ಕೋಟೆಕಾರಿನಿಂದ ಬಾಕ್ರಬೈಲುಗೆ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಲಾರಿ ವಶ

Wednesday, January 13th, 2021
cows

ಕೊಣಾಜೆ : ಕೋಟೆಕಾರಿನಿಂದ ಬಾಕ್ರಬೈಲುಗೆ ಜಾನುವಾರನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಮಂಗಳವಾರ ಸಂಜೆ  ಮುಡಿಪು ಸಮೀಪ‌ ನಡೆದಿದೆ. ಕೋಟೆಕಾರಿನಿಂದ ಬಾಕ್ರಬೈಲುಗೆ ಜಾನುವಾರನ್ನು ಲಾರಿಯಲ್ಲಿ ಕೊಂಡೊಯ್ಯುತ್ತಿದ್ದ ವೇಳೆ ಕೊಣಾಜೆ ಪೊಲೀಸರು ಆಗಮಿಸಿ ಲಾರಿ ವಶಪಡಿಸಿಕೊಂಡಿದ್ದಾರೆ‌. ಈ ಬಗ್ಗೆ ಕೊಣಾಜೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಶಾಖೆಯಲ್ಲಿ 3 ಮಂದಿ ಸಿಬ್ಬಂದಿ ಅನುಮಾನಾಸ್ಪದ ಮೃತ್ಯು

Tuesday, November 7th, 2017
death

ಮಂಗಳೂರು:ಮಂಗಳೂರಿನ ತಲಪಾಡಿಯ ಕೆ.ಸಿ ರೋಡ್ ಬಳಿಯ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 3 ಮಂದಿ ಕಾವಲು ಸಿಬ್ಬಂದಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಮಂಗಳೂರು ಹೊರವಲಯದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಶಾಖೆಯಲ್ಲಿ ಈ ಘಟನೆ ನಡೆದಿದ್ದು. ಬ್ಯಾಂಕ್ ಸಿಬ್ಬಂದಿ ನವೆಂಬರ್ 7 ರ ಮಂಗಳವಾರ ಬೆಳಿಗ್ಗೆ ಎಂದಿನಂತೆ  ಕಚೇರಿಗೆ ಹೋದಾಗ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಉಮೇಶ್ , ಸಂತೋಷ್, ಸೋಮನಾಥ್ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಉಳ್ಳಾಲ ಠಾಣೆಯ ಪೊಲೀಸರು ಹಾಗೂ ಹಿರಿಯ ಪೊಲೀಸ್ […]