ಬ್ಯಾರಿ ಪರಿಷತ್, ಮಂಗಳೂರು ಅಧ್ಯಕ್ಷ ಕೋವಿಡ್ ಸೋಂಕಿಗೆ ಬಲಿ

Friday, May 7th, 2021
Aboobakkar

ಮಂಗಳೂರು : ಅಖಿಲ ಭಾರತ ಬ್ಯಾರಿ ಪರಿಷತ್, ಮಂಗಳೂರು ಇದರ ಅಧ್ಯಕ್ಷ ಅಬೂಬಕರ್ ಪಲ್ಲಮಜಲು(48) ಕೋವಿಡ್-19 ಸೋಂಕಿನ ಚಿಕಿತ್ಸೆ ಫಲಿಸದೆ  ಶುಕ್ರವಾರ ಬೆಳಗ್ಗೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಅವರು ಕಳೆದ ಐದು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು  ಶುಕ್ರವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಅವರು ಕೊನೆಯುಸಿರೆಳೆದರೆಂದು ಕುಟುಂಬದ ಮೂಲಗಳು ತಿಳಿಸಿವೆ. ಇವರು ಹಲವು ಸಾಮಾಜಿಕ ಸಂಘ-ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದರು ಅಲ್ಲದೆ ಪಲ್ಲಮಲಜು ಹಯಾತುಲ್ ಇಸ್ಲಾಂ ಜುಮಾ ಮಸೀದಿಯ ಮಾಜಿ ಅಧ್ಯಕ್ಷರಾಗಿದ್ದರು. ಮೃತರು ಪತ್ನಿ, ಮೂವರು ಪುತ್ರಿಯರು […]

ಕೊರೋನ ಪಾಸಿಟಿವ್ ಜುಲೈ 29 : ದಕ್ಷಿಣ ಕನ್ನಡ 208 , ಉಡುಪಿ 173

Wednesday, July 29th, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 29 ರಂದು ಬುಧವಾರ 208 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದೆ. ಜಿಲ್ಲೆಯಲ್ಲಿ ಮತ್ತೆ ಏಳು ಮಂದಿ ಸೋಂಕಿತರು ಸಾವಿಗೀಡಾಗುವುದರೊಂದಿಗೆ ಒಟ್ಟು ಸಾವಿನ ಸಂಖ್ಯೆ 142ಕ್ಕೆ ಏರಿದೆ. ಹೊಸದಾಗಿ ಪತ್ತೆಯಾದ 208 ಪಾಸಿಟಿವ್ ಪ್ರಕರಣಗಳಲ್ಲಿ ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ 65 ಮಂದಿಗೆ ಕೊರೋನ ತಗುಲಿದ್ದರೆ, ತೀವ್ರ ಉಸಿರಾಟ ಸಮಸ್ಯೆ ಮತ್ತು ಶೀತ ಲಕ್ಷಣದ 85 ಪ್ರಕರಣಗಳಿವೆ. ಬರೋಬ್ಬರಿ 58 ಪ್ರಕರಣಗಳಲ್ಲಿ ಸೋಂಕು ಎಲ್ಲಿಂದ ಹರಡಿದೆ ಎನ್ನುವ ಮಾಹಿತಿಯೇ ಇಲ್ಲ. ಈ ಎಲ್ಲರನ್ನು […]

ಉಡುಪಿ ಜಿಲ್ಲೆಯಲ್ಲಿ15 ವರ್ಷದ ಬಾಲಕ ಸೇರಿ ಆರು ಮಂದಿಯಲ್ಲಿ ಕೊರೋನಾ ಸೋಂಕು

Wednesday, May 20th, 2020
tma-pai hospital

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಆರು ಮಂದಿಯಲ್ಲಿ ಕೋವಿಡ್`-19 ಸೋಂಕು ಕಾಣಿಸಿಕೊಂಡಿದೆ. ಇದಿರಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 21 ಕ್ಕೆ ಏರಿಕೆಯಾಗಿದೆ. 74 ವರ್ಷದ ಪುರುಷ, 55 ವರ್ಷದ ಪುರುಷ , 47 ವರ್ಷದ ಮಹಿಳೆ, 31 ವರ್ಷದ ಮಹಿಳೆ, 44 ವರ್ಷದ ಮಹಿಳೆ ಹಾಗೂ 15 ವರ್ಷದ ಹುಡುಗನಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡಿರುವುದು ದೃಢವಾಗಿದೆ. ಇವರೆಲ್ಲರಿಗೂ ಉಡುಪಿಯ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇವರೆಲ್ಲಾ ಮಹಾರಾಷ್ಟ್ರ ದಿಂದ ಉಡುಪಿ ಜಿಲ್ಲೆಗೆ ಆಗಮಿಸಿ ಕ್ವಾರಂಟ್ಯೆನ್ ನಲ್ಲಿದ್ದರು.