ಮದುವೆಯಾಗುವುದಾಗಿ ನಂಬಿಸಿ ಎದುರು ಮನೆ ಹುಡುಗಿಯನ್ನು ಗರ್ಭಿಣಿ ಮಾಡಿದ ಆಟೋ ಚಾಲಕ

Thursday, June 10th, 2021
Rape

ಮಂಡ್ಯ: ಆಟೋ ಚಾಲಕ ನೊಬ್ಬ  ಎದುರು ಮನೆಯ 15 ವರ್ಷದ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ  ಬಲಾತ್ಕಾರದಿಂದ ಗರ್ಭಿಣಿ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಕೆಆರ್‍ಪೇಟೆಯ ಗ್ರಾಮದಲ್ಲಿ ನಡೆದಿದೆ. ಕೆಆರ್‍ಪೇಟೆಯ ಗ್ರಾಮವೊಂದರ ನಿವಾಸಿ ಲಕ್ಷ್ಮಣ ಎಂಬಾತನೇ ಬಾಲಕಿಯನ್ನು ಅತ್ಯಾಚಾರ ಮಾಡಿರುವ ಯುವಕ. ಲಕ್ಷ್ಮಣ ಆಟೋ ಚಾಲಕನಾಗಿದ್ದು, ಎದುರು ಮನೆಯ ಬಾಲಕಿಯನ್ನು ಪ್ರೇಮಿಸುವಂತೆ ಕೇಳಿಕೊಂಡಿದ್ದಾನೆ. ಹಲವು ದಿನಗಳ ಬಳಿಕ ಬಾಲಕಿ ಪ್ರೀತಿಸುವುದಾಗಿ ಒಪ್ಪಿಗೆ ಸೂಚಿಸುತ್ತಾಳೆ. ಇದಾದ ಬಳಿಕ ಬಾಲಕಿಗೆ ಮದುವೆಯಾಗುವುದಾಗಿ ನಂಬಿಸಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ನಂತರ […]

ನಾಗರಿಕರಿಗೆ ತೊಂದರೆ ಕೊಡುತ್ತಿದ್ದ ವೈದ್ಯಾಧಿಕಾರಿಗೆ ತುರ್ತು ವರ್ಗಾವಣೆ

Wednesday, June 9th, 2021
Health Center

ಬಂಟ್ವಾಳ: ಇಲ್ಲಿನ ಪಂಜಿಕಲ್ಲು ಗ್ರಾಮದ ಆಚಾರಿಪಲ್ಕೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗರ್ಭಿಣಿಯರು ಸಹಿತ ರೋಗಿಗಳಿಗೆ ಸೂಕ್ತ ಸ್ಪಂದನೆ ಮತ್ತು ಚಿಕಿತ್ಸೆ ನೀಡುತ್ತಿಲ್ಲ ಎಂಬ ನಾಗರಿಕರ ಆರೋಪದ ಹಿನ್ನೆಲೆಯಲ್ಲಿ ಇಲ್ಲಿನ ವೈದ್ಯಾಧಿಕಾರಿ ಡಾ.ಮಧುಸೂದನ್ ಇವರನ್ನು ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ಕಳೆದ ಎರಡು ವರ್ಷಗಳಿಂದ ಇವರ ವಿರುದ್ಧ ಸಾರ್ವಜನಿಕರಿಂದ ವ್ಯಾಪಕ ದೂರು ಕೇಳಿ ಬಂದಿತ್ತು. ಈ ಬಗ್ಗೆ ಗ್ರಾಮ ಪಂಚಾಯಿತಿ ಸಭೆಯಲ್ಲಿ ಕೂಡಾ ನಿರ್ಣಯ ಕೈಗೊಂಡು ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಸೇರಿದಂತೆ ತಾಲ್ಲೂಕು ಮತ್ತು ಜಿಲ್ಲಾ […]

ಮಂಗಳೂರಿನಲ್ಲಿ 29 ಗರ್ಭಿಣಿಯರಲ್ಲಿ ಮತ್ತು ಎರಡು ನವಜಾತ ಶಿಶುಗಳಲ್ಲಿ ಕೊರೊನಾ ಸೋಂಕು

Thursday, May 13th, 2021
corona

ಮಂಗಳೂರು :  ಮಂಗಳೂರಿನ ಸರ್ಕಾರಿ ಲೇಡಿ ಗೋಶನ್ ಆಸ್ಪತ್ರೆಯಲ್ಲಿ ಕಳೆದ ಒಂದು ವಾರದಲ್ಲಿ ಕೊರೊನಾ ಸೋಂಕು  25 ಗರ್ಭಿಣಿಯರಲ್ಲಿ ಮತ್ತು ಹೊಸ ತಾಯಂದಿರಲ್ಲಿ ಕಾಣಿಸಿಕೊಂಡಿದ್ದು ಅವರಿಗಾಗಿ ಹೆಚ್ಚುವರಿ 14 ಹಾಸಿಗೆಗಳ ವಾರ್ಡ್ ನ್ನು ಮೀಸಲಿರಿಸಲಾಗಿದೆ. ಈ ರೋಗಿಗಳ ಆರೋಗ್ಯದ ಮೇಲ್ವಿಚಾರಣೆಗಾಗಿ ವಾಟ್ಸಾಪ್ ಗ್ರೂಪ್ ರಚಿಸಲಾಗಿದ್ದು ತಾಲೂಕು ಮತ್ತು ಜಿಲ್ಲಾ ಆರೋಗ್ಯ ಅಧಿಕಾರಿಗಳು ಕಿರಿಯ ಆರೋಗ್ಯ ಸಹಾಯಕರ ಮೂಲಕ ಈ ರೋಗಿಗಳನ್ನು ಪರಿಶೀಲಿಸಲಾಗುತ್ತದೆ . ಎರಡು ನವಜಾತ ಶಿಶುಗಳಿಗೆ ಸೋಂಕು ದೃಢಪಟ್ಟಿದೆ ಎಂದು ಲೇಡಿ ಗೊಸ್ಚೆನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದುರ್ಗಾ […]

ಗರ್ಭಿಣಿ ಹಾಗೂ ಎರಡು ವರ್ಷದೊಳಗಿನ ಮಕ್ಕಳಿರುವ ಪೊಲೀಸ್ ತಾಯಂದಿರಿಗೆ ಮನೆಯಿಂದಲೇ ಡ್ಯೂಟಿ ಮಾಡಬಹುದು

Sunday, April 18th, 2021
police

ಮಂಗಳೂರು: ಒಂದನೇ ಕೋವಿಡ್ ಅಲೆಯ ಸಂದರ್ಭದಲ್ಲಿ 300 ಕ್ಕೂ ಅಧಿಕ ‌ಮಂದಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದ  ಮುಂಜಾಗ್ರತೆಯಾಗಿ  ಮಂಗಳೂರು ಕಮಿಷನರೇಟ್ ವ್ಯಾಪ್ತಿಯ 35 ಮಹಿಳಾ ಪೊಲೀಸ್ ಸಿಬ್ಬಂದಿಗೆ ಏ.30ರವರೆಗೆ ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ. ಗರ್ಭಿಣಿ ಮಹಿಳೆಯರು ಹಾಗೂ ಎರಡು ವರ್ಷದೊಳಗಿನ ಮಕ್ಕಳಿರುವ ತಾಯಂದಿರಿಗೆ ಮನೆಯಿಂದಲೇ ಕಂಪ್ಯೂಟರ್ ಅಥವಾ ಲ್ಯಾಪ್ ಟಾಪ್ ಮೂಲಕ‌ ಕರ್ತವ್ಯ ನಿರ್ವಹಿಸುವಂತೆ ಅವಕಾಶ ಕಲ್ಪಿಸಲಾಗಿದೆ. ಕೊರೊನಾ ಮುಂಜಾಗ್ರತಾ ಹಿನ್ನೆಲೆಯಲ್ಲಿ ಈ ಅವಕಾಶ ನೀಡಲಾಗಿದೆ ಎಂದು ಮಂಗಳೂರು […]

ಅತ್ಯಾಚಾರ : ಮಗಳ ಕೈಗೆ ಗಂಡು ಮಗು ನೀಡಿದ ಅಪ್ಪನಿಗೆ 12 ವರ್ಷ ಜೈಲು

Wednesday, March 17th, 2021
Sirsi Baby

ಶಿರಸಿ : ಹರೆಯದ ಮಗಳ ಮೇಲೆ ಸತತ ಅತ್ಯಾಚಾರ ನಡೆಸಿ ಆಕೆಯ ಕೈಗೆ ಗಂಡು ಮಗು ನೀಡಿದ್ದ ನಗರದ ಹುಬ್ಬಳ್ಳಿ ರಸ್ತೆಯ ನಿವಾಸಿಗೆ ಕಾರವಾರದ ಹೆಚ್ಚುವರಿ ಮತ್ತು ಸತ್ರ ಎಫ್‌ಟಿಎಸ್‌ಸಿ 1ನೇ ನ್ಯಾಯಾಲಯ 12 ವರ್ಷಗಳ ಜೈಲು ಮತ್ತು 30 ಸಾವಿರ ರು. ದಂಡ ವಿಧಿಸಿದೆ. ಮಹಮ್ಮದ್‌ ಉಬೇದುಲ್ಲಾ ಶೇಖ್‌ ಶಿಕ್ಷೆಗೊಳಗಾದ ವ್ಯಕ್ತಿ. ಆರೋಪಿ 2018ರ ಜೂನ್‌ ತಿಂಗಳಿನಲ್ಲಿ ಈ ಕೃತ್ಯ ನಡೆಸಿದ್ದ. ಅತ್ಯಾಚಾರ ನಡೆಸಿದ ವಿಷಯವನ್ನು ಯಾರಿಗಾದರೂ ಹೇಳಿದರೆ ವಿಷ ಹಾಕಿ ಕೊಂದುಬಿಡುವುದಾಗಿಯೂ ಬೆದರಿಕೆ ಹಾಕಿದ್ದ. […]

ಗರ್ಭಿಣಿಯ ಹೊಟ್ಟೆಯಲ್ಲೇ ಮಗು ಸಾವು, ಶಿವಭಾಗ್ ನ ಶಿವದೀಪ್ ಅಪಾರ್ಟ್ ಮೆಂಟ್ ಗೆ ನೋಟೀಸ್

Thursday, May 28th, 2020
pregnent-woman

ಮಂಗಳೂರು : ಶಿವದೀಪ್ ಅಪಾರ್ಟ್ ಮೆಂಟ್ ನಲ್ಲಿ ಕ್ವಾರೆಂಟೈನ್ ದ್ದ ಗರ್ಭಿಣಿಯ ಹೊಟ್ಟೆಯಲ್ಲೇ ಮಗು ಸಾವು ಸಂಭವಿಸಲು  ಕಾರಣರಾದ  ಶಿವಭಾಗ್ ನ ಖಾಸಗಿ ಅಪಾರ್ಟ್ ಮೆಂಟ್ ಗೆ ಮಂಗಳೂರು ಮಹಾನಗರ ಪಾಲಿಕೆ ನೋಟಿಸ್ ಜಾರಿಗೊಳಿಸಿದೆ. ಶಿವಭಾಗ್ ನ ಶಿವದೀಪ್ ಅಪಾರ್ಟ್ ಮೆಂಟ್ ಗೆ ನೋಟೀಸ್ ಜಾರಿಯಾಗಿದೆ. ಇನ್ನು ಮೂರು ದಿನಗಳ ಒಳಗೆ ಸೂಕ್ತ ಸಮಜಾಯಿಷಿ ನೀಡಲು ಸೂಚನೆ ನೀಡಲಾಗಿದೆ. ತಕ್ಷಣ ಮಹಿಳೆಗೆ ಅಪಾರ್ಟ್ ಮೆಂಟ್ ಪ್ರವೇಶಕ್ಕೆ ಅವಕಾಶ ನೀಡಲು ಸೂಚನೆ ನೀಡಲಾಗಿದೆ. ತಪ್ಪಿದಲ್ಲಿ ಅಪಾರ್ಟ್ ಮೆಂಟ್ ಅಸೋಸಿಯೇಷನ್ ವಿರುದ್ದ ಕಾನೂನು ಕ್ರಮ […]

ಮುಂಬಯಿ ವೈದ್ಯರ ನಿರ್ಲಕ್ಷ, ಸಾಯನ್ ನಲ್ಲಿ ಒಂದೂವರೆ ತಿಂಗಳ ಗರ್ಭಿಣಿ ವಿಧಿವಶ

Monday, May 25th, 2020
Sujatha-Praveen

ಮುಂಬಯಿ : ಸಾಯನ್ ನ ನಿವಾಸಿ ಉದ್ಯಮಿ, ಕುಲಾಲ ಸಂಘ ಮುಂಬಯಿಯ ಸಕ್ರಿಯ ಕಾರ್ಯಕರ್ತ ಪ್ರವೀಣ್ ಮೂಲ್ಯ ಇವರ ಪತ್ನಿ ಸುಜಾತ ಪ್ರವೀಣ್ ಮೂಲ್ಯ (27 ) ಅವರು ಒಂದೂವರೆ ತಿಂಗಳ ಗರ್ಭಿಣಿಯಾಗಿದ್ದು 3 ದಿನಗಳ ಹಿಂದೆ ಹೊಟ್ಟೆ ನೋವು ಕಾಣಿಸಿಕೊಂಡ ಕಾರಣ ಚಿಕಿತ್ಸೆಗಾಗಿ ಚೆಂಬೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು ಅಲ್ಲಿ ಶಸ್ತ್ರ ಚಿಕಿತ್ಸೆ ಮಾಡುವುದು ಅನಿವಾರ್ಯ ಎಂದು ಹೇಳಿದ ಕಾರಣ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಮೂರು ದಿನಗಳ ನಂತರ, ಮೇ. 24 ರಂದು ಇವರನ್ನು ಆಸ್ಪತ್ರೆಯಿಂದ […]

ಚಿಕ್ಕಮಗಳೂರು : ಗರ್ಭಿಣಿ , ವೈದ್ಯಾಧಿಕಾರಿ ಸೇರಿ ಐವರಿಗೆ ಕೊರೋನಾ

Wednesday, May 20th, 2020
corona Chikamagaluru

ಚಿಕ್ಕಮಗಳೂರು :  ಕೊಪ್ಪದ ಕೇಂದ್ರದಲ್ಲಿ ಕ್ವಾರಂಟೈನಲ್ಲಿದ್ದ ಮೂವರಿಗೆ ಕೋವಿಡ್-19 ಪತ್ತೆಯಾಗಿದೆ, ಕಾಫಿನಾಡಿನಲ್ಲಿ ಒಂದೇ ದಿನ ಐವರಿಗೆ ಸೋಂಕು ದೃಢಪಟ್ಟಿದೆ. ಮುಂಬೈನಿಂದ ಮರಳಿದ್ದ ಎನ್.ಆರ್.ಪುರ ತಾಲ್ಲೂಕಿನ ಕೆರೆಗದ್ದೆಯ ಈ ಮೂವರು ಕ್ವಾರಂಟೈನಲ್ಲಿದ್ದರು. 7 ವರ್ಷ ಮತ್ತು 10 ವರ್ಷದ ಬಾಲಕ, 17 ವರ್ಷದ ಯುವತಿಗೆ ಕೋವಿಡ್ ದೃಢಪಟ್ಟಿದೆ. ತರೀಕೆರೆಯ ಗರ್ಭಿಣಿ (27) ಮತ್ತು ಮೂಡಿಗೆರೆಯ ವೈದ್ಯಾಧಿಕಾರಿಗೆ ಕೋವಿಡ್ ಪತ್ತೆಯಾಗಿದೆ.

ಉಡುಪಿಯ 7 ತಿಂಗಳ ಗರ್ಭಿಣಿಯಲ್ಲಿ ಕೊರೊನಾ ಸೋಂಕು ಪತ್ತೆ

Monday, May 18th, 2020
Udupi-Covid

ಉಡುಪಿ :  ಸೋಮವಾರ ಉಡುಪಿಯಲ್ಲಿ 7 ತಿಂಗಳ ಗರ್ಭಿಣಿಯಲ್ಲಿ ಕೊರೊನಾ ದೃಢಪಟ್ಟಿದೆ. ಮಹಾರಾಷ್ಟ್ರದ ಮುಂಬೈ ನಿಂದ ಆಗಮಿಸಿ ಕ್ವಾರಂಟೈನ್ ನಲ್ಲಿದ್ದ ಉಡುಪಿಯ ಜಿಲ್ಲೆಯ ಕೊಲ್ಲೂರಿನ 28 ವರ್ಷದ ಮಹಿಳೆಗೆ ಕೊರೊನಾ ದೃಢವಾಗಿದೆ. ಉಡುಪಿಯಲ್ಲಿ 11 ಕೊರೊನಾ ಪ್ರಕರಣ ದೃಢಪಟ್ಟಿದ್ದು ಈ ಪೈಕಿ 3 ಮಂದಿ ಗುಣಮುಖರಾಗಿದ್ದಾರೆ. 7 ಸಕ್ರಿಯ ಪ್ರಕರಣಗಳಿದ್ದು ಓರ್ವ ಮೃತಪಟ್ಟಿದ್ದಾನೆ.  

ಸಚಿವ ಯು.ಟಿ. ಖಾದರ್‌ ಲೇಡಿಗೋಷನ್‌ ಆಸ್ಪತ್ರೆಗೆ ಭೇಟಿ

Sunday, July 28th, 2013
Ut khader

ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್‌ ಶನಿವಾರ ಲೇಡಿಗೋಷನ್‌ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು. ಲೇಡಿಗೋಶನ್‌ ಸರಕಾರಿ ಆಸ್ಪತ್ರೆಯಲ್ಲಿ ಪ್ರಸ್ತುತ 260 ಹಾಸಿಗೆಗಳಿದ್ದು, ಅದಕ್ಕೆ 100 ಹಾಸಿಗೆಗಳನ್ನು ಸೇರಿಸಲಾಗುವುದು, ಈ ಯೋಜನೆಗಾಗಿ ಎನ್‌ಆರ್‌ಎಚ್‌ಎಂ ಯೋಜನೆಯಲ್ಲಿ ಕೆಎಚ್‌ಎಸ್‌ಡಿಆರ್‌ಪಿ ಅಡಿಯಲ್ಲಿ 10.46 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು. ಮುಂದಿನ ಹಂತದಲ್ಲಿ ಇದನ್ನು 500 ಹಾಸಿಗೆಗ‌ಳ ಸುಸಜ್ಜಿತ ಮಾದರಿ ಆಸ್ಪತ್ರೆಯನ್ನಾಗಿ ಅಭಿವೃದ್ಧಿ ಪಡಿಸುವ ಗುರಿ ಹೊಂದಲಾಗಿದೆ. ಎಂಆರ್‌ಪಿಎಲ್‌ ವತಿಯಿಂದ ಹಮ್ಮಿಕೊಂಡಿರುವ ಕಾಮಗಾರಿಯ […]