ಸುತ್ತಿಗೆಯಿಂದ ಹೊಡೆದು ತಂದೆಯನ್ನು ಸಾಯಿಸಿದ ಮಗ

Monday, January 18th, 2021
sridhar

ಬೆಳ್ತಂಗಡಿ : ಮಗನೊಬ್ಬ ತನ್ನ ತಂದೆಯನ್ನು ಸುತ್ತಿಗೆಯಿಂದ ಹೊಡೆದು ಸಾಯಿಸಿದ ಘಟನೆ ಬೆಳ್ತಂಗಡಿತಾಲ್ಲೂಕಿನ ಗರ್ದಾಡಿ ಗ್ರಾಮದ ಮುಂಡ್ಯೊಟ್ಟು ಎಂಬಲ್ಲಿ ಜನವರಿ 18 ರ ಸೋಮವಾರ ನಡೆದಿದೆ. ಮೃತರನ್ನು ಶ್ರೀಧರ್ ಎಂದು ಗುರುತಿಸಲಾಗಿದೆ, ಅವರ ಮಗ ಹರೀಶ್ ಈ ಕೊಲೆ ಮಾಡಿದ ಆರೋಪಿ.ಮೃತ ರಿಗೆ ಇಬ್ಬರು ಗಂಡು ಮತ್ತು ಒಬ್ಬರು ಮಗಳು ಇದ್ದಾರೆ. ಕೌಟುಂಬಿಕ ವಿವಾದವೇ ಕೊಲೆಗೆ ಕಾರಣವಾಗಿದೆ ಎನ್ನಲಾಗಿದೆ. ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.