ಮಂಗಳೂರಿನಲ್ಲಿ 13 ಮಂದಿಯಲ್ಲಿ ಕೋವಿಡ್ ಸೋಂಕು

Friday, December 29th, 2023
Corona

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಶುಕ್ರವಾರ 348 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ಪೈಕಿ 13 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಅಲ್ಲದೆ 25 ಸಕ್ರಿಯ ಪ್ರಕರಣದ ವರದಿ ಪ್ರಕಟವಾಗಿದೆ. ಪಾಸಿಟಿವ್‌ಗೊಳಗಾದ 13 ಮಂದಿಯ ಪೈಕಿ ಒಬ್ಬರು ನಗರದ ಖಾಸಗಿ ಆಸ್ಪತ್ರೆ ಮತ್ತು 12 ಮಂದಿ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ ಆರು ಮಂದಿ ಮಹಿಳೆಯರು ಮತ್ತು ಏಳು ಮಂದಿ ಪುರುಷರಿದ್ದಾರೆ. 27ರಿಂದ 84 ವರ್ಷ ಪ್ರಾಯದವರೂ ಇದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ

Wednesday, December 20th, 2023
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಉಡುಪಿ ಮೂಲದ 82 ವರ್ಷದ ವೃದ್ಧರೋರ್ವರಲ್ಲಿ ಪಾಸಿಟಿವ್ ಪತ್ತೆಯಾಗಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಗೆ ನರ ಸಂಬಂಧಿ ಕಾಯಿಲೆಗೆ ಬಂದಿರುವ ಅವರನ್ನು ರಾಟ್ ಟೆಸ್ಟ್ ಮಾಡಿಸಿದಾಗ ಅದರಲ್ಲಿ ಪಾಸಿಟಿವ್ ಪತ್ತೆಯಾಗಿದೆ. ಕೊರೋನಾ ಟೆಸ್ಟಿಂಗ್ ಆರಂಭಿಸಿದ ಮೊದಲ ದಿನವೇ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು. ಅವರನ್ನು ಖಾಸಗಿ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ಗೆ ದಾಖಲಿಸಲಾಗಿದ್ದು ಅಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.

ವಿಟ್ಲ : ಸಹೋದರರಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ, ಓರ್ವ ಗಂಭೀರ

Wednesday, September 13th, 2023
poision

ವಿಟ್ಲ : ಇಲ್ಲಿನ ಕುದ್ದುಪದವು ನಿವಾಸಿ ಸಹೋದರರಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಟ್ಲದಲ್ಲಿ ನಡೆದಿದೆ. ಮೈರ ಮೂಲದ ಕುದ್ದುಪದವು ನಿವಾಸಿ ಪವನ್ ಹಾಗೂ ಪೃಥ್ವಿರಾಜ್ ವಿಷ ಸೇವನೆ ಮಾಡಿದ ಸಹೋದರರು ಎಂದು ತಿಳಿದು ಬಂದಿದೆ. ಅಸ್ವಸ್ಥರನ್ನು ವಿಟ್ಲ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದ್ದು, ಅವರಲ್ಲಿ ಓರ್ವ ಗಂಭೀರವಾಗಿದ್ದು, ಆತನನ್ನು ಮಂಗಳೂರು ಆಸ್ಪತ್ರೆಗೆ ಹಾಗೂ ಇನ್ನೋರ್ವನನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ. ಸಹೋದರರ ತಂದೆ ಮೃತಪಟ್ಟಿದ್ದು, ತಾಯಿ ಮೈರದಲ್ಲಿ ವಾಸವಾಗಿದ್ದಾರೆ. ಇವರಿಬ್ಬರು ಅಜ್ಜಿ ಮನೆಯಲ್ಲಿ […]

ಮಹಾಕಾಳಿಪಡ್ಪು ಭಾರತೀ ವಾಚ್ ವರ್ಕ್ಸ್ ನ ಜೆ.ಚಂದ್ರಶೇಖರ್ ನಿಧನ

Monday, February 14th, 2022
j Chandrashekar

ಮಂಗಳೂರು : ಜಪ್ಪು ಮಹಾಕಾಳಿಪಡ್ಪು ಭಾರತೀ ವಾಚ್ ವರ್ಕ್ಸ್ ಇದರ ಮಾಲಕ ಜೆ.ಚಂದ್ರಶೇಖರ್ (82) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಬೆಳಿಗ್ಗೆ ನಿಧನರಾಗಿದ್ದಾರೆ. 1967ರಲ್ಲಿ ವಾಚ್ ವರ್ಕ್ಸ್ ಆರಂಭಿಸಿದ ಇವರು ಮೊದಲು ಮಂಗಳೂರಿನ ಕೆನರಾ ವಾಚ್ ವರ್ಕ್ಸ್ ನಲ್ಲಿ ತನ್ನ ವೃತ್ತಿ ಆರಂಭಿಸಿದರು. ಬಳಿಕ 1977ರಲ್ಲಿ ಸ್ವತ: ತಾವೇ ಜಪ್ಪು ಮಹಾಕಾಳಿಪಡ್ಪು ನಲ್ಲಿ  ಭಾರತೀ ವಾಚ್ ವರ್ಕ್ಸ್ ಸಂಸ್ಥೆ ಸ್ಥಾಪಿಸಿ ತನ್ನ ವೃತ್ತಿ ನಿರ್ವಹಿಸಿದ್ದರು. ಮಂಗಳೂರಿನ ಜಪ್ಪು ಪಟ್ನ, ನಂತರ ಎಕ್ಕೂರು ಇಲ್ಲಿ ಸ್ವಂತ ಮನೆಯಲ್ಲಿ ನೆಲೆಸಿದ್ದರು. ಇತ್ತೀಚಿಗೆ […]

ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾದ ತಾಯಿ ಮಗು ಸಾವು

Saturday, January 22nd, 2022
Savitha

ಮಂಗಳೂರು : ಹೆರಿಗೆಗೆಂದು ಖಾಸಗಿ ಆಸ್ಪತ್ರೆಯೊಂದರಲ್ಲಿ  ದಾಖಲುಗೊಂಡಿದ್ದ  ತಾಯಿ ಮತ್ತು ಮಗು ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ವಿಟ್ಲ ಮೂಲದ ಸವಿತಾ (33) ಹೆರಿಗೆಗಾಗಿ ಶುಕ್ರವಾರ ಬೆಳಗ್ಗೆ ಆಸ್ಪತ್ರೆಗೆ ಬಂದಿದ್ದರು. ಮಗು ಬೆಳಗ್ಗೆ ಮೃತಪಟ್ಟಿದೆ. ಸಂಜೆ ವೇಳೆ ತಾಯಿ ಕೂಡ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯವರು ಕುಟುಂಬದ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ. ಇದರಿಂದ ಆಕ್ರೋಶಗೊಂಡ ಸಂಬಂಧಿಕರು ವೈದ್ಯರ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಂಗಳೂರು ಪೊಲೀಸ್ ಆಯುಕ್ತ ಎನ್. […]

ಮರುವಾಯಿ ಸೇವಿಸಿ ತಲೆ ಸುತ್ತು ಬಂದು, ವಾಂತಿ ಮಾಡಿ ಆಸ್ಪತ್ರೆಗೆ ದಾಖಾಲಾದ ಜನರು

Tuesday, January 18th, 2022
Maruvayi

ಮಂಗಳೂರು :  ಮರುವಾಯಿ ಸೇವಿಸಿ ಹಲವರು ಅಸ್ವಸ್ಥಗೊಂಡು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ  ಕುಪ್ಪೆಪದವು ಪರಿಸರದಲ್ಲಿ  ನಡೆದಿದೆ. ಚಿಪ್ಪು ಮೀನು ಖರೀದಿಸಿ ಪದಾರ್ಥ ಮಾಡಿ ತಿಂದ ಮೇಲೆ ಕೆಲವರು ಅಸ್ವಸ್ಥಗೊಂಡಿದ್ದು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳದೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ತೀವ್ರ ಅಸ್ವಸ್ಥಗೊಂಡ ಒಬ್ಬರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಮರುವಾಯಿ ತಿಂದ ಜನರಲ್ಲಿ ತಲೆ ಸುತ್ತಲಾರಂಭಿಸಿದ್ದು, ಕಣ್ಣು ಮಂಜಾಗಿ, ವಾಂತಿಯೂ ಆಗಿದೆ ಎಂದು ತಳಿದು ಬಂದಿದೆ. ಮರುವಾಯಿ ಸಂರಕ್ಷಿಸಿಡಲು ರಾಸಾಯನಿಕ ಸಿಂಪಡಿಸಲಾಗುತ್ತಿದ್ದು, ಇದರಿಂದ […]

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ತೀವ್ರ ಎದೆ ನೋವು, ಆಸ್ಪತ್ರೆಗೆ ದಾಖಲು

Friday, October 29th, 2021
Punneth-Rajkuamr

ಬೆಂಗಳೂರು: ಜಿಮ್ ನಲ್ಲಿ ಕಸರತ್ತು ಮಾಡುವ ವೇಳೆಯಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ದಾಖಿಸಲಾಗಿದೆ. ಅವರನ್ನು ವಿಕ್ರಂ ಆಸ್ಪತ್ರೆಯ  ತುರ್ತು ನಿಗಾ ಘಟಕದಲ್ಲಿ ಅವರಿಗೆ ಇಸಿಜಿ ಸೇರಿದಂತೆ ಹಲವು ಪರೀಕ್ಷೆಗಳನ್ನು ಮಾಡಲಾಗುತ್ತಿದ್ದು, ಅವರಿಗೆ ಹೃದಯಾಘಾತ ಆಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಶಿವರಾಜ್ ಕುಮಾರ್ ಪುತ್ರಿ ಸೇರಿದಂತೆ ಹಲವರು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ನಾಲ್ಕು ಗಂಟೆಗಳ ಹಿಂದಷ್ಟೇ ಶಿವಣ್ಣ ಅಭಿಯನದ ಭಜರಂಗಿ-2 ಚಿತ್ರದ ಯಶಸ್ಸು […]

ರಾಜ್ಯ ಬಿಜೆಪಿ ಯುವ ಮೋರ್ಚಾದ ಮಾಜಿ ಪ್ರಧಾನ ಕಾರ್ಯದರ್ಶಿ ಸುಧೀರ್ ಘಾಟೆ ನಿಧನ

Friday, October 22nd, 2021
Sudhir Ghate

ಮಂಗಳೂರು, : ಮಂಗಳೂರಿನ ಜಾಹೀರಾತು ಸಂಸ್ಥೆ ಮ್ಯಾಗ್ನಂ ಇಂಟರ್‌ಗ್ರಾಫಿಕ್ಸ್‌ನ ಚೇಯರ್‍ಮೆನ್, ರಾಜ್ಯ ಬಿಜೆಪಿ ಯುವ ಮೋರ್ಚಾದ ಮಾಜಿ ಪ್ರಧಾನ ಕಾರ್ಯದರ್ಶಿ ಸುಧೀರ್ ಘಾಟೆ(64) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಲೆಕ್ಕ ಪರಿಶೋಧಕರ ಕಚೇರಿಯಲ್ಲಿ ತನ್ನ ವೃತ್ತಿ ಜೀವನವನ್ನು ಆರಂಭಿಸಿದರು. 1992 ರಲ್ಲಿ ಮ್ಯಾಗ್ನಂ ಇಂಟರ್‌ಗ್ರಾಫಿಕ್ಸ್ ಜಾಹೀರಾತು ಸಂಸ್ಥೆಯನ್ನು ಆರಂಭಿಸಿದ ಇವರು ದೇಶದಾದ್ಯಂತ ೧೮ ಶಾಖೆಗಳನ್ನು ತೆರೆದು ಜಾಹೀರಾತು ಕ್ಷೇತ್ರದಲ್ಲಿ ದಿಗ್ಗಜನಾಗಿ ರಾ?ಮಟ್ಟದಲ್ಲಿ ಹೆಸರು ವಾಸಿಯಾಗಿದ್ದರು. ಸಾವಿರಾರು ಮಂದಿಗೆ ಉದ್ಯೋಗದಾತರಾಗಿ ಸುಮಾರು […]

ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ನಿಧನ

Monday, September 13th, 2021
Oscar fernandise

ಮಂಗಳೂರು : ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ.13 ರಂದು ನಿಧನರಾಗಿದ್ದಾರೆ. ಮನೆಯಲ್ಲಿ ಯೋಗ ಮಾಡುತ್ತಿರುವಾಗ ಕುಸಿದು ಬಿದ್ದು  ತಲೆಯ ಒಳಗೆ ರಕ್ತಸ್ರಾವವಾಗಿರುವುದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೆದುಳಿನಲ್ಲಿ ಹೆಪ್ಪುಗಟ್ಟಿರುವ ರಕ್ತವನ್ನು ತೆಗೆಯಲು ವೈದ್ಯರು ಸರ್ಜರಿ ಮಾಡಿದ್ದರು. ಆ ಬಳಿಕ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಮಾ.27, 1941 ರಲ್ಲಿ ಜನಿಸಿದ್ದ ಆಸ್ಕರ್ ಫರ್ನಾಂಡಿಸ್, ಐಎನ್ ಸಿಯಲ್ಲಿ ಉನ್ನತ ಹುದ್ದೆಗಳನ್ನು ನಿಭಾಯಿಸಿ ಅನುಭವವುಳ್ಳ ನಾಯಕರಾಗಿದ್ದರು. ಮಾಜಿ ಪ್ರಧಾನಿ ರಾಜೀವ್ […]

ಆಯುಷ್ಮಾನ್ ಕಾರ್ಡ್ ಇದ್ದರೂ, ರೋಗಿಗಳಿಂದ ಹೆಚ್ಚು ಹಣ ವಸೂಲಿ ಮಾಡಿದ ಏಳು ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ

Saturday, August 7th, 2021
Ayushman

ಮಂಗಳೂರು : ಕೊರೋನಾ ಸೋಂಕು ಬಂದ ಮೇಲಂತೂ ಖಾಸಗಿ ಆಸ್ಪತ್ರೆಗಳ ಸುಲಿಗೆಗಳಿಂದ ಜನ ಮನೆ ಮಠ ಮಾರಿ ತಮ್ಮವರನ್ನೂ ಕಳಕೊಂಡಿದ್ದಾರೆ. ಅದರಲ್ಲೂ ಸರಕಾರದ ಅಯುಷ್ಮಾನ್ ಕಾರ್ಡ್ ಇದ್ದರೂ ಅದನ್ನು ತಿರಸ್ಕರಿಸಿದ ಆಸ್ಪತ್ರೆಗಳು ಹೆಚ್ಚು ಬಿಲ್ಲು ವಸೂಲಿ ಮಾಡುತ್ತಿದ್ದವು. ಅಂತಹ  ಮಂಗಳೂರಿನ ಏಳು ಖಾಸಗಿ ಆಸ್ಪತ್ರೆಗಳ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಕುಂದು ಕೊರತೆ ಪರಿಹಾರ ಸಮಿತಿ ಸಭೆಯಲ್ಲಿ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಸಂತ್ರಸ್ತರು ದಾಖಲಿಸಿದ್ದ […]