ಪುಣಚಾ ಪಾಲಾಸತ್ತಡ್ಕ ದಲ್ಲಿ ಟಿಪ್ಪರ್ ಲಾರಿ ಪಲ್ಟಿ ಹೊಡೆದು ಚಾಲಕ ದಾರುಣ ಸಾವು

Wednesday, November 4th, 2020
Tipper

ವಿಟ್ಲ: ಪುಣಚಾ ಗ್ರಾಮದ ಪಾಲಾಸತ್ತಡ್ಕ ಎಂಬಲ್ಲಿ ಜಲ್ಲಿ ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಪಲ್ಟಿ ಹೊಡೆದು ಚಾಲಕ ದಾರುಣವಾಗಿ ಸಾವನ್ನಪ್ಪಿ,  ಕ್ಲೀನರ್ ಗೆ  ಗಾಯಗಳಾಗಿದೆ. ಪುಣಚಾ-ಪುತ್ತೂರು ರಸ್ತೆಯ ಪಾಲಾಸತ್ತಡ್ಕ ದಲ್ಲಿ ಬ್ರೇಕ್ ವೈಫಲ್ಲಕ್ಕೀಡಾದ ಟಿಪ್ಪರ್ ಲಾರಿ ರಸ್ತೆ ಬದಿ ಡಿಕ್ಕಿಹೊಡೆದು ಪಲ್ಟಿಯಾಗಿದೆ. ಅಪಘಾತದ ಸಂದರ್ಭ ಚಾಲಕ ರಫೀಕ್ ಟಿಪ್ಪರ್ ಲಾರಿಯಡಿಯಲ್ಲಿ ಸಿಲುಕಿ ಗಂಟೆಗಳ ಕಾಲ ಒದ್ದಾಡುತ್ತಿದ್ದರೂ ಟಿಪ್ಪರ್ ಮೇಲಕ್ಕೆತ್ತಲು ಸಾಧ್ಯವಾಗಲಿಲ್ಲ. ಬಳಿಕ ಕ್ರೇನ್ ಮೂಲಕ ಲಾರಿಯನ್ನು ಮೇಲಕ್ಕೆತ್ತಿ ದರೂ ಅಷ್ಟರಲ್ಲಾಗಲೇ ಚಾಲಕ ರಫೀಕ್ ಪ್ರಾಣ ಬಿಟ್ಟಿದ್ದಾರೆ. ಕ್ಲೀನರ್ ಗೆ ಸಣ್ಣ […]

ಮಾಣಿ : ರಸ್ತೆಯ ಹೊಂಡಕ್ಕೆ ಖಾಸಗಿ ಬಸ್; ಸಂಚಾರಕ್ಕೆ ಅಡಚಣೆ

Saturday, September 14th, 2019
maani

ವಿಟ್ಲ : ಬೆಂಗಳೂರು ಕಡೆಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಖಾಸಗಿ ಬಸ್ ರಸ್ತೆ ಹೊಂಡಕ್ಕೆ ಸಿಕ್ಕಿಹಾಕಿಕೊಂಡ ಪರಿಣಾಮ ವಾಹನ ಸಂಚಾರಕ್ಕೆ ಅಡ್ಡಿಯುಂಟಾದ ಘಟನೆ ಮಾಣಿ ಸಮೀಪದ ಬೊಳ್ಳುಕಲ್ಲು ಎಂಬಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ. ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಹೊಂಡಗಳು ನಿರ್ಮಾಣಗೊಂಡಿದ್ದು, ಬೆಳಗ್ಗೆ ಹೊಂಡದಲ್ಲಿ ಬಸ್ ಸಿಲುಕಿದೆ. ಇದರಿಂದ ಘನ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿ 2 ತಾಸುಗಳ ವರೆಗೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಮಂಗಳೂರು ಸುತ್ತಮುತ್ತಲಿನ ಪ್ರಯಾಣಿಕರು ರಸ್ತೆಯಲ್ಲಿ ಕಾಲಕಳೆಯುವಂತಾಯಿತು. ಬಳಿಕ ಉಪ್ಪಿನಂಗಡಿಯಿಂದ ಕ್ರೇನ್ ತರಿಸಿ ಬಸ್ಸನ್ನು […]