ತುಳುವರ ನಾಡು ನುಡಿಯ ಹೋರಾಟವನ್ನು ಅವಮಾನಿಸಿದ ಶೋಭಾ ಕರಂದ್ಲಾಜೆ : ತುಳುವೆರೆ ಪಕ್ಷ ಖಂಡನೆ

Tuesday, June 22nd, 2021
Shailesh

ಬೆಳ್ತಂಗಡಿ: ಉಡುಪಿ-ಚಿಕ್ಕಮಗಳೂರು ಸಂಸದರಾದ ಶೋಭಾ ಕರಂದ್ಲಾಜೆಯವರು ಇತ್ತೀಚೆಗೆ ತುಳು ರಾಜ್ಯದ ಬೇಡಿಕೆಯು ಕುಚೋದ್ಯದ ಬೇಡಿಕೆ ಎಂದಿದ್ದು ಖಂಡನೀಯ. ಕನ್ನಡ ಏಕೀಕರಣ ಚಳವಳಿಯನ್ನು ಸಮರ್ಥಿಸಿರುವ ಇವರು ಅದೇ ತುಳು ಏಕೀಕರಣ ಚಳವಳಿಯನ್ನು ಕುಚೋದ್ಯದ ಬೇಡಿಕೆ ಎಂದಿದ್ದು ಇವರ ದ್ವಿಮುಖ ನೀತಿಯನ್ನು ತೋರಿಸುತ್ತದೆ. ತುಳುವರ ನಾಡು ನುಡಿಯ ಹೋರಾಟವನ್ನು ಅವಮಾನಿಸುವ ಮೂಲಕ ಸಮಸ್ತ ತುಳುವರ ಭಾವನೆಗಳಿಗೆ ನೋವು ತಂದಿದ್ದಾರೆ. ತುಳು ಅಸ್ಮಿತೆಯ ವಿಚಾರಗಳನ್ನು ಯಾರೇ ಕುಚೋದ್ಯ ಮಾಡಿದರೂ ಅದನ್ನು ತುಳುವೆರೆ ಪಕ್ಷ ಖಂಡಿಸುತ್ತದೆ ಎಂದು ಪಕ್ಷದ ಅದ್ಯಕ್ಷರಾದ ಶೈಲೇಶ್ ಆರ್.ಜೆ. […]

ರಾಜ್ಯಪಾಲರು, ಕಾಂಗ್ರೆಸ್, ಜೆಡಿಎಸ್ ನಾಯಕರ ವರ್ತನೆಗೆ ದ.ಕ ಜಿಲ್ಲಾ ಬಿಜೆಪಿ ಖಂಡನೆ.

Wednesday, October 13th, 2010
ಬಿ.ಜೆಪಿಯ ಜಿಲ್ಲಾಧ್ಯಕ್ಷ ಪದ್ಮನಾಭ ಕೊಟ್ಟಾರಿ

ಮಂಗಳೂರು:  ಕಳೆದ ಒಂದು ವಾರದ ರಾಜ್ಯದ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದಾಗ ಈ ರಾಜ್ಯದಲ್ಲಿ ಜನಾದೇಶದೊಂದಿಗೆ ಜನಪರ ಆಡಳಿತ ನೀಡುವ  ಒಂದು ಸರಕಾರವನ್ನು ಅಧಿಕಾರದಿಂದ ಕೆಳಗಿಳಿಸಲು ಪ್ರತಿಪಕ್ಷಗಳು ಯಾವ ರೀತಿ ಕಾರ್ಯೋನ್ಮುಖವಾಗಿದೆ ಎನ್ನುವುದರ ಜ್ವಲಂತ ಸಾಕ್ಷಿಯಾಗಿದೆ. ರಾಜ ಭವನವನ್ನು ರಾಜಕೀಯ ಚಟುವಟಿಕೆಗಳ ಕೇಂದ್ರವಾಗಿರಿಸಿಕೊಂಡು ರಾಜ್ಯಪಾಲರನ್ನು ಪಕ್ಷದ ಏಜಂಟರಂತೆ ಉಪಯೋಗಿಸಿಕೊಂಡ ಕಾಂಗ್ರೆಸ್-ಜೆಡಿಎಸ್ನ ಕುತಂತ್ರ ಬಯಲಾಗಿದೆ ಎಂದು ಬಿ.ಜೆಪಿಯ ಜಿಲ್ಲಾಧ್ಯಕ್ಷ ಪದ್ಮನಾಭ ಕೊಟ್ಟಾರಿಯವರು ಇಂದು ಬಿಜೆಪಿ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಸರಕಾರದ ಭಾಗವಾಗಿ ಕಾರ್ಯನಿರ್ವಹಿಸಿದ ಸಚಿವರನ್ನು, ಶಾಸಕರನ್ನು ರೆಸಾರ್ಟ್ ಗಳಲ್ಲಿ […]