ಗಾಂಧಿಯನ್ನೇ ಹತ್ಯೆ ಮಾಡಿದ್ದೇವೆ ಎಂಬ ಶಬ್ದ ಬಳಕೆ ಮಾಡಿದ್ದಕ್ಕೆ ನಾನು ಕ್ಷಮೆ ಕೇಳುತ್ತೇನೆ : ಧರ್ಮೇಂದ್ರ

Sunday, September 19th, 2021
Dharmendra

ಮಂಗಳೂರು : “ನಾವು ಗಾಂಧಿಯನ್ನೇ ಬಿಟ್ಟಿಲ್ಲ ಗಾಂಧಿಯನ್ನೇ ಹತ್ಯೆ ಮಾಡಿದ್ದೇವೆ. ಹಿಂದೂಗಳ ಮೇಲೆ ದಾಳಿ ಆದಾಗ ಗಾಂಧಿಯನ್ನೇ ಬಿಟ್ಟಿಲ್ಲ. ಇನ್ನು ನಿಮ್ಮನ್ನು ಬಿಡುತ್ತೇವಾ?. ಬಿಜೆಪಿ ಒಂದು ಬೆನ್ನುಮೂಳೆ ಇಲ್ಲದ ಸರ್ಕಾರ. ಇವರಿಗಿಂತ ತಾಲಿಬಾನ್‌‌ಗಳು ವಾಸಿ. ಇವರ ಸರ್ಕಾರ ತಾಲಿಬಾನ್‌‌ಗಳಿಗಿಂತ ಕೀಳು” ಎಂದಿದ್ದ  ಅಖಿಲ ಭಾರತೀಯ ಹಿಂದೂ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ  ಕ್ಷಮೆಯಾಚಿಸಿದ್ದಾರೆ. “ಸುದ್ದಿಗೋಷ್ಠಿಯಲ್ಲಿ ಗಾಂಧೀಜಿ ಅವರ ಹಿಂದುತ್ವದ ವಿರೋಧ ನೀತಿ ಬಗ್ಗೆ ನಾನು ಮಾತನಾಡಿದ್ದೇನೆ. ನಾನು ಯಾರಿಗೂ ಕೂಡಾ ಬೆದರಿಕೆ ಹಾಕಿಲ್ಲ” ಎಂದಿದ್ದಾರೆ. “ನನ್ನ ಹೇಳಿಕೆಯಲ್ಲಿ […]

ಸಿದ್ದರಾಮಯ್ಯನವರಿಗೆ ಮರ್ಯಾದೆ ಇದ್ದರೆ ಕ್ಷಮೆ ಕೇಳಬೇಕು : ಸೊಗಡು ಶಿವಣ್ಣ

Tuesday, December 10th, 2019
shivanna

ತುಮಕೂರು : ಸಿದ್ದರಾಮಯ್ಯನವರಿಗೆ ನಾಡಿನ ಜನ ಗೃಹ ಬಂಧನದ ಶಿಕ್ಷೆ ಕೊಟ್ಟಿದ್ದಾರೆ. ಹಾಗಾಗಿ ಮರ್ಯಾದೆ ಇದ್ದರೆ ಇವರು ನಾಡಿನ ಜನರ ಕ್ಷಮೆ ಕೇಳಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯರ ವಿರುದ್ದ ಮಾಜಿ ಸಚಿವ ಸೊಗಡು ಶಿವಣ್ಣ ಗುಡುಗಿದ್ದಾರೆ. ಸಿದ್ದರಾಮಯ್ಯನವರು ಮಾತೆತ್ತಿದ್ರೆ ಯಡಿಯೂರಪ್ಪನವರಿಗೆ ಟೀಕೆ ಮಾಡುತ್ತಿದ್ದರು. ಜೈಲಿಗೆ ಹೋಗಿದ್ರು ಜೈಲಿಗೆ ಹೋಗಿದ್ರು ಎಂದು ಹೊದಲೆಲ್ಲಾ ಹೇಳುತ್ತಿದ್ರು. ಇವತ್ತು ಕರ್ನಾಟಕ ಜನ ದುರಹಂಕಾರಿ ಸಿದ್ದರಾಮಯ್ಯ ಹೋಗಬೇಕು ಎಂದು ಸಿಎಂ ಯಡಿಯೂರಪ್ಪನವರ ಪರ ತೀರ್ಪು ಕೊಟ್ಟಿದ್ದಾರೆ ಎಂದು ಹೇಳಿದರು. ರಾಜೀನಾಮೆ ಕೊಡುವುದರ […]

ಮಂಗಳೂರು : ‘ಗಿರಿಗಿಟ್’ ಚಿತ್ರದ ಆಕ್ಷೇಪಾರ್ಹ ದೃಶ್ಯ ತೆಗೆಯಲು ಚಿತ್ರ ತಂಡ ಒಪ್ಪಿಗೆ

Friday, September 13th, 2019
girgit

ಮಂಗಳೂರು : ಗಿರಿಗಿಟ್ ಚಿತ್ರದ ವಿವಾದ ಕೊನೆಗೂ ನಿರ್ಣಾಯಕ ಹಂತ ತಲುಪಿದೆ. ಚಿತ್ರದಲ್ಲಿ ನ್ಯಾಯಾಂಗ ನಿಂದನೆ ಮತ್ತು ವಕೀಲ ಸಮುದಾಯದ ಭಾವನೆಗಳಿಗೆ ಧಕ್ಕೆ ಮಾಡಲಾಗಿದೆ ಎಂಬ ಅಂಶ ಇರುವ ಭಾಗಗಳನ್ನು ಬೇಷರತ್ತಾಗಿ ತೆಗೆದು ಹಾಕಲು ಗಿರಿಗಿಟ್ ಚಿತ್ರ ತಂಡ ಒಪ್ಪಿಕೊಂಡಿದೆ. ಮಂಗಳೂರಿನ ಪ್ರಧಾನ ಕಿರಿಯ ಸಿವಿಲ್ ನ್ಯಾಯಾಧೀಶರ ಮುಂದೆ ಚಿತ್ರತಂಡದ ಪರ ವಾದ ಮಂಡಿಸಿದ ಗಿರಿಗಿಟ್ ಪರ ವಕೀಲರು ಚಿತ್ರ ಪ್ರದರ್ಶನ ಮುಂದುವರಿಸಲು ಅನುಮತಿ ಯಾಚಿಸಿದರು. ತಾಂತ್ರಿಕ ಕಾರಣಗಳಿಂದ ಚಿತ್ರ ಪ್ರದರ್ಶನ ಮುಂದುವರಿಯುತ್ತಿದ್ದು, ಚೆನ್ನೈನಲ್ಲಿ ಚಲನಚಿತ್ರದ ಭಾಗಗಳನ್ನು […]