ಅಕ್ಟೊಬರ್ 2 : ಕಂಕನಾಡಿ ಗರಡಿ ಕ್ಷೇತ್ರದಲ್ಲಿ ಗಾಂಧಿ 150 ಚಿಂತನಾ ಯಾತ್ರೆ ಉದ್ಘಾಟನೆ

Tuesday, October 1st, 2019
chinthana yatre

ಮಂಗಳೂರು  : ನಮ್ಮ ರಾಷ್ಟ್ರಪಿತ, ಬ್ರಿಟಿಷರೆದುರು ಭರತಖಂಡವನ್ನು ಒಗ್ಗೂಡಿಸಿದ ಸ್ವಾತಂತ್ರ್ಯ ಸಂಗ್ರಾಮದ ಅಗ್ರಗಣ್ಯ ನೇತಾರ, ಮಹಾತ್ಮಾ ಗಾಂಧೀಜಿಯವರ 150ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಮಹಾತ್ಮನ ಬದುಕು ಮತ್ತು ಚಿಂತನೆಗಳನ್ನು ಇಂದಿನ ಪೀಳಿಗೆಗೆ, ಅದರಲ್ಲೂ ಮಕ್ಕಳಿಗೆ ಮತ್ತು ಯುವಜನರಿಗೆ ಮನದಟ್ಟು ಮಾಡುವ ಉದ್ದೇಶದಿಂದ ಮಂಗಳೂರಿನ ಹಲವು ಪ್ರಗತಿಪರ, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗಿಯಾದ ಪರಂಪರೆಯುಳ್ಳ, ದೇಶಪ್ರೇಮಿ ಸಂಘಟನೆಗಳು ಗಾಂಧಿ 150 ಚಿಂತನಾ ಯಾತ್ರೆ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿವೆ. ಅಕ್ಟೊಬರ್ 2ರ ಗಾಂಧಿ ಜಯಂತಿಯಿಂದ ಆರಂಭಿಸಿ ಜನವರಿ 30ರ ಗಾಂಧಿ ಹುತಾತ್ಮರಾದ […]

ಗಾಂಧಿ- 150 ಅಭಿಯಾನಕ್ಕೆ ಮಂಗಳೂರಿನಲ್ಲಿ ಸ್ವಾಗತ

Monday, October 15th, 2018
gandhi 150

ಮಂಗಳೂರು : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆಯ 150ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗಾಂಧಿ ಅಭಿಯಾನ- 150 ಜಾಥಾ ಸೋಮವಾರ ಮಂಗಳೂರಿಗೆ ಆಗಮಿಸಿತು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಏರ್ಪಟ್ಟ ಕಾರ್ಯಕ್ರಮದಲ್ಲಿ ಜಿಲ್ಲಾಡಳಿತದ ಪರವಾಗಿ ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತರಾದ ಪ್ರಮೀಳಾ ಅವರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಗಾಂಧೀಜಿಯವರ ಸಂದೇಶಗಳು ಸರ್ವಕಾಲಕ್ಕೂ ಸಲ್ಲುವಂತದ್ದಾಗಿದೆ. ಈ ನಿಟ್ಟಿನಲ್ಲಿ ಇದನ್ನು ನಿರಂತರವಾಗಿ ಪಾಲಿಸುತ್ತಾ ಬರಬೇಕು ಎಂದು ಹೇಳಿದರು. ದಕ್ಷಿಣ […]