ಕೆಂದ್ರದ ನಾಯಕರು ಮಠಾಧೀಶರಿಗೆ ಅಗೌರವ ತೋರಿದ್ದಾರೆ, ಸಂಕ್ರಾಂತಿ ಒಳಗೆ ರಾಷ್ಟ್ರಮಟ್ಟದಲ್ಲಿ ದೊಡ್ಡ ಅವಘಡ ಆಗಲಿದೆ : ಕೋಡಿಮಠ

Friday, July 30th, 2021
Kodimatha-Swamiji

ಕೋಲಾರ: ನೂತನ‌ ಮುಖ್ಯಮಂತ್ರಿ ಕುರಿತು ಏನನ್ನೂ ಈಗಲೇ ಹೇಳುವುದಿಲ್ಲ. ಕಾರ್ತಿಕ ಮಾಸ ಕಳೆದ ನಂತರ ಹೇಳುತ್ತೇನೆ. ಆಶ್ವೀಜ ಮಾಸ ನಂತರ ಸಂಕ್ರಾಂತಿ ಒಳಗೆ ರಾಷ್ಟ್ರಮಟ್ಟದಲ್ಲಿ ದೊಡ್ಡ ಅವಘಡ ಆಗಲಿದೆ ಎಂದು ಅರಸೀಕೆರೆ ಹಾರನಹಳ್ಳಿ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ಅಶುಭ ನುಡಿಗಳು ಈಗ ಬೇಡ. ಕೆರೆ ಕಟ್ಟೆಗಳು ತುಂಬಿ ಜಲಗಂಡಾಂತರ ಇನ್ನೂ ಇದೆ ಎಂದಿದ್ದಾರೆ. ನಾವು‌ ಯಡಿಯೂರಪ್ಪ ‌ಅವರನ್ನು ಉಳಿಸಿ ಅಂತ ಹೇಳಲಿಲ್ಲ. ಬದಲಾಗಿ ಸ್ವಾಮೀಜಿಗಳು ಬೀದಿಗೆ ಬಂದಾಗ, ಕೆಂದ್ರದ […]

ಈಗ ಹೂಳುತ್ತಿರುವ ಹೆಣಗಳು ಆಗ ಮಾತನಾಡುತ್ತವೆ : ಕೋಡಿಮಠದ ಶ್ರೀ

Monday, May 31st, 2021
kodi math seer

ಹಾಸನ: ಮನುಷ್ಯ ಹೋಗು ಹೋಗುತ್ತಲೇ ಬಿದ್ದು ಸಾಯುವ ಕಾಲ ಬಂದೇ ಬರುತ್ತದೆ ಎಂದು ಅರಸೀಕೆರೆ ತಾಲೂಕು ಹಾರನಹಳ್ಳಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಹಿಂದೆ ನೆಲಪಟ್ಟು ಎಂಬ ಕಾಯಿಲೆ ಇತ್ತು. ಅದಕ್ಕೆ ರಾಹು ಅಂತ ಹಿರಿಯರು ಕರೆಯುತ್ತಿದ್ದರು. ರಾಹು ಬಡೀತು, ಹೋಗ ಹೋಗ್ತಾ ಬಿದ್ದ ಅನ್ನೋರು. ಅಂತಹ ಕಾಯಿಲೆಗಳು ಮುಂದಿನ ದಿನಗಳಲ್ಲಿ ಬಂದೇ ಬರುತ್ತವೆ ಎಂದು ಭಾನುವಾರ ಹೇಳಿದರು. ಕರೊನಾ ಸಂಪೂರ್ಣ ಮಾಯವಾಗಲು ಇನ್ನೂ 10 ವರ್ಷ ಬೇಕಾಗುತ್ತದೆ. ಜೂನ್ 20ರ […]