ಮಂಗಳೂರು ಮತ್ತು ಕೇರಳಕ್ಕೆ ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಸೆರೆ

Tuesday, February 6th, 2024
ಮಂಗಳೂರು ಮತ್ತು ಕೇರಳಕ್ಕೆ ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಸೆರೆ

ಮಂಗಳೂರು : ಒರಿಸ್ಸಾ ರಾಜ್ಯದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಬೃಹತ್ ಪ್ರಮಾಣದಲ್ಲಿ ಮಹೇಂದ್ರ ಬೊಲೆರೋ ವಾಹನದಲ್ಲಿ ನಿಷೇದಿತ ಮಾದಕ ವಸ್ತುವಾದ ಗಾಂಜಾ ಸಾಗಾಟ ಸಾಗಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ 120 ಕೆ ಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೇರಳದ ವಯನಾಡಿನ ಅನೂಪ್ ಎಂ.ಎಸ್(28), ಕೇರಳದ ಕಣ್ಣೂರಿನ ಲತೀಪ್ ಕೆ.ವಿ(36) ಬಂಧಿತರು. ಮಂಗಳವಾರ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ […]

ಗಾಂಜಾ ಸಾಗಾಟ , ತೊಕ್ಕೊಟ್ಟು ಬಳಿ ಮೂವರ ಸೆರೆ

Friday, July 26th, 2019
ganja

ಮಂಗಳೂರು : ಮಂಗಳೂರು ದಕ್ಷಿಣ ರೌಡಿ ನಿಗ್ರಹದಳದ ಪೊಲೀಸರು ಕಾರ್ಯಾಚರಣೆ ನಡೆಸಿ ತೊಕ್ಕೊಟ್ಟು ಬಳಿ ಗಾಂಜಾ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಿದ್ದಾರೆ. ವಾಮಂಜೂರು ನಿವಾಸಿ ಮುಹಮ್ಮದ್ ಮುಸ್ತಫ(21), ಉಳಾಯಿಬೆಟ್ಟು ನಿವಾಸಿ ಹಸನ್ (20), ಮೂಡುಶೆಡ್ಡೆ ಶಿವನಗರ ನಿವಾಸಿ ಫೈಝಲ್ (36) ಬಂಧಿತ ಆರೋಪಿಗಳು. ಆರೋಪಿಗಳು ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಆರೋಪಿಗಳಿಂದ ನಾಲ್ಕು ಕೆ.ಜಿ. ಗಾಂಜಾ, ಸ್ಕೂಟರ್‌ವೊಂದು ಸೇರಿದಂತೆ ಒಟ್ಟು ಒಂದು ಲಕ್ಷ ರೂ. ಮೌಲ್ಯದ ಸೊತ್ತನ್ನು […]

ಒಡಿಶಾದಿಂದ ಮಂಗಳೂರಿಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ

Wednesday, May 24th, 2017
Ganja

ಮಂಗಳೂರು : ಬರ್ಕೆ ಪೊಲೀಸರು ಒಡಿಶಾದಿಂದ ಮಂಗಳೂರಿಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಮೊಬೈಲ್ , ನಗದು ವಶಪಡಿಸಿಕೊಂಡಿದ್ದಾರೆ. ನಗರದ ಮಂಗಳಾ ಕ್ರೀಡಾಂಗಣದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಒಡಿಶಾದ ಶಾಂತನುಕುಮಾರ್ ಶಾಹು (20) ಹಾಗೂ ಪಣಂಬೂರು ಮೀನಕಳಿಯದ ವಿಕ್ರಮ್ (27) ಎಂಬವರನ್ನು ಬಂಧಿಸಲಾಗಿದೆ. 2.5 ಲಕ್ಷ ಮೌಲ್ಯದ 5 ಕೆಜಿ ಗಾಂಜಾ ಹಾಗೂ ಗಾಂಜಾ ಸಾಗಾಟಕ್ಕೆ ಬಳಸಿದ್ದ ರಿಕ್ಷಾ ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ

Saturday, December 31st, 2016
Ganja

ಮಂಗಳೂರು: ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ವಿಟ್ಲ ಠಾಣೆಯ ಪೊಲೀಸರು ಬಂಧಿಸಿರುವ ಘಟನೆ ಬಂಟ್ವಾಳ ತಾಲೂಕಿನ ಅಳಕೆ ಗ್ರಾಮದಲ್ಲಿ ನಡೆದಿದೆ. ಕನ್ಯಾನದ ಕಲಂದರ್ ಶಾಫಿ ಮತ್ತು ಉತ್ತರ ಪ್ರದೇಶ ಮೂಲದ ಅರ್ಮನ್ ಎಂಬುವರನ್ನು ಬಂಧಿಸಿರುವ ಪೊಲೀಸರು 12 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳು ಬೈಕ್‌ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದರು. ಇದರ ಖಚಿತ ಮಾಹಿತಿ ಪಡೆದ ಪೊಲೀಸರು ಅಳಕೆ ಗ್ರಾಮದ ಶಾಂತಡ್ಕ ಬಳಿ ಇವರನ್ನು ಬಂಧಿಸಿದ್ದಾರೆ. ಈ ಕುರಿತು ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಾಂಜಾ ಸಾಗಾಟ ಮಾಡುತ್ತಿದ್ದವನ ಬಂಧನ: ಗಾಂಜಾ ಸಹಿತ ವಶಕ್ಕೆ

Tuesday, November 29th, 2016
Ganja

ಮಂಗಳೂರು: ಜಿಲ್ಲೆ ಹಾಗೂ ನಗರಕ್ಕೆ ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದವನನ್ನು ಗಾಂಜಾ ಸಹಿತ ವಶಕ್ಕೆ ಪಡೆದುಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಕಾಸರಗೋಡು ಕುಂಬಳೆಯ ಇಬ್ರಾಹಿಂ (38) ಎಂದು ಗುರುತಿಸಲಾಗಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣದ ಬಳಿಯಿಂದ ಬೃಹತ್ ಪ್ರಮಾಣದಲ್ಲಿ ಮಂಗಳೂರು ನಗರಕ್ಕೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಪಂಪ್ವೆಲ್ ವೃತ್ತದ ಬಳಿಯಿರುವ ಹೊಟೇಲ್ ಪದ್ಮಶ್ರೀ ಮುಂಭಾಗದಲ್ಲಿ ಗಾಂಜಾವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಪುತ್ತೂರು, ಸುಳ್ಯ […]

ಗಾಂಜಾ ಸಾಗಾಟಕ್ಕೆ ಯತ್ನಿಸಿದ ಮಹಿಳೆಯೊಬ್ಬರ ಬಂಧನ

Saturday, August 20th, 2016
Ganja

ಮಂಗಳೂರು: ನಗರದಲ್ಲಿ ಗಾಂಜಾ ಸಾಗಾಟಕ್ಕೆ ಯತ್ನಿಸಿದ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ. ಬಂಧಿತ ಮಹಿಳೆಯನ್ನು ಕಸಬಾ ಬೆಂಗರೆಯ ಫಾತಿಮಾ (21) ಎಂದು ಗುರುತಿಸಲಾಗಿದೆ. ನಗರದ ಕಾರಾಗೃಹದೊಳಗೆ ಗಾಂಜಾ ಸಾಗಿಸಲು ಯತ್ನಿಸಿದ ಈಕೆಯನ್ನು ಕೈಗಾರಿಕಾ ಭದ್ರತಾ ಪಡೆ ಪೊಲೀಸರು ಬಂಧಿಸಿದ್ದಾರೆ. ಮಹಿಳೆ ತನ್ನ ಬಟ್ಟೆಯೊಳಗೆ 47 ಗ್ರಾಂ ಗಾಂಜಾವನ್ನಿಟ್ಟುಕೊಂಡು ಕೈದಿ ಅಸಿಪ್‌‌ ಎಂಬಾತನಿಗೆ ಸಾಗಿಸಲು ಯತ್ನಿಸುತ್ತಿದ್ದ ವೇಳೆ ಬಂಧಿಸಲಾಗಿದೆ. ಆರೋಪಿ ಮಹಿಳೆಯನ್ನು ಬರ್ಕೆ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದೆ.

ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಮೈಸೂರಿನ ಮೂವರು ಆರೋಪಿಗಳ ಬಂಧನ

Wednesday, March 13th, 2013
Ganja seize at Attavar

ಮಂಗಳೂರು : ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಮೈಸೂರಿನ ಮೂವರು ಆರೋಪಿಗಳನ್ನು ಕರಾವಳಿ ಕಾವಲು ಪಡೆ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಆರೋಪಿಗಳು  ಮೈಸೂರಿನಿಂದ ಉಡುಪಿಗೆ ಮಾರಾಟಕ್ಕಾಗಿ ಅಮಲು ಪದಾರ್ಥ ಗಾಂಜವನ್ನು ಸಾಗಿಸುತ್ತಿದ್ದುದಾಗಿ ತಿಳಿದುಬಂದಿದ್ದು,  ಮಂಗಳೂರಿನ ಅತ್ತಾವರ ದ ಉಪ್ಪಿನ ದಕ್ಕೆಯಲ್ಲಿ ಆರೋಪಿಗಳು ಇರುವ ಸುಳಿವು ಪಡೆದ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂದಿಸಿದ್ದಾರೆ. ಮೈಸೂರಿನಸೈಯ್ಯದ್‌ ಅನೀಸ್‌ ಅಹ್ಮದ್‌(53), ಮನ್ಸೂರ್‌ ಅಹ್ಮದ್‌(28) ಹಾಗೂ ಚಿಕ್ಕಮಗಳೂರಿನ ಅನ್ವರ್‌ ಪಾಷಾ (45) ಆರೋಪಿಗಳಾಗಿದ್ದು, ಮೂರು ಟ್ರಾವೆಲ್‌ ಬ್ಯಾಗುಗಳಲ್ಲಿ ಸುಮಾರು 8,65,000 ಬೆಲೆಯ […]

ಅಕ್ರಮ ಗಾಂಜಾ ಸಾಗಾಟ ನಾಲ್ವರು ಆರೋಪಿಗಳ ಸೆರೆ

Saturday, March 2nd, 2013
ganja seized at Sullia

ಸುಳ್ಯ : ಶುಕ್ರವಾರ ಸಂಪಾಜೆ ಗ್ರಾಮದ ಕಲ್ಲುಗುಂಡಿ ಕೂಲಿ ಶೆಡ್ಡ್ ಬಳಿ ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಜಾಲವನ್ನು ಜಿಲ್ಲಾ ಅಪರಾಧ ಪತ್ತೆ ದಳ ಮತ್ತು ಸುಳ್ಯ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ನಾಲ್ವರನ್ನು ಬಂಧಿಸಿ ಅವರ ಬಳಿಯಲ್ಲಿದ್ದ 1.100 ಕೆ.ಜಿ. ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಂಗಳೂರು ನಗರದ ಆಸುಪಾಸಿನ ಅವಿನಾಶ್‌(29), ಅರುಣ್‌ ಶೆಟ್ಟಿ(38), ನೆಲ್ಸನ್‌ ಡಿಸೋಜ(29) ಮತ್ತು ಪ್ರಥ್ವಿ ಆಳ್ವ(38) ಆರೋಪಿಗಳಾಗಿದ್ದಾರೆ. ಆರೋಪಿಗಳಿಂದ ರೂಪಾಯಿ  35049 ನಗದು, 6 ಮೊಬೈಲ್‌, 1 ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ […]