍ಡೌನ್ ಬಳಿಕ ಮನೆಯಲ್ಲೇ ಇದ್ದ ಮಗಳನ್ನು ಕಾಲೇಜಿಗೆ ಹೋಗು ಎಂದು ಬಲವಂತ ಮಾಡಿದ್ದಕ್ಕೆ ಮನನೊಂದ ಯುವತಿ ಕ್ರಿಮಿನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ. ಕೊಳ್ಳೇಗಾಲದ ಮೇಗಲದೊಡ್ಡಿ ಗ್ರಾಮದ ಲೂರ್ಧಸ್ವಾಮಿ ಅವರ ಮಗಳು ದಿವ್ಯಾ(19) ಮೃತ ದುರ್ದೈವಿ. ಈಕೆ ಕಳೆದ ವರ್ಷ ಕೊರೊನಾ ಹಿನ್ನೆಲೆ ಲಾಕ್‍ಡೌನ್ ನಿಂದ ಕಾಲೇಜಿಗೆ ಹೋಗದೆ ಕೂಲಿ ಕೆಲಸ ಮಾಡಿಕೊಂಡಿದ್ದಳು. ಆದರೆ ಕಾಲೇಜು ಆರಂಭವಾದ ಬಳಿಕ ಓದಲು ಹೋಗು ಎಂದು ಪೋಷಕರು ಬಲವಂತ ಮಾಡಿ ಕಾಲೇಜಿಗೆ ಕಳುಹಿಸಿದ್ದರು. ಕಾಲೇಜಿಗೆ ಹೋಗಲು ಇಷ್ಟವಿಲ್ಲದ […]

ಮನೆಗೆ ತೆರಳಿ ಪೂಜೆ ಮಾಡಿದ ಅರ್ಚಕನಿಗೆ ಬ್ಲಾಕ್‌ ಮೇಲ್‌ ಮಾಡಿ 20 ಲಕ್ಷ ರೂಪಾಯಿ ವಸೂಲಿ ಮಾಡಿದ ಐನಾತಿಗಳು

Thursday, November 14th, 2019
Purohith

ಮೈಸೂರು ; ಅರ್ಚಕ ವೃತ್ತಿ ನಡೆಸಿಕೊಂಡಿರುವ ವ್ಯಕ್ತಿಯೊಬ್ಬರಿಗೆ ಮೂವರು ಐನಾತಿಗಳು ಸೇರಿ ಬ್ಲಾಕ್‌ ಮೇಲ್‌ ಮಾಡಿ ಬರೋಬ್ಬರಿ 20 ಲಕ್ಷ ರೂಪಾಯಿ ವಸೂಲಿ ಮಾಡಿದ ಘಟನೆ ವರದಿ ಆಗಿದೆ. ಪೋಲೀಸರು ಆರೋಪಿಗಳ ಹೆಡೆಮುರಿ ಕಟ್ಟಿ 13.77 ಲಕ್ಷ ರೂಪಾಯಿಗಳನ್ನು ವಸೂಲಿ ಮಾಡಿದ್ದಾರೆ. ನಡೆದಿದ್ದೇನು ಗೊತ್ತಾ ? ಕೊಳ್ಳೇಗಾಲದಲ್ಲಿ ಆಂಜನೇಯ ಸ್ವಾಮಿ ದೇವಾಲಯದ ಪ್ರಧಾನ ಅರ್ಚಕರಾಗಿರುವ ರಾಘವನ್‌ ಭಕ್ತರ ಕೋರಿಕೆಯ ಮೇರೆಗೆ ವಿವಿಧ ಊರುಗಳಿಗೆ ತೆರಳಿ ಪೂಜಾ , ಹವನ ,ಹೋಮ ಕಾರ್ಯ ನಡೆಸಿಕೊಡುತಿದ್ದರು. ಅದರಂತೆ ಆರು ತಿಂಗಳ […]