ಎಜೆ ಆಸ್ಪತ್ರೆಯಲ್ಲಿ ದಾಖಲಾಗಿದ್ದ 20 ವರ್ಷದ ಯುವತಿಯ ಅಂಗಾಂಗ ದಾನ

Tuesday, September 14th, 2021
Kavana

ಮಂಗಳೂರು  : ಎಜೆ ಆಸ್ಪತ್ರೆಯಲ್ಲಿ ದಾಖಲಾಗಿದ್ದ 20 ವರ್ಷದ ಯುವತಿಯೊಬ್ಬಳು ಹಲವರ ಬದುಕಿಗೆ ಬೆಳಕಾಗುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾಳೆ . ಆಕೆಯ ಹೆಸರು ರಟ್ಟಿಹಳ್ಳಿ ತಾಲೂಕಿನ ಹಳ್ಳೂರು ಗ್ರಾಮದ ಶಿಕಾರಿಪುರದ ಗಾರ್ಮೆಂಟ್ಸ್ ನಲ್ಲಿ  ಕೆಲಸ ಮಾಡುತ್ತಿದ್ದ ಕವನ ಮಳ್ಳಯ್ಯ ಹಿರೇಮಠ. ಸೆ.9ರಂದು ಹೊನ್ನಾಳಿ ತಾಲೂಕು ಸೊರಟೂರು ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಕವನ ಗಂಭೀರ ಗಾಯಗೊಂಡಿದ್ದರು. ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಕವನರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಕೋಮಾಗೆ ತಲುಪಿದ್ದರು. ಅವರು ಮಿದುಳು ನಿಷ್ಕ್ರಿಯಗೊಂಡಿತ್ತು. ಮಗಳಂತೂ […]

ಸಂಚಾರಿ ವಿಜಯ್‌ಗೆ ಕೋಮಾದಲ್ಲಿ, ಚಿಕಿತ್ಸೆ ಮುಂದುವರೆದಿದೆ ಎಂದ ಅಪೋಲೋ ಆಸ್ಪತ್ರೆ ವೈದ್ಯರು

Monday, June 14th, 2021
Sanchari Vijay

ಬೆಂಗಳೂರು : ಬೈಕ್ ಅಪಘಾತಕ್ಕೀಡಾಗಿ ನಟ ಸಂಚಾರಿ ವಿಜಯ್ ಕೋಮಾದಲ್ಲಿ ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಯ  ಐಸಿಯು ನಲ್ಲಿ ಚಿಕಿತ್ಸೆ ಮುಂದುವರಿದಿದೆ. ಮೂಲತಃ ರಂಗಭೂಮಿ ಕಲಾವಿದರಾಗಿರುವ ಸಂಚಾರಿ ವಿಜಯ್, ‘ನಾನು ಅವನಲ್ಲ, ಅವಳಲ್ಲ’ ಸಿನಿಮಾ ನಟನೆಗೆ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದರು. ಸಿನಿಮಾ ಜೊತೆಯಲ್ಲಿ `ಉಸಿರು’ ಹೆಸರಿನ ತಂಡವನ್ನು ಕಟ್ಟಿಕೊಂಡು ಲಾಕ್‍ಡೌನ್ ನಲ್ಲಿ ಸಂಕಷ್ಟ ಸಿಲುಕಿದವರಿಗೆ ಸಹಾಯ ಮಾಡುತ್ತಿದ್ದರು. ಬೈಕ್ ಅಪಘಾತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ನಟನನ್ನು ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಗೆ ಶನಿವಾರ ರಾತ್ರಿ  ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಮೆದುಳಿಗೆ ಗಂಭೀರ […]