ಸ್ಕೂಟರ್ ಗೆ ಲಾರಿ ಡಿಕ್ಕಿ : ಕನ್ಯಾನ ಪರಕಜೆ ನಿವಾಸಿ ಸಾವು

Thursday, August 12th, 2021
Manju Belchada

ಬಂಟ್ವಾಳ : ಸ್ಕೂಟರ್ ಗೆ ಲಾರಿ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಮೃತಪಟ್ಟ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಬುಡೋಳಿ ಎಂಬಲ್ಲಿ ಗುರುವಾರ ಮಧ್ಯಾಹ್ನ ವೇಳೆ ನಡೆದಿದೆ. ಕನ್ಯಾನ ಪರಕಜೆ ನಿವಾಸಿ ಮಂಜು ಬೆಳ್ಚಾಡ ಅವರ ಪುತ್ರ ಗಣೇಶ್ ಬಂಗೇರ (54) ಮೃತಪಟ್ಟ ವ್ಯಕ್ತಿ. ಉಪ್ಪಿನಂಗಡಿ ಕಡೆಗೆ ವೈಯಕ್ತಿಕ ಕೆಲಸದ ನಿಮಿತ್ತ ದ್ವಿಚಕ್ರ ವಾಹನ ದ ಮೂಲಕ ಸಂಚರಿಸುವ ವೇಳೆ ಬುಡೋಳಿ ಎಂಬಲ್ಲಿ ಉಪ್ಪಿನಂಗಡಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಅವರು ಬೊಳ್ನಾಡು […]

ಕುಡುಪು ಅನಂತಪದ್ಮನಾಭ ದೇವಸ್ಥಾನ ಶಾಸ್ತ್ರೀಯವಾಗಿ ನಿರ್ಮಾಣಗೊಂಡಿದೆ: ಶ್ರೀ ಅನಂತಪದ್ಮನಾಭ ಅಸ್ರಣ್ಣ

Friday, February 23rd, 2018
brahmakalashotsava

ಮಂಗಳೂರು: ಕುಡುಪು ಅನಂತಪದ್ಮನಾಭ ದೇವಸ್ಥಾನ ಜೀರ್ಣೋದ್ಧಾರದಿಂದ ಶಾಸ್ತ್ರಿಯವಾಗಿ ಅಚ್ಚುಕಟ್ಟಾಗಿ ಯಾವುದೇ ನ್ಯೂನ್ಯತೆ ಇಲ್ಲದೇ ನಿರ್ಮಾಣವಾದ ಕ್ಷೇತ್ರವಾಗಿದೆ. ಶ್ರೀ ಅನಂತಪದ್ಮನಾಭ ದೇವಸ್ಥಾನ ಉತ್ತಮ ಸಾನಿಧ್ಯವಿರುವ ಈ ಕ್ಷೇತ್ರ ಬಹಳ ಎತ್ತರಕ್ಕೆ ಬೆಳೆದಿದೆ ಎಂದು ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಅನುವಂಶಿಕ ಅರ್ಚಕ ಶ್ರೀ ಅನಂತಪದ್ಮನಾಭ ಅಸ್ರಣ್ಣ ಹೇಳಿದರು. ಅವರು ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ನಡೆಯುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪ್ರಯುಕ್ತ ಗುರುವಾರ ನಡೆದ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು. ಜೀರ್ಣೋದ್ಧಾರಗೊಳ್ಳುವ ಕ್ಷೇತ್ರಗಳ ಕೆಲಸವನ್ನು 108 ದಿನಗಳಲ್ಲಿ […]